AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ದೆಹಲಿ ಭೇಟಿ ರದ್ದು: ನನ್ನ ಜೊತೆ ಯಾವ ಶಾಸಕರೂ ಇಲ್ಲ ಎಂದ ಡಿಕೆ ಶಿವಕುಮಾರ್

ಕೊನೇ ಕ್ಷಣದಲ್ಲಿ ದೆಹಲಿ ಪ್ರವಾಸವನ್ನು ಡಿಕೆ ಶಿವಕುಮಾರ್ ಅವರು ರದ್ದುಗೊಳಿಸಿದ್ದಾರೆ. ನನ್ನ ಜೊತೆ ಯಾವ ಶಾಸಕರು ಇಲ್ಲ ಅಂತಾರೆ. ಹಾಗಾದ್ರೆ ಮುಖ್ಯಮಂತ್ರಿ ಸ್ಥಾನ ಕೈತಪ್ಪುವ ಸುಳಿವು ಕನಕಪುರದ ಬಂಡೆಗೆ ಸಿಕ್ತಾ?

ಡಿಕೆ ಶಿವಕುಮಾರ್ ದೆಹಲಿ ಭೇಟಿ ರದ್ದು: ನನ್ನ ಜೊತೆ ಯಾವ ಶಾಸಕರೂ ಇಲ್ಲ ಎಂದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ
Rakesh Nayak Manchi
|

Updated on:May 15, 2023 | 8:06 PM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿರುವ ನಡುವೆ ಡಿಕೆ ಶಿವಕುಮಾರ್ (DK Shivakumar) ಅವರು ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಹಾಗಾದ್ರೆ ಮುಖ್ಯಮಂತ್ರಿ ಸ್ಥಾನ ಕೈತಪ್ಪುವ ಸುಳಿವು ಕನಕಪುರದ ಬಂಡೆಗೆ ಸಿಕ್ಕಿತಾ? ಸಿದ್ದರಾಮಯ್ಯ (Siddaramaiah) ಅವರನ್ನು ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಿಸುತ್ತಾ? ಅಥವಾ ಬೇರೊಬ್ಬ ನಾಯಕನನ್ನು ಆಯ್ಕೆ ಮಾಡುತ್ತಾ? ಎಂಬ ಪ್ರಶ್ನೆ ಇದೀಗ ಎದ್ದಿದೆ.

ದೆಹಲಿ ಪ್ರವಾಸ ರದ್ದು ಬಗ್ಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್, ನನಗೆ ಆರೋಗ್ಯದ ಸಮಸ್ಯೆಯಿದೆ. ವಿಶ್ರಾಂತಿ ಪಡೆಯುವಂತೆ ವೈದ್ಯರು ಹೇಳಿದ್ದಾರೆ. ಹೊಟ್ಟೆ ನೋವಿದೆ, ವೈದ್ಯರು ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಹತಾಷೆಯ ಮಾತುಗಳನ್ನಾಡಿದ ಅವರು, ನನ್ನ ಜೊತೆ ಯಾವ ಶಾಸಕರು ಇಲ್ಲ, ನನಗೆ ಯಾರ ಬೆಂಬಲ ಬೇಡ. ಯಾರು ಯಾರನ್ನು ಬೇಕಾದರೂ ಕರೆದುಕೊಂಡು ಹೋಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Who would be CM? ದೆಹಲಿ ತಲುಪಿದ ಬಳಿಕ ಸಿದ್ದರಾಮಯ್ಯ ಸಿಡಿಮಿಡಿತನ ಪ್ರದರ್ಶಿಸಿದ್ದು ಹತಾಷೆಯಿಂದಾಗಿಯೇ?

ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ನನ್ನ ಬಳಿ 135 ಶಾಸಕರು ಇದ್ದಾರೆ, ಎಲ್ಲರೂ ಕಾಂಗ್ರೆಸ್ ಶಾಸಕರು. ನನಗೆ ಸಮಯದ ಪ್ರಜ್ಞೆ ಇದೆ, ಹೋರಾಟದ ಕಿಚ್ಚು ಇದೆ. ಹೋರಾಟದಲ್ಲಿ ಯಶಸ್ಸು ಸಿಗಬೇಕಾದರೆ ತಾಳ್ಮೆ ಇರಬೇಕು. ಧರ್ಮರಾಯರಂತೆ ತಾಳ್ಮೆ ಇರಬೇಕು. ನನ್ನನ್ನು ಬಂಡೆ ಅಂತಾ ನೀವು ಕರೆಯುತ್ತೀರಿ, ಬಂಡೆ ಅಂದರೆ ಪ್ರಕೃತಿ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂತಹ ಹತಾಷೆಯ ಮಾತುಗಳನ್ನಾಡುವುದನ್ನು ನೋಡಿದಾಗ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪುವ ಸುಳಿವು ಸಿಕ್ಕಂತಿದೆ. ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಸ್ಥಾನಕ್ಕಾಗಿ ಭಾರೀ ಲಾಭಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಪುತ್ರ ಯತೀಂದ್ರ ಅವರ ಸ್ಪರ್ಧೆಯನ್ನು ತ್ಯಾಗ ಮಾಡಲಾಗಿದೆ, ರಾಜ್ಯಾದ್ಯಂತ ಪ್ರವಾಸ ನಡೆಸಿ ಪಕ್ಷ ಕಟ್ಟಿದ್ದೇನೆ, ಶಾಸಕರ ಬೆಂಬಲವೂ ನನಗಿದೆ ಎಂದು ಹೇಳುವ ಮೂಲಕ ವಿರಿಷ್ಠರ ಮನವೋಲಿಸುವ ಸಾಧ್ಯತೆ ಇದೆ.

ದೆಹಲಿಗೆ ತೆರಳಿದ ಡಿಕೆ ಸುರೇಶ್

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ರದ್ದು ಮಾಡಿದ ಬೆನ್ನಲ್ಲೇ ಇವರ ಸಹೋದರನೂ ಆಗಿರುವ ಸಂಸದ ಡಿಕೆ ಸುರೇಶ್ ಅವರು ದೆಹಲಿಗೆ ತೆರಳಿದ್ದಾರೆ. ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಂಜೆ 5.30ರ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಇವರ ದೆಹಲಿ ಪ್ರವಾಸ ಸದ್ಯ ಕುತೂಹಲ ಕೆರಳಿಸಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:25 pm, Mon, 15 May 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?