AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾ ಬಳಿ ಇರೋದು ಒಂದು ಪಂಚೆ, ಒಂದು ಶರ್ಟ್ ಅಷ್ಟೆ, ನಾಮಪತ್ರ ಸಲ್ಲಿಕೆಗೆ ದೇವೇಗೌಡ ಬರುತ್ತಾರೆ ಎಂದ ರೇವಣ್ಣ

ಜೆಡಿಎಸ್​ ಸೇರ್ಪಡೆ ಸಂದರ್ಭ ಮಾತನಾಡಿದ ದತ್ತಾ, ಹೆಚ್​ಡಿ ದೇವೇಗೌಡರನ್ನು ಹಾಡಿಹೊಗಳಿದರು.

ಗಣಪತಿ ಶರ್ಮಾ
|

Updated on:Apr 13, 2023 | 10:41 PM

Share

ಚಿಕ್ಕಮಗಳೂರು:  ವೈಎಸ್​ವಿ ದತ್ತಾ (YSV Datta) ಬಳಿ ಇರುವುದು ಒಂದು ಪಂಚೆ, ಒಂದು ಶರ್ಟ್ ಅಷ್ಟೆ. ನಾನೇ ಸಚಿವ ಆದಾಗ ಕಾರು ಕೊಡಿಸುತ್ತೇನೆ ಎಂದೆ. ಆದರೆ, ಬೇಡ ಸರ್, ನಂಗೇ ಆಟೋ ಸಾಕು ಅಂದಿದ್ದರು ಎಂದು ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ನೆನಪಿಸಿಕೊಂಡರು. ದತ್ತಾ ಅವರನ್ನು ಮರಳಿ ಜೆಡಿಎಸ್​​ಗೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಅವರು, 18ನೇ ತಾರೀಖು ದತ್ತ ನಾಪಪತ್ರ ಸಲ್ಲಿಕೆ ಮಾಡಲಿದ್ದಾರೆ. ಎಷ್ಟೇ ಕಷ್ಟ ಆದರೂ ದೇವೆಗೌಡರು ಬರುತ್ತಾರೆ, ಬಂದೇ ಬರುತ್ತಾರೆ. ನಾನು ಬದುಕಿರುವವರೆಗೆ ದತ್ತನ ಕೈ ಬಿಡಬಾರದು ಎಂದು ಹೇಳಿದ್ದಾರೆ ಎಂಬುದಾಗಿ ರೇವಣ್ಣ ಹೇಳಿದರು.

ನೀವು ಬೇರೆ ಯೋಚನೆ ಮಾಡಬೇಡಿ. ದೇವೇಗೌಡರ ಮಾತನ್ನು ನಾನು, ದತ್ತಾ, ನೀವು ಎಲ್ಲರೂ ಪಾಲಿಸಬೇಕು. ದತ್ತಾರನ್ನು ಶಾಸಕ ಮಾಡಕೇಬೇಕು ಅಂತ ದೇವೇಗೌಡರು ಹೇಳಿದ್ದಾರೆ. ನಮಗೆ ಹೊಳೆನರಸೀಪುರ, ಕಡೂರು ಬೇರೆ-ಬೇರೆ ಅಲ್ಲ. ನಾನು ದತ್ತಾ ಜೊತೆ ಇರುತ್ತೇನೆ ಎಂದು ಕಡೂರಿನ ಯಗಟಿ ಗ್ರಾಮದ ದತ್ತಾ ಅವರ ಮನೆಯಲ್ಲಿ ರೇವಣ್ಣ ಹೇಳಿದ್ದಾರೆ.

ದೇವೇಗೌಡರನ್ನು ಹಾಡಿಹೊಗಳಿದ ದತ್ತಾ

ಜೆಡಿಎಸ್​ ಸೇರ್ಪಡೆ ಸಂದರ್ಭ ಮಾತನಾಡಿದ ದತ್ತಾ, ಹೆಚ್​ಡಿ ದೇವೇಗೌಡರನ್ನು ಹಾಡಿಹೊಗಳಿದರು. ದೇವೇಗೌಡರು ಸದಾ ಚಟುವಟಿಕೆಯಿಂದ ಇರುವ ವ್ಯಕ್ತಿ. 24 ಗಂಟೆಯೂ ಏನಾದರೊಂದು ಯೋಚನೆ ಮಾಡುತ್ತಿರುತ್ತಾರೆ. ರಾತ್ರಿ 3 ಗಂಟೆಗೆ ದೂರವಾಣಿ ಕರೆ ಮಾಡಿದ ದೇವೇಗೌಡರು, ಮನೆಗೆ ಬರುವಂತೆ ಕರೆದರು. ಇಷ್ಟೊತ್ತಿನಲ್ಲಿ ಹೇಗೆ ಬರಲಿ ಎಂದೆ. ಆಟೋ ಮಾಡಿಕೊಂಡು ಬಾರೋ ಎಂದರು. ಹಾಗೆ ಅವರ ಮನೆಗೆ ತೆರಳಿದೆ. ಅವರ ಜತೆ ಕುಳಿತು ಮಾತನಾಡಿದೆ. ‘ನಾನು ಮಲಗಿಕೊಂಡಿದ್ದೆ, ಏನೋ ಒಂದು ಯೋಚನೆ ಬಂತು. ನಿನ್ನ ಜತೆ ಮಾತನಾಡಬೇಕು ಎನಿಸಿತು’ ಎಂದರು. ಇದು ನನ್ನ ಮತ್ತು ದೇವೇಗೌಡರ ನಡುವಣ ಸಂಬಂಧ ಎಂದು ದತ್ತಾ ಹೇಳಿದರು.

ಇದನ್ನೂ ಓದಿ: YSV Datta: ಮತ್ತೆ ಜೆಡಿಎಸ್ ಸೇರಿದ ವೈಎಸ್​ವಿ ದತ್ತಾ; ಕಡೂರು ಟಿಕೆಟ್ ಫಿಕ್ಸ್​

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿ ಚುನಾವಣೆಗೆ ಟಿಕೆಟ್​​ ಸಿಗದೆ ನಿರಾಶರಾಗಿದ್ದ ವೈಎಸ್​ವಿ ದತ್ತಾ ಗುರುವಾರ ಮತ್ತೆ ಜೆಡಿಎಸ್​​ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕ ಹೆಚ್​ಡಿ ರೇವಣ್ಣ ಗುರುವಾರ ಸಂಜೆ ಘೋಷಣೆ ಮಾಡಿದ್ದಾರೆ.

ಈ ಬೆಳವಣಿಗೆಯಿಂದ ಈಗಾಗಲೇ ಜೆಡಿಎಸ್​ನಿಂದ ಕಡೂರು ಕ್ಷೇತ್ರದ ಟಿಕೆಟ್​​ ಪಡೆದಿರುವ ಸಿ.ಎಂ. ಧನಂಜಯ್ ನಿರಾಶರಾಗಿದ್ದಾರೆ. ದತ್ತಾ ಜೆಡಿಎಸ್ ಸೇರ್ಪಡೆ ನಂತರ ಸುದ್ದಿಗೋಷ್ಠಿ ನಡೆಸಿದ ಧನಂಜಯ್, ಒತ್ತಡಕ್ಕೆ ಒಳಗಾಗಿ ದತ್ತಾಗೆ ಟಿಕೆಟ್ ಘೋಷಿಸಿದ್ದಾರೆ, 2-3 ದಿನದಲ್ಲಿ ಸ್ಪಷ್ಟ ಮಾಹಿತಿ ಸಿಗಲಿದೆ. ನಾಯಕರು ಚರ್ಚಿಸಿ ಒಳ್ಳೆಯ ನಿರ್ಧಾರಕ್ಕೆ ಬರುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:40 pm, Thu, 13 April 23

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ