AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ-ಮಕ್ಕಳು, ಅಣ್ತಮ್ಮಂದಿರಿಗೆ ಟಿಕೆಟ್ ಸಿಗಲ್ಲ: ಗುಜರಾತ್​ ಮಾದರಿಯಲ್ಲಿ ಟಿಕೆಟ್ ಹಂಚಿಕೆ ಸುಳಿವು ಕೊಟ್ಟ ಯತ್ನಾಳ್

2023ರಲ್ಲಿ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಗುಜರಾತ್ ಮಾದರಿಯಲ್ಲೇ ಬಿಜೆಪಿ ಟಿಕೆಟ್ ಹಂಚಿಕೆ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ. ಇನ್ನು ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಿಷ್ಟು.

ಅಪ್ಪ-ಮಕ್ಕಳು, ಅಣ್ತಮ್ಮಂದಿರಿಗೆ ಟಿಕೆಟ್ ಸಿಗಲ್ಲ: ಗುಜರಾತ್​ ಮಾದರಿಯಲ್ಲಿ ಟಿಕೆಟ್ ಹಂಚಿಕೆ ಸುಳಿವು ಕೊಟ್ಟ ಯತ್ನಾಳ್
ಬಸನಗೌಡ ಪಾಟೀಲ ಯತ್ನಾಳ್, ಶಾಸಕರು
TV9 Web
| Edited By: |

Updated on: Dec 12, 2022 | 5:20 PM

Share

ಬೆಳಗಾವಿ: ಗುಜರಾತ್​ನಲ್ಲಿ (Gujarat) ಕಳೆದ ಬಾರಿ ಗೆದ್ದ ಕ್ಷೇತ್ರಗಳಲ್ಲಿ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಲಾಗಿತ್ತು. ಹೀಗಾಗಿ ಇದೇ ತಂತ್ರವನ್ನೂ ಕರ್ನಾಟಕದಲ್ಲಿ (Karnataka) ಅನುಸರಿಸಲು ಬಿಜೆಪಿ(BJP) ಮುಂದಾಗಿದೆಯಂತೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಗೆದ್ದಿರೋ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದ್ದು, ಹಲವರಿಗೆ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  (Basangouda Patil Yatnal) ಪ್ರತಿಕ್ರಿಯಿಸಿದ್ದು, ಅಪ್ಪ-ಮಕ್ಕಳು, ಅಣ್ಣತಮ್ಮಂದಿರಿಗೆ ಟಿಕೆಟ್ ಸಿಗಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲೂ ಗುಜರಾತ್ ಮಾದರಿ ಎಲೆಕ್ಷನ್: ಏನಿದು ಗುಜರಾತ್ ಮಾಡೆಲ್? ಹೇಗಿರುತ್ತೆ ಕಾರ್ಯ ತಂತ್ರ? ಇಲ್ಲಿದೆ ಮಾಹಿತಿ

ಬೆಳಗಾವಿಯಲ್ಲಿ ಇಂದು(ಡಿಸೆಂಬರ್ 12) ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಈ ಬಾರಿ ಕರ್ನಾಟಕದಲ್ಲಿ ಬಹಳಷ್ಟು ಬದಲಾವಣೆ ಮಾಡುತ್ತಾರೆ. ಯಾರ ಮೇಲೆ ಆರೋಪಗಳಿವೆ ಅಂತಹವರಿಗೆ ಟಿಕೆಟ್ ನೀಡಲ್ಲ. ಒಂದೇ ಕುಟುಂಬದಲ್ಲಿ ಎರಡ್ಮೂರು ಟಿಕೆಟ್​​ಗಳು ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಾರಿ ಗುಜರಾತ್ ಮಾದರಿಯಲ್ಲೇ ಮಾಡಲಿದ್ದು, ಬಹಳಷ್ಟು ಬದಲಾವಣೆ ಮಾಡ್ತಾರೆ. ಒಂದೇ ಕುಟುಂಬದಲ್ಲಿ ಜಾಕೆಟ್ ಹೊಲಿಸಿಕೊಂಡು ಕುಳಿತಿದ್ದಾರೆ. ಅಪ್ಪ-ಮಕ್ಕಳು, ಅಣ್ಣ-ತಮ್ಮರಿಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ. ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಬ್ರೇಕ್ ಬೀಳುತ್ತೆ. ಒಂದು ಕುಟುಂಬಕ್ಕೆ ಒಂದು ಟಿಕೆಟ್ ಸಿಗುತ್ತದೆ ಎಂದು ಹೇಳಿದರು.

ರಾಜ್ಯ ಬಿಜೆಪಿಗೆ ಸಮೀಕ್ಷೆಯಲ್ಲಿ ಹಿನ್ನಡೆ ಆಗ್ತಿದ್ಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, ಗುಜರಾತ್, ಯುಪಿಯಲ್ಲೂ ಹಾಗೆ ಹೇಳಿದ್ರೂ ಬಿಜೆಪಿ ಬಂತು. ಕರ್ನಾಟಕದಲ್ಲಿ ನರೇಂದ್ರ ಮೋದಿಯವರು ಪ್ರವಾಸ ಮಾಡುತ್ತಾರೆ. ಯಡಿಯೂರಪ್ಪರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರನ್ನಾಗಿ ಮಾಡಿದ್ದಾರೆ. ಸಿಎಂ ಬೊಮ್ಮಾಯಿ & ಬಿಎಸ್​ವೈ ಕ್ಷೇತ್ರ ಸಂಚಾರ ಮಾಡಬೇಕು ಎಂದು ಇದೇ ಮೊದಲ ಬಾರಿಗೆ ಬಿಎಸ್​ವೈ ವಿಚಾರದಲ್ಲಿ ಸಾಫ್ಟ್​ ಕಾರ್ನರ್ ತೋರಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ