AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holalkere Election 2023 Winner: ಹೊಳಲ್ಕೆರೆಯಲ್ಲಿ ಅರಳಿದ ಕಮಲ, ಎಂ ಚಂದ್ರಪ್ಪಗೆ ಗೆಲುವು, ಆಂಜನೇಯಗೆ ಸೋಲು

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಬಹಿರಂಗಗೊಂಡಿದ್ದು, ಹೊಳಲ್ಕೆರೆಯಲ್ಲಿ ಕಮಲ ಅರಳಿದ್ದು, ಕಾಂಗ್ರೆಸ್​ನ ಪ್ರಬಲ ನಾಯಕ ಹೆಚ್​ ಆಂಜನೇಯ ಅವರು ಸೋಲು ಅನುಭವಿಸಿದ್ದಾರೆ.

Holalkere Election 2023 Winner: ಹೊಳಲ್ಕೆರೆಯಲ್ಲಿ ಅರಳಿದ ಕಮಲ, ಎಂ ಚಂದ್ರಪ್ಪಗೆ ಗೆಲುವು, ಆಂಜನೇಯಗೆ ಸೋಲು
ಹೊಳಲ್ಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಹೆಚ್​ ಆಂಜನೇಯ ವಿರುದ್ಧ ಬಿಜೆಪಿಯ ಎಂ ಚಂದ್ರಪ್ಪಗೆ ಗೆಲುವು
Rakesh Nayak Manchi
Rakesh Nayak Manchi|

Updated on: May 13, 2023 | 5:22 PM

Share

Holalkere Assembly Election Results 2023, ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ (Karnataka Assembly Election Results 2023) ಬಹಿರಂಗಗೊಂಡಿದ್ದು, ಹೊಳಲ್ಕೆರೆಯಲ್ಲಿ ಕಮಲ ಅರಳಿದ್ದು, ಕಾಂಗ್ರೆಸ್​ನ ಪ್ರಬಲ ನಾಯಕ ಹೆಚ್​ ಆಂಜನೇಯ (H Anjaneya) ಅವರು ಸೋಲು ಅನುಭವಿಸಿದ್ದಾರೆ. ಬಿಜೆಪಿಯ ಎಂ ಚಂದ್ರಪ್ಪ (M Chandrappa) ಅವರು ಆಂಜನೇಯ ಅವರನ್ನು 5682 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಚಲಾವಣೆಯಾದ ಒಟ್ಟು ಮತಗಳ ಪೈಕಿ ಬಿಜೆಪಿಯ ಎಂ ಚಂದ್ರಪ್ಪ ಅವರು ಶೇ 45ರಷ್ಟು ಮತ ಪಡೆದಿದ್ದು, ಕಾಂಗ್ರೆಸ್​ನ ಹೆಚ್ ಆಂಜನೇಯ ಅವರು ಶೇ 42.1 ರಷ್ಟು ಮತ ಪಡೆದಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸಿದ್ದ ಡಾ.ಜಯಸಿಂಹ ಲೋಕನಾಥ್ ಅವರು ಶೇ 10ರಷ್ಟು ಮತ ಪಡೆದಿದ್ದು, ಜೆಡಿಎಸ್​ನ ಎಸ್​ಆರ್ ಇಂದ್ರಜಿತ್ ನಾಯಕ್ ಅವರು ಶೇ 0.8ರಷ್ಟು ಮತ ಪಡೆದಿದ್ದಾರೆ.

ಇದನ್ನೂ ಓದಿ: Hiriyuru Election 2023 Winner: ಹಿರಿಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ ಸುಧಾಕರ್ ಗೆಲುವು

ಹೊಳಲ್ಕೆರೆ ಕ್ಷೇತ್ರದಲ್ಲಿ 2008ರಿಂದಲೂ ಎಂ ಚಂದ್ರಪ್ಪ ಹಾಗೂ ಹೆಚ್​ ಆಂಜನೇಯ ಅವರ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಈ ಬಾರಿಯೂ ಇವರ ನಡುವೆಯೇ ಜಿದ್ದಾಜಿದ್ದಿ ಏರ್ಪಟ್ಟು ಚಂದ್ರಪ್ಪ ಅವರು ಗೆಲುವು ಸಾಧಿಸಿದ್ದಾರೆ. ಎಸ್​ಸಿ ಮೀಸಲು ಕ್ಷೇತ್ರವಾಗಿರುವ ಹೊಳಲ್ಕೆರೆ ಕ್ಷೇತ್ರದಿಂದ 2013ರಲ್ಲಿ ಕೆಜೆಪಿಯಿಂದ ಕಣಕ್ಕಿಳಿದಿದ್ದ ಚಂದ್ರಪ್ಪ ಅವರನ್ನು ಆಂಜನೇಯ ಅವರು ಸೋಲಿಸಿದ್ದೆರು. 2018ರಲ್ಲಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಚಂದ್ರಪ್ಪ ಅವರು ಆಂಜನೇಯ ಅವರನ್ನು ಪರಾಭವಗೊಳಿಸುವ ಮೂಲಕ ಸತತ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ