AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hoskote Election Results: ಹೊಸಕೋಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶರತ್ ಬಚ್ಚೇಗೌಡಗೆ ಗೆಲುವು

Hoskote Assembly Election Result 2023 Live Counting Updates: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಶರತ್ ಬಚ್ಚೇಗೌಡ, ಬಿಜೆಪಿಯಿಂದ ಎಂಟಿಬಿ ನಾಗರಾಜ್ ಕಣದಲ್ಲಿದ್ದಾರೆ. ಮತ ಎಣಿಕೆಯ ವಿವರ ಇಲ್ಲಿದೆ.

Hoskote Election Results: ಹೊಸಕೋಟೆ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶರತ್ ಬಚ್ಚೇಗೌಡಗೆ ಗೆಲುವು
ಶರತ್ ಬಚ್ಚೇಗೌಡ, ಎಂಟಿಬಿ ನಾಗರಾಜ್
ಆಯೇಷಾ ಬಾನು
|

Updated on:May 13, 2023 | 2:12 PM

Share

Hoskote Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರ ಬಿದ್ದಿದೆ. ಕಾಂಗ್ರೆಸ್​ನ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ದು ಎಂಟಿಬಿ ನಾಗರಾಜ್​ಗೆ ಮುಖಭಂಗವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದಾಗಿರುವ ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ (Hoskote Assembly Constituency) ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಸ್ಪರ್ಧಿಸುತ್ತಿದ್ದಾರೆ. ಮೊದಲಿಗೆ ಶರತ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಯಾವಾಗ ತಮಗೆ ಟಿಕಟ್ ಸಿಗೋದಿಲ್ಲ ಎಂದು ಗೊತ್ತಾಯ್ತೋ, ಆಗ ಶರತ್ ಬಚ್ಚೇಗೌಡ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದರು. ಇನ್ನು ಮತ್ತೊಂದೆಡೆ ಕಾಂಗ್ರೆಸ್​ನ ಎಂಟಿಬಿ ನಾಗರಾಜ್ ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಪಕ್ಷ ತೊರೆದ ಕಾರಣ ಕಾಂಗ್ರೆಸ್‌ಗೂ ಕೂಡಾ ಕ್ಷೇತ್ರ ಉಳಿಸಿಕೊಳ್ಳುವ ಅನಿವಾರ್ಯತೆ ಇತ್ತು. ಹೀಗಾಗಿ, ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಅವರು ತಮ್ಮ ಪತ್ನಿ ಪದ್ಮಾವತಿ ಅವರನ್ನು ಅಖಾಡಕ್ಕೆ ಇಳಿಸಿಲಾಗಿತ್ತು. ಉಪ ಚುನಾವಣೆ ಪ್ರಚಾರದ ವೇಳೆ ಸ್ವತಂತ್ರ್ಯ ಅಭ್ಯರ್ಥಿ ಶರತ್‌ ಅವರು ಸ್ವಾಭಿಮಾನಕ್ಕಾಗಿ ಮತ ಕೇಳಿದರೆ, ಕಾಂಗ್ರೆಸ್‌ನ ಪದ್ಮಾವತಿ ಅವರು ಪ್ರತೀಕಾರಕ್ಕಾಗಿ ಮತ ಯಾಚಿಸಿದರು. ಈ ಹಂತದಲ್ಲಿ ಎಂಟಿಬಿ ನಾಗರಾಜ್ ಪ್ರತಿಷ್ಠೆಗಾಗಿ ನಡೆಸಿದ ಹೋರಾಟ ಲೆಕ್ಕಕ್ಕೇ ಬರಲಿಲ್ಲ. ಶರತ್ ಬಚ್ಚೇಗೌಡರು ಗೆದ್ದು ಶಾಸಕರಾಗಿ ಆಯ್ಕೆಯಾಗಿದರು. ಸದ್ಯ ಈಗ ಮತ್ತೆ ಕಾಂಗ್ರೆಸ್ ಪಕ್ಷದಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಹಾಗೂ ಕುರುಬರೇ ನಿರ್ಣಾಯಕ. ಹೀಗಾಗಿ, ಕುರುಬ ಸಮುದಾಯದ ಮತಗಳನ್ನೇ ಎಂಟಿಬಿ ನಾಗರಾಜು ನಂಬಿಕೊಂಡಿದ್ದಾರೆ. ಕುರುಬರ ವೋಟುಗಳ ಜೊತೆಯಲ್ಲೇ ಕಾಂಗ್ರೆಸ್‌ನ ಮತ ಬ್ಯಾಂಕ್ ನಂಬಿದ್ದ ಕಾರಣಕ್ಕೇ ಎಂಟಿಬಿ ನಾಗರಾಜ್ ಈ ಹಿಂದೆ ಸತತ ಗೆಲುವು ಸಾಧಿಸಿದ್ದರು. ಆದರೆ, 2019ರಲ್ಲಿ ಆಪರೇಷನ್ ಕಮಲ ಹಿನ್ನೆಲೆ ಎಂಟಿಬಿ ನಾಗರಾಜ್ ಬಿಜೆಪಿ ಸೇರ್ಪಡೆಗೊಂಡ ಬಳಿಕ ಅಲ್ಲಿನ ರಾಜಕೀಯ ಚಿತ್ರಣವೇ ಬದಲಾಗಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 1:23 am, Sat, 13 May 23

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು