AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holenarasipur Election 2023 Winner: ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣಗೆ ಅಲ್ಪಮತಗಳ ಅಂತರದ ಗೆಲುವು

HD Revanna of JDS Wins: ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಎಚ್.ಡಿ. ರೇವಣ್ಣ ಯಶಸ್ವಿಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ರೇವಣ್ಣ ಸುಮಾರು 3 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶ್ರೇಯಸ್ ಎಂ ಪಟೇಲ್ ವೀರೋಚಿತ ಸೋಲುಂಡಿದ್ದಾರೆ.

Holenarasipur Election 2023 Winner: ಹೊಳೆನರಸೀಪುರದಲ್ಲಿ ಎಚ್.ಡಿ. ರೇವಣ್ಣಗೆ ಅಲ್ಪಮತಗಳ ಅಂತರದ ಗೆಲುವು
ಎಚ್.ಡಿ. ರೇವಣ್ಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 1:58 PM

Share

Holenarasipur Assembly Election Results 2023: ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಎಚ್.ಡಿ. ರೇವಣ್ಣ ಯಶಸ್ವಿಯಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ರೇವಣ್ಣ ಸುಮಾರು 3 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ವೀರೋಚಿತ ಸೋಲುಂಡಿದ್ದಾರೆ. ಹಾಸನ ರಾಜಕಾರಣದಲ್ಲಿ ಹೆಚ್.ಡಿ. ದೇವೇಗೌಡರ ಪ್ರಬಲ ರಾಜಕೀಯ ಎದುರಾಳಿ ಎನಿಸಿದ್ದ ಪುಟ್ಟಸ್ವಾಮಿಗೌಡರ ಕುಟುಂಬಕ್ಕೆ ಸೇರಿದ ಶ್ರೇಯಸ್ ಎಂ ಪಟೇಲ್ ಈ ಬಾರಿ ಹೊಳೆನರಸೀಪುರ ಕ್ಷೇತ್ರದಲ್ಲಿ ಒಂದು ಹಂತದಲ್ಲಿ ಗೆಲುವು ಸಾಧಿಸಬಹುದು ಎಂಬ ಭಾವನೆಗಳಿದ್ದವು. ಈ ನಿರೀಕ್ಷೆ ಹೆಚ್ಚೂಕಡಿಮೆ ಈಡೇರುವ ಹಂತಕ್ಕೆ ಬಂದಿತ್ತಾದರೂ ಅಂತಿಮವಾಗಿ ರೇವಣ್ಣ ಬಚಾವಾಗಿ ಗೆಲುವಿನ ದಡ ಮುಟ್ಟಿದ್ದಾರೆ.

ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ಚುನಾವಣೆ 2023 ಫಲಿತಾಂಶ

ಈ ಸುದ್ದಿ ಬರೆಯುವ ಹೊತ್ತಿನವರೆಗೆ ಸಿಕ್ಕ ಅಧಿಕೃತ ಮತಗಳ ವಿವರ ಈ ಕೆಳಕಂಡಂತಿದೆ:

  • ಜೆಡಿಎಸ್: ಎಚ್.ಡಿ. ರೇವಣ್ಣ– 83,268 ಮತಗಳು
  • ಕಾಂಗ್ರೆಸ್: ಶ್ರೇಯಸ್ ಎಂ ಪಟೇಲ್– 77,720 ಮತಗಳು
  • ಬಿಜೆಪಿ: ಜಿ. ದೇವರಾಜೇಗೌಡ– 4,452 ಮತಗಳು

ಈ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ಮಧ್ಯೆಯೇ ನೇರ ಪೈಪೋಟಿ ನಡೆದಿದೆ. ಉಳಿದ ಯಾವ ಅಭ್ಯರ್ಥಿಗೂ ಠೇವಣಿಯೂ ಸಿಕ್ಕಿಲ್ಲ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ