AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​.ಡಿ ರೇವಣ್ಣ ಆಸ್ತಿ ವಿವರ ಬಹಿರಂಗ: ದೊಡ್ಡಗೌಡರ ಸೊಸೆ ಭವಾನಿ ಬಳಿ ಕೆಜಿಗಟ್ಟಲೆ ಬಂಗಾರ, ಬೆಳ್ಳಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆ ಸೋಮವಾರ ಹೊಳೆನರಸೀಪುರ ಜೆಡಿಎಸ್ ಅಭ್ಯರ್ಥಿಯಾಗಿ‌ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ.

ಹೆಚ್​.ಡಿ ರೇವಣ್ಣ ಆಸ್ತಿ ವಿವರ ಬಹಿರಂಗ: ದೊಡ್ಡಗೌಡರ ಸೊಸೆ ಭವಾನಿ ಬಳಿ ಕೆಜಿಗಟ್ಟಲೆ ಬಂಗಾರ, ಬೆಳ್ಳಿ
ಭವಾನಿ ರೇವಣ್ಣ, ಹೆಚ್​.ಡಿ ರೇವಣ್ಣ
ಗಂಗಾಧರ​ ಬ. ಸಾಬೋಜಿ
|

Updated on:Apr 17, 2023 | 8:45 PM

Share

ಹಾಸನ: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆ ಸೋಮವಾರ ಹೊಳೆನರಸೀಪುರ ಜೆಡಿಎಸ್ ಅಭ್ಯರ್ಥಿಯಾಗಿ‌ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೇವಣ್ಣ ಫ್ಯಾಮಿಲಿ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿರುವ ಲಕ್ಷ್ಮಿ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ರೇವಣ್ಣಗೆ ಪತ್ನಿ ಭವಾನಿ ರೇವಣ್ಣ, ಪುತ್ರರಾದ ಪ್ರಜ್ವಲ್ ಹಾಗೂ ಸೂರಜ್ ಸಾಥ್​ ನೀಡಿದರು. ನಾಮಪತ್ರ ಸಲ್ಲಿಸಿರುವ ಹಿನ್ನೆಲೆ ಹೆಚ್​.ಡಿ. ರೇವಣ್ಣ ಆಸ್ತಿ ವಿವರ ಬಹಿರಂಗವಾಗಿದ್ದು, ಕೋಟಿ ಕೋಟಿ ಆಸ್ತಿಯನ್ನು ರೇವಣ್ಣ ಭವಾನಿ ದಂಪತಿ ಹೊಂದಿದ್ದಾರೆ.

ರೇವಣ್ಣ ಭವಾನಿ ದಂಪತಿ ಹೊಂದಿರುವ ಆಸ್ತಿ ವಿವರ ಹೀಗಿದೆ

  1. ಒಟ್ಟು ಆಸ್ತಿ: 43 ಕೋಟಿ,37 ಲಕ್ಷದ,56 ಸಾವಿರದ 441 ರೂ ಮೌಲ್ಯದ ಆಸ್ತಿಯನ್ನು ರೇವಣ್ಣ ಹೊಂದಿದ್ದಾರೆ.
  2. ಘೋಷಣೆ ಮಾಡಿರುವ ಆಸ್ತಿ: 38 ಕೋಟಿ,25 ಲಕ್ಷದ,22 ಸಾವಿರದ 777 ರೂ.
  3. ಚರಾಸ್ತಿ: ಸುಮಾರು 7.36 ಕೋಟಿ ರೂ.
  4. ಸ್ಥಿರಾಸ್ತಿ: 36.01 ಕೋಟಿ ರೂ.
  5. ಚರಾಸ್ತಿ (ಭವಾನಿ ರೇವಣ್ಣ ಬಳಿ): 8.66 ಕೋಟಿ ರೂ. ( ಪತಿಗಿಂತ ಒಂದು ಕೋಟಿ ಹೆಚ್ಚಿನ ಮೌಲ್ಯದ ಚರಾಸ್ಥಿ ಹೊಂದಿದ್ದಾರೆ.)
  6. ಸ್ಥಿರಾಸ್ತಿ (ಭವಾನಿ ರೇವಣ್ಣ ಬಳಿ): 29.58 ಕೋಟಿ ರೂ.
  7. ಚಿನ್ನಾಭರಣ (ಭವಾನಿ ರೇವಣ್ಣ ಬಳಿ): ಒಟ್ಟು ಸುಮಾರು 2.20 ಕೋಟಿ ರೂ. (46 ಕೆಜಿ ಬೆಳ್ಳಿ, ಸುಮಾರು 3 ಕೆಜಿ ಚಿನ್ನ, 25 ಕ್ಯಾರೆಟ್ ವಜ್ರದ ಆಭರಣ ಸೇರಿದಂತೆ)
  8. ಚಿನ್ನಾಭರಣ (ರೇವಣ್ಣ ಬಳಿ): 320 ಗ್ರಾಂ
  9. ಸಾಲ: ಕೋಟಿ ಕೋಟಿ ಆಸ್ತಿ ಇದ್ದರು ರೇವಣ್ಣ 9 ಕೋಟಿ ರೂ ಸಾಲ ಮಾಡಿದ್ದಾರೆ. (ತಾಯಿ ಚನ್ನಮ್ಮರಿಂದ 60 ಲಕ್ಷ, ತಂದೆ ದೇವೇಗೌಡರಿಂದ 31 ಲಕ್ಷ, ಸಹೋದರ ರಮೇಶ್​ರಿಂದ 4 ಕೋಟಿ ಮತ್ತು ಮನೆ ನಿರ್ಮಾಣಕ್ಕೆ 2 ಕೋಟಿ ಸಾಲ ಮಾಡಿದ್ದಾರೆ)
  10. ಸಾಲ: ಭವಾನಿ ರೇವಣ್ಣ ಕೂಡ 5.28 ಕೋಟಿ ರೂ. ಸಾಲಗಾರ್ತಿ.

ಇದನ್ನೂ ಓದಿ: Hassan: ಜೆಡಿಎಸ್ ಟಿಕೆಟ್ ಫೈಟ್; ಅಭ್ಯರ್ಥಿ ಘೋಷಣೆಗೂ ಮುನ್ನವೇ ಸ್ವರೂಪ್​ಗೆ ಬಿ ಫಾರಂ ನೀಡಿದ ಕುಮಾರಸ್ವಾಮಿ

ಹಾಸನ ಕ್ಷೇತ್ರದ ಟಿಕೆಟ್ ಅನ್ನು ಭವಾನಿ ರೇವಣ್ಣ ಅವರಿಗೆ ಕೊಡದಿದ್ದರೆ ತಮಗೂ ಹೊಳೆನರಸೀಪುರ ಕ್ಷೇತ್ರದ ಟಿಕೆಟ್ ಬೇಡ ಎಂದು ಹೆಚ್​ಡಿ ರೇವಣ್ಣ ಇತ್ತೀಚೆಗೆ ಪಟ್ಟುಹಿಡಿದಿದ್ದರು. ಮತ್ತೊಂದೆಡೆ, ಸಾಮಾನ್ಯ ಕಾರ್ಯಕರ್ತನಿಗೇ ಹಾಸನದ ಟಿಕೆಟ್ ನೀಡುತ್ತೇನೆ ಎಂಬ ನಿಲುವಿಗೆ ಬದ್ಧ ಎಂದು ಹೆಚ್​ಡಿ ಕುಮಾರಸ್ವಾಮಿ ಪುನರುಚ್ಚರಿಸಿದ್ದರು. ಇದೀಗ ಸ್ವರೂಪ್​ಗೆ ಬಿ ಫಾರಂ ನೀಡಿರುವುದು ಕುತೂಹಲ ಹೆಚ್ಚಿಸಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 pm, Mon, 17 April 23

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!