
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತದಾನಕ್ಕೆ 9 ದಿನ ಮಾತ್ರ ಬಾಕಿಯಿದೆ. ಇದರ ನಡುವೆಯೇ ಇಂದು (ಸೋಮವಾರ) ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು(BJP Manifesto) ಬಿಡುಗಡೆ ಮಾಡಿದೆ. ಪ್ರಜಾ ಪ್ರಣಾಳಿಕೆ ಹೆಸರಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಡುಗಡೆ ಮಾಡಿದರು. ವಿವಿಧ ಕ್ಷೇತ್ರಗಳ ಗಣ್ಯರ ಸಲಹೆ ಪಡೆದು ಈ ಪ್ರಣಾಳಿಕೆ ತಯಾರು ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಹೆಸರಿನಲ್ಲಿ ನೀಡಿರುವ ಭರವಸೆಗಳ ಬಗ್ಗೆ ಸಾಕಷ್ಟು ಟೀಕೆಗಳನ್ನು ಮಾಡಿರುವ ಬಿಜೆಪಿಯು ಇದೀಗ ಮತದಾರರನ್ನು ಓಲೈಸಲು ಭರಪೂರ ಯೋಜನೆಗಳನ್ನು ಘೋಷಿಸಿದೆ. ಇನ್ನು ಪ್ರಣಾಳಿಕೆಯಲ್ಲಿ ಬಿಜೆಪಿ ಏನೆಲ್ಲ ಭರವಸೆಗಳನ್ನು ನೀಡಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.
Published On - 11:39 am, Mon, 1 May 23