Karnataka Election 2023: ವೋಟರ್ ಐಡಿ ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ?

Karnataka Elections: ವೋಟರ್ ಐಡಿಗೆ ಸಲ್ಲಿಸಿರುವ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ, ದೂರವಾಣಿ ಕರೆ ಮೂಲಕ ಅಥವಾ ಎಸ್​​ಎಂಎಸ್ ಮೂಲಕ ಟ್ರ್ಯಾಕ್ ಮಾಡಬಹುದಾಗಿದೆ. ಇದು ಹೇಗೆಂಬ ಮಾಹಿತಿ ಇಲ್ಲಿದೆ.

Karnataka Election 2023: ವೋಟರ್ ಐಡಿ ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ?
ವೋಟರ್ ಐಡಿ (ಸಾಂದರ್ಭಿಕ ಚಿತ್ರ)
Follow us
| Updated By: Digi Tech Desk

Updated on:May 09, 2023 | 11:36 AM

ದೇಶದಲ್ಲಿ 18 ವರ್ಷ ವಯಸ್ಸು ಪೂರ್ಣಗೊಂಡವರು ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಮತದಾನಕ್ಕೆ (Voting)  ಅರ್ಹರಾಗಿದ್ದಾರೆ. ಇಂಥವರು ತಮ್ಮ ರಾಜ್ಯ ಅಥವಾ ಪ್ರದೇಶದಲ್ಲಿ ಚುನಾವಣೆ(Election) ಸಮಯದಲ್ಲಿ ಮತ ಚಲಾಯಿಸಲು ಮತದಾರರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮತದಾರರ ಗುರುತಿನ ಚೀಟಿಯು (Voter ID) ನಿಮ್ಮ ಮತವನ್ನು ಚಲಾಯಿಸುವ ಮೊದಲು ಪರಿಶೀಲಿಸಲಾಗುವ ಪ್ರಮುಖ ಗುರುತಿನ ದಾಖಲೆಯಾಗಿದೆ. ನ್ಯಾಷನಲ್ ವೋಟರ್ಸ್ ಸರ್ವೀಸ್ ಪೋರ್ಟಲ್‌ಗೆ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಹೀಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬಹುದು ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ಕೇಂದ್ರ ಚುನಾವಣಾ ಆಯೋಗವು ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತದೆ ಮತ್ತು ವಿವರಗಳಿಗೆ ಸಂಬಂಧಿಸಿದಂತೆ ಇಮೇಲ್ ಸಂದೇಶ ಕಳುಹಿಸುತ್ತದೆ. ಹೆಚ್ಚಿನ ವಿವರ ತಿಳಿಯುವುದಕ್ಕಾಗಿ ರೆಫರೆನ್ಸ್ ಐಡಿಯನ್ನು ನೆನಪು ಇಟ್ಟುಕೊಳ್ಳಬೇಕಾಗುತ್ತದೆ. ನೀವು ಅದನ್ನು ಆನ್‌ಲೈನ್‌ನಲ್ಲಿ, ದೂರವಾಣಿ ಕರೆ ಮೂಲಕ ಅಥವಾ ಎಸ್​​ಎಂಎಸ್ ಮೂಲಕ ಟ್ರ್ಯಾಕ್ ಮಾಡಬಹುದಾಗಿದೆ. ಇದು ಹೇಗೆಂಬ ಮಾಹಿತಿ ಇಲ್ಲಿದೆ.

  • ಅರ್ಜಿಯ ಸ್ಥಿತಿ ತಿಳಿಯುವುದಕ್ಕಾಗಿ ನೀವು ನ್ಯಾಷನಲ್ ವೋಟರ್ಸ್ ಸರ್ವೀಸ್ ಪೋರ್ಟಲ್‌ಗೆ ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
  • ನಂತರ ‘Application status’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ರೆಫರೆನ್ಸ್ ಐಡಿ ನಮೂದಿಸಿ ‘Track Application status’ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಅರ್ಜಿಯ ಸ್ಥಿತಿ ತಿಳಿಯುತ್ತದೆ.

ದೂರವಾಣಿ ಕರೆ ಮೂಲಕ ಅರ್ಜಿಯ ಸ್ಥಿತಿ ತಿಳಿಯುವುದು ಹೇಗೆ?

  • ಚುನಾವಣಾ ಆಯೋಗ್ ಕಾಲಿಂಗ್ ಸರ್ವೀಸ್ ಬಳಸಿಕೊಂಡು ನೀವು ಅರ್ಜಿಯ ಸ್ಥಿತಿ ತಿಳಿಯಬಹುದಾಗಿದೆ.
  • ಇದಕ್ಕಾಗಿ ನೀವು ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬೇಕು.
  • ಕರೆಯಲ್ಲಿ ಬರುವ ಸೂಚನೆಗಳನ್ನು ಅನುಸರಿಸಿ, ರೆಫರೆನ್ಸ್ ಐಡಿ ಮೂಲಕ ನೀವು ಅರ್ಜಿಯ ಸ್ಥಿತಿ ತಿಳಿಯಬಹುದಾಗಿದೆ.

ಎಸ್​ಎಂಎಸ್ ಮೂಲಕ ಪರಿಶೀಲಿಸುವುದು ಹೇಗೆ?

ವೋಟರ್ ಐಡಿ ಕಾರ್ಡ್ ಯಶಸ್ವಿಯಾಗಿ ನೋಂದಾವಣೆಯಾದಾಗ ಚುನಾವಣಾ ಆಯೋಗವು ಸಾಮಾನ್ಯವಾಗಿ ಎಸ್​ಎಂಎಸ್ ಸಂದೇಶ ಕಳುಹಿಸುತ್ತದೆ. ಅರ್ಜಿಯ ಸ್ಥಿತಿಯ ಬಗ್ಗೆಯೂ ಎಸ್​ಎಂಎಸ್ ಕಳುಹಿಸುತ್ತದೆ. ಆದರೆ, ಈ ಸೇವೆ ಕೆಲವು ರಾಜ್ಯಗಳಲ್ಲಿ ಮಾತ್ರ ಸದ್ಯ ಲಭ್ಯವಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Wed, 3 May 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು