AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election 2023: ವೋಟರ್ ಐಡಿ ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ?

Karnataka Elections: ವೋಟರ್ ಐಡಿಗೆ ಸಲ್ಲಿಸಿರುವ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ, ದೂರವಾಣಿ ಕರೆ ಮೂಲಕ ಅಥವಾ ಎಸ್​​ಎಂಎಸ್ ಮೂಲಕ ಟ್ರ್ಯಾಕ್ ಮಾಡಬಹುದಾಗಿದೆ. ಇದು ಹೇಗೆಂಬ ಮಾಹಿತಿ ಇಲ್ಲಿದೆ.

Karnataka Election 2023: ವೋಟರ್ ಐಡಿ ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ?
ವೋಟರ್ ಐಡಿ (ಸಾಂದರ್ಭಿಕ ಚಿತ್ರ)
Ganapathi Sharma
| Updated By: Digi Tech Desk|

Updated on:May 09, 2023 | 11:36 AM

Share

ದೇಶದಲ್ಲಿ 18 ವರ್ಷ ವಯಸ್ಸು ಪೂರ್ಣಗೊಂಡವರು ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಮತದಾನಕ್ಕೆ (Voting)  ಅರ್ಹರಾಗಿದ್ದಾರೆ. ಇಂಥವರು ತಮ್ಮ ರಾಜ್ಯ ಅಥವಾ ಪ್ರದೇಶದಲ್ಲಿ ಚುನಾವಣೆ(Election) ಸಮಯದಲ್ಲಿ ಮತ ಚಲಾಯಿಸಲು ಮತದಾರರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮತದಾರರ ಗುರುತಿನ ಚೀಟಿಯು (Voter ID) ನಿಮ್ಮ ಮತವನ್ನು ಚಲಾಯಿಸುವ ಮೊದಲು ಪರಿಶೀಲಿಸಲಾಗುವ ಪ್ರಮುಖ ಗುರುತಿನ ದಾಖಲೆಯಾಗಿದೆ. ನ್ಯಾಷನಲ್ ವೋಟರ್ಸ್ ಸರ್ವೀಸ್ ಪೋರ್ಟಲ್‌ಗೆ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಹೀಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬಹುದು ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ಕೇಂದ್ರ ಚುನಾವಣಾ ಆಯೋಗವು ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತದೆ ಮತ್ತು ವಿವರಗಳಿಗೆ ಸಂಬಂಧಿಸಿದಂತೆ ಇಮೇಲ್ ಸಂದೇಶ ಕಳುಹಿಸುತ್ತದೆ. ಹೆಚ್ಚಿನ ವಿವರ ತಿಳಿಯುವುದಕ್ಕಾಗಿ ರೆಫರೆನ್ಸ್ ಐಡಿಯನ್ನು ನೆನಪು ಇಟ್ಟುಕೊಳ್ಳಬೇಕಾಗುತ್ತದೆ. ನೀವು ಅದನ್ನು ಆನ್‌ಲೈನ್‌ನಲ್ಲಿ, ದೂರವಾಣಿ ಕರೆ ಮೂಲಕ ಅಥವಾ ಎಸ್​​ಎಂಎಸ್ ಮೂಲಕ ಟ್ರ್ಯಾಕ್ ಮಾಡಬಹುದಾಗಿದೆ. ಇದು ಹೇಗೆಂಬ ಮಾಹಿತಿ ಇಲ್ಲಿದೆ.

  • ಅರ್ಜಿಯ ಸ್ಥಿತಿ ತಿಳಿಯುವುದಕ್ಕಾಗಿ ನೀವು ನ್ಯಾಷನಲ್ ವೋಟರ್ಸ್ ಸರ್ವೀಸ್ ಪೋರ್ಟಲ್‌ಗೆ ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
  • ನಂತರ ‘Application status’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ರೆಫರೆನ್ಸ್ ಐಡಿ ನಮೂದಿಸಿ ‘Track Application status’ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಅರ್ಜಿಯ ಸ್ಥಿತಿ ತಿಳಿಯುತ್ತದೆ.

ದೂರವಾಣಿ ಕರೆ ಮೂಲಕ ಅರ್ಜಿಯ ಸ್ಥಿತಿ ತಿಳಿಯುವುದು ಹೇಗೆ?

  • ಚುನಾವಣಾ ಆಯೋಗ್ ಕಾಲಿಂಗ್ ಸರ್ವೀಸ್ ಬಳಸಿಕೊಂಡು ನೀವು ಅರ್ಜಿಯ ಸ್ಥಿತಿ ತಿಳಿಯಬಹುದಾಗಿದೆ.
  • ಇದಕ್ಕಾಗಿ ನೀವು ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬೇಕು.
  • ಕರೆಯಲ್ಲಿ ಬರುವ ಸೂಚನೆಗಳನ್ನು ಅನುಸರಿಸಿ, ರೆಫರೆನ್ಸ್ ಐಡಿ ಮೂಲಕ ನೀವು ಅರ್ಜಿಯ ಸ್ಥಿತಿ ತಿಳಿಯಬಹುದಾಗಿದೆ.

ಎಸ್​ಎಂಎಸ್ ಮೂಲಕ ಪರಿಶೀಲಿಸುವುದು ಹೇಗೆ?

ವೋಟರ್ ಐಡಿ ಕಾರ್ಡ್ ಯಶಸ್ವಿಯಾಗಿ ನೋಂದಾವಣೆಯಾದಾಗ ಚುನಾವಣಾ ಆಯೋಗವು ಸಾಮಾನ್ಯವಾಗಿ ಎಸ್​ಎಂಎಸ್ ಸಂದೇಶ ಕಳುಹಿಸುತ್ತದೆ. ಅರ್ಜಿಯ ಸ್ಥಿತಿಯ ಬಗ್ಗೆಯೂ ಎಸ್​ಎಂಎಸ್ ಕಳುಹಿಸುತ್ತದೆ. ಆದರೆ, ಈ ಸೇವೆ ಕೆಲವು ರಾಜ್ಯಗಳಲ್ಲಿ ಮಾತ್ರ ಸದ್ಯ ಲಭ್ಯವಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Wed, 3 May 23

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ