AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​.ಡಿ ರೇವಣ್ಣ ಆಸ್ತಿ ವಿವರ ಬಹಿರಂಗ: ದೊಡ್ಡಗೌಡರ ಸೊಸೆ ಭವಾನಿ ಬಳಿ ಕೆಜಿಗಟ್ಟಲೆ ಬಂಗಾರ, ಬೆಳ್ಳಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆ ಸೋಮವಾರ ಹೊಳೆನರಸೀಪುರ ಜೆಡಿಎಸ್ ಅಭ್ಯರ್ಥಿಯಾಗಿ‌ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ.

ಹೆಚ್​.ಡಿ ರೇವಣ್ಣ ಆಸ್ತಿ ವಿವರ ಬಹಿರಂಗ: ದೊಡ್ಡಗೌಡರ ಸೊಸೆ ಭವಾನಿ ಬಳಿ ಕೆಜಿಗಟ್ಟಲೆ ಬಂಗಾರ, ಬೆಳ್ಳಿ
ಭವಾನಿ ರೇವಣ್ಣ, ಹೆಚ್​.ಡಿ ರೇವಣ್ಣ
ಗಂಗಾಧರ​ ಬ. ಸಾಬೋಜಿ
|

Updated on:Apr 17, 2023 | 8:45 PM

Share

ಹಾಸನ: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆ ಸೋಮವಾರ ಹೊಳೆನರಸೀಪುರ ಜೆಡಿಎಸ್ ಅಭ್ಯರ್ಥಿಯಾಗಿ‌ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೇವಣ್ಣ ಫ್ಯಾಮಿಲಿ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿರುವ ಲಕ್ಷ್ಮಿ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ರೇವಣ್ಣಗೆ ಪತ್ನಿ ಭವಾನಿ ರೇವಣ್ಣ, ಪುತ್ರರಾದ ಪ್ರಜ್ವಲ್ ಹಾಗೂ ಸೂರಜ್ ಸಾಥ್​ ನೀಡಿದರು. ನಾಮಪತ್ರ ಸಲ್ಲಿಸಿರುವ ಹಿನ್ನೆಲೆ ಹೆಚ್​.ಡಿ. ರೇವಣ್ಣ ಆಸ್ತಿ ವಿವರ ಬಹಿರಂಗವಾಗಿದ್ದು, ಕೋಟಿ ಕೋಟಿ ಆಸ್ತಿಯನ್ನು ರೇವಣ್ಣ ಭವಾನಿ ದಂಪತಿ ಹೊಂದಿದ್ದಾರೆ.

ರೇವಣ್ಣ ಭವಾನಿ ದಂಪತಿ ಹೊಂದಿರುವ ಆಸ್ತಿ ವಿವರ ಹೀಗಿದೆ

  1. ಒಟ್ಟು ಆಸ್ತಿ: 43 ಕೋಟಿ,37 ಲಕ್ಷದ,56 ಸಾವಿರದ 441 ರೂ ಮೌಲ್ಯದ ಆಸ್ತಿಯನ್ನು ರೇವಣ್ಣ ಹೊಂದಿದ್ದಾರೆ.
  2. ಘೋಷಣೆ ಮಾಡಿರುವ ಆಸ್ತಿ: 38 ಕೋಟಿ,25 ಲಕ್ಷದ,22 ಸಾವಿರದ 777 ರೂ.
  3. ಚರಾಸ್ತಿ: ಸುಮಾರು 7.36 ಕೋಟಿ ರೂ.
  4. ಸ್ಥಿರಾಸ್ತಿ: 36.01 ಕೋಟಿ ರೂ.
  5. ಚರಾಸ್ತಿ (ಭವಾನಿ ರೇವಣ್ಣ ಬಳಿ): 8.66 ಕೋಟಿ ರೂ. ( ಪತಿಗಿಂತ ಒಂದು ಕೋಟಿ ಹೆಚ್ಚಿನ ಮೌಲ್ಯದ ಚರಾಸ್ಥಿ ಹೊಂದಿದ್ದಾರೆ.)
  6. ಸ್ಥಿರಾಸ್ತಿ (ಭವಾನಿ ರೇವಣ್ಣ ಬಳಿ): 29.58 ಕೋಟಿ ರೂ.
  7. ಚಿನ್ನಾಭರಣ (ಭವಾನಿ ರೇವಣ್ಣ ಬಳಿ): ಒಟ್ಟು ಸುಮಾರು 2.20 ಕೋಟಿ ರೂ. (46 ಕೆಜಿ ಬೆಳ್ಳಿ, ಸುಮಾರು 3 ಕೆಜಿ ಚಿನ್ನ, 25 ಕ್ಯಾರೆಟ್ ವಜ್ರದ ಆಭರಣ ಸೇರಿದಂತೆ)
  8. ಚಿನ್ನಾಭರಣ (ರೇವಣ್ಣ ಬಳಿ): 320 ಗ್ರಾಂ
  9. ಸಾಲ: ಕೋಟಿ ಕೋಟಿ ಆಸ್ತಿ ಇದ್ದರು ರೇವಣ್ಣ 9 ಕೋಟಿ ರೂ ಸಾಲ ಮಾಡಿದ್ದಾರೆ. (ತಾಯಿ ಚನ್ನಮ್ಮರಿಂದ 60 ಲಕ್ಷ, ತಂದೆ ದೇವೇಗೌಡರಿಂದ 31 ಲಕ್ಷ, ಸಹೋದರ ರಮೇಶ್​ರಿಂದ 4 ಕೋಟಿ ಮತ್ತು ಮನೆ ನಿರ್ಮಾಣಕ್ಕೆ 2 ಕೋಟಿ ಸಾಲ ಮಾಡಿದ್ದಾರೆ)
  10. ಸಾಲ: ಭವಾನಿ ರೇವಣ್ಣ ಕೂಡ 5.28 ಕೋಟಿ ರೂ. ಸಾಲಗಾರ್ತಿ.

ಇದನ್ನೂ ಓದಿ: Hassan: ಜೆಡಿಎಸ್ ಟಿಕೆಟ್ ಫೈಟ್; ಅಭ್ಯರ್ಥಿ ಘೋಷಣೆಗೂ ಮುನ್ನವೇ ಸ್ವರೂಪ್​ಗೆ ಬಿ ಫಾರಂ ನೀಡಿದ ಕುಮಾರಸ್ವಾಮಿ

ಹಾಸನ ಕ್ಷೇತ್ರದ ಟಿಕೆಟ್ ಅನ್ನು ಭವಾನಿ ರೇವಣ್ಣ ಅವರಿಗೆ ಕೊಡದಿದ್ದರೆ ತಮಗೂ ಹೊಳೆನರಸೀಪುರ ಕ್ಷೇತ್ರದ ಟಿಕೆಟ್ ಬೇಡ ಎಂದು ಹೆಚ್​ಡಿ ರೇವಣ್ಣ ಇತ್ತೀಚೆಗೆ ಪಟ್ಟುಹಿಡಿದಿದ್ದರು. ಮತ್ತೊಂದೆಡೆ, ಸಾಮಾನ್ಯ ಕಾರ್ಯಕರ್ತನಿಗೇ ಹಾಸನದ ಟಿಕೆಟ್ ನೀಡುತ್ತೇನೆ ಎಂಬ ನಿಲುವಿಗೆ ಬದ್ಧ ಎಂದು ಹೆಚ್​ಡಿ ಕುಮಾರಸ್ವಾಮಿ ಪುನರುಚ್ಚರಿಸಿದ್ದರು. ಇದೀಗ ಸ್ವರೂಪ್​ಗೆ ಬಿ ಫಾರಂ ನೀಡಿರುವುದು ಕುತೂಹಲ ಹೆಚ್ಚಿಸಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 pm, Mon, 17 April 23

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ