AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hirekeruru Election Results: ಹೀರೆಕೆರೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಸಿ ಪಾಟೀಲ್​, ಯುಬಿ ಬಣಕರ್​ ಮಧ್ಯೆ ಪೈಪೋಟಿ

Hirekerur Assembly Election Results 2023 Live Counting Updates: ಹೀರೆಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿಸಿ ಪಾಟೀಲ್​ ಕಾಂಗ್ರೆಸ್​ನಿಂದ ಯುಬಿ ಬಣಕರ್​ ಹಾಗೂ ಜೆಡಿಎಸ್​ನಿಂದ ಜಯಾನಂದ ಜವಣ್ಣನವರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Hirekeruru Election Results: ಹೀರೆಕೆರೂರು ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಸಿ ಪಾಟೀಲ್​, ಯುಬಿ ಬಣಕರ್​ ಮಧ್ಯೆ ಪೈಪೋಟಿ
ಬಿಸಿ ಪಾಟೀಲ್​, ಯುಬಿ ಬಣಕರ್​
ಕಿರಣ್ ಹನುಮಂತ್​ ಮಾದಾರ್
| Edited By: |

Updated on: May 13, 2023 | 4:28 AM

Share

Hirekeruru Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಹೀರೆಕೆರೂರು ವಿಧಾನಸಭಾ ಕ್ಷೇತ್ರದಿಂದ ( Hirekerur Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿಸಿ ಪಾಟೀಲ್ ಸ್ಪರ್ಧಿಸಿದ್ದಾರೆ. ಈ ಹಿಂದೆ ಕಾಂಗ್ರೆಸ್​ನಲ್ಲಿದ್ದ ಇವರು ಬಿಜೆಪಿಗೆ ಸೇರ್ಪಡೆಯಾಗಿ, ಇಡೀ ಸರ್ಕಾರವನ್ನ ಉರುಳಿಸಿದ್ದವರಲ್ಲಿ ಇವರು ಕೂಡ ಒಬ್ಬರು. ಬಳಿಕ  ಉಪ ಚುನಾವಣೆಯಲ್ಲಿ ಸ್ಫರ್ಧಿಸಿ 85,562 ಮತಗಳನ್ನ ಪಡೆದು, 29,067 ಮತಗಳ ಅಂತರದಲ್ಲಿ ಗೆದ್ದು, ಹಾಲಿ ಕೃಷಿ ಸಚಿವರಾಗಿದ್ದಾರೆ. ಈ ಬಾರಿ ಕೂಡ ಭರ್ಜರಿ ಪ್ರಚಾರ ನಡೆಸುತ್ತಿರುವ ಇವರು ಮತ್ತೊಮ್ಮೆ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​​ನಿಂದ ಯುಬಿ ಬಣಕರ್ ಸ್ಪರ್ಧಿಸಿದ್ದು, ಈ ಹಿಂದೆ ನಡೆದ 2018ರ ಚುನಾವಣೆಯಲ್ಲಿ​ ಕೇವಲ 555 ಮತಗಳಿಂದ ಸೋತಿದ್ದರು. ಜೊತೆಗೆ ಕಳೆದ ಬಾರಿ ಬಿಜೆಪಿಯಲ್ಲಿದ್ದ ಇವರು  ಈ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿದ್ದಾರೆ.  ಹೇಗಾದರೂ ಮಾಡಿ ಈ ಬಾರಿ ಗೆಲ್ಲಲೇಬೇಕೆಂದು ಹರಸಾಹಸ ಮಾಡುತ್ತಿದ್ದಾರೆ. ಇನ್ನು ಜೆಡಿಎಸ್​ನಿಂದ ಜಯಾನಂದ ಜವಣ್ಣನವರ್ ಸ್ಪರ್ಧೆ ಮಾಡಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ. ಇನ್ನು ಇಡೀ ಜಿಲ್ಲೆಯಲ್ಲಿ ಹಿರೇಕೆರೂರು ಕ್ಷೇತ್ರ ಬಾರಿ ಹೈವೋಲ್ಟೇಜ್​ ಕ್ಷೇತ್ರವಾಗಿ ಪರಿಣಮಿಸಿದೆ.  ಹೀಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್​ ನೇರಾನೇರ ಹಣಾಹಣಿ ಎದುರಾಗಿದೆ. ಯಾರಿಗೆ ಮತದಾರ ಒಲಿಯಲಿದ್ದಾನೆ, ಯಾರ ಕೊರಳಿಗೆ ವಿಜಯದ ಮಾಲೆ ಬಿಳಲಿದೆ ಕಾದುನೋಡಬೇಕಾಗಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ