AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ಕೊಲೆ, ಇಂದು ಬೋರ್ಡ್ ಧ್ವಂಸ: ಹೊಸಕೋಟೆಯಲ್ಲಿ ಮುಂದುವರಿದ ದ್ವೇಷ ಗಲಭೆ

ಪಾರ್ವತಿಪುರ ಸರ್ಕಲ್​ನಲ್ಲಿ ಅಳವಡಿಸಿದ್ದ ಎಂಟಿಬಿ ವೃತ್ತ ಅನ್ನೂ ಬೋರ್ಡ್ ಅನ್ನು ಕಳೆದ ರಾತ್ರಿ ಕೆಲ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ರಾಜಕೀಯ ವೈಷಮ್ಯದಿಂದ ಮಾಡ್ತಿದ್ದಾರೆ ಅಂತ ಎಂಟಿಬಿ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.

ನಿನ್ನೆ ಕೊಲೆ, ಇಂದು ಬೋರ್ಡ್ ಧ್ವಂಸ: ಹೊಸಕೋಟೆಯಲ್ಲಿ ಮುಂದುವರಿದ ದ್ವೇಷ ಗಲಭೆ
ಎಂಟಿಬಿ ವೃತ್ತ ಬೋರ್ಡ್ ಧ್ವಂಸ
ಆಯೇಷಾ ಬಾನು
|

Updated on:May 15, 2023 | 2:03 PM

Share

ಹೊಸಕೋಟೆ: ದಶಕಗಳಿಂದಲೂ ಎಂಟಿಬಿ ಮತ್ತು ಬಚ್ಚೇಗೌಡ ಕುಟುಂಬದ ನಡುವೆ ಪ್ರತಿಷ್ಠೆಯ ಕದನ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಈ ಭಾರಿ ಕೂಡ ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ(Sharath Bache Gowda) ಅವರು ಎಂಟಿಬಿ ನಾಗರಾಜ್(MTB Nagaraj) ಅವರ ವಿರುದ್ದ ಎರಡನೆ ಭಾರಿಗೆ ಗೆದ್ದು ಬೀಗಿದ್ದಾರೆ. ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದೇ ತಡ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ದ್ವೇಷ ಗಲುಬೆ ಶುರುವಾಗಿದೆ. ನಿನ್ನೆ ಇದೇ ವಿಚಾರದಲ್ಲಿ ಕೊಲೆಯೊಂದು ನಡೆದಿತ್ತು. ಈಗ ಪಾರ್ವತಿಪುರದಲ್ಲಿ ಎಂಟಿಬಿ ಬೋರ್ಡ್ ದ್ವಂಸ ಮಾಡಲಾಗಿದೆ.

ಪಾರ್ವತಿಪುರ ಸರ್ಕಲ್​ನಲ್ಲಿ ಅಳವಡಿಸಿದ್ದ ಎಂಟಿಬಿ ವೃತ್ತ ಅನ್ನೂ ಬೋರ್ಡ್ ಅನ್ನು ಕಳೆದ ರಾತ್ರಿ ಕೆಲ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ರಾಜಕೀಯ ವೈಷಮ್ಯದಿಂದ ಮಾಡ್ತಿದ್ದಾರೆ ಅಂತ ಎಂಟಿಬಿ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ. ನಿನ್ನೆಯಷ್ಟೆ ಪಟಾಕಿ ವಿಚಾರಕ್ಕೆ ಗಲಾಟೆಯಾಗಿ ಕೊಲೆ ಆಗಿತ್ತು. ಇದೀಗ ಮತ್ತೊಮ್ಮೆ ನಗರದಲ್ಲಿ ಬೋರ್ಡ್ ಧ್ವಂಸ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಿದೆ: ದಿಂಗಾಲೇಶ್ವರ ಸ್ವಾಮೀಜಿ

ಫಲಿತಾಂಶದ ಬಳಿಕ ಬಡಿದಾಟ…ಮುಖಂಡನ ಮರ್ಡರ್‌

ಬೆಂಗಳೂರಿನ ಎಲ್ಲಾ ಕ್ಷೇತ್ರಗಳದ್ದು ಒಂದು ಲೆಕ್ಕವಾದ್ರೆ, ಹೊಸಕೋಟೆ ಲೆಕ್ಕವೇ ಬೇರೆ. ಇಲ್ಲಿ ದಶಕಗಳಿಂದಲೂ ಎಂಟಿಬಿ ಮತ್ತು ಬಚ್ಚೇಗೌಡ ಕುಟುಂಬದ ನಡುವೆ ಪ್ರತಿಷ್ಟೆ ಇದ್ದೇ ಇದೆ. ಈ ಬಾರಿಯೂ ಇಲ್ಲಿ ಇಬ್ಬರ ನಡುವೆ ಬಿಗ್‌ ಫೈಟ್‌ ಆಗಿತ್ತು. ಈ ಫೈಟ್‌ನಲ್ಲಿ ಎಂಟಿಬಿ ನಾಗರಾಜ್‌ ಸೋತಿದ್ರೆ, ಶರತ್‌ ಬಚ್ಚೇಗೌಡ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. ಮೇ 13ರಂದು ರಿಸಲ್ಟ್‌ ಬರ್ತಿದ್ದಂತೆ ರಾತ್ರಿ ಇದೇ ವಿಚಾರವಾಗಿ ಹೊಸಕೋಟೆ ತಾಲೂಕಿನ ಡಿ ಶೆಟ್ಟಿಹಳ್ಳಿಯಲ್ಲಿ ಕೃಷ್ಣಪ್ಪ ಹಾಗೂ ಗಣೇಶಪ್ಪ ಅನ್ನೋ ಸಹೋದರರ ನಡುವೆ ಗಲಾಟೆಯಾಗಿತ್ತು. ನೀನು ಪಕ್ಷದಲ್ಲಿ ಇದ್ದುಕೊಂಡೇ ಬಿಜೆಪಿಗೆ ಮೋಸ ಮಾಡಿದ್ದೀ ಅಂತಾ ಎಂಟಿಬಿ ಬೆಂಬಲಿಗ ಕೃಷ್ಣಪ್ಪ ತನ್ನ ಸಹೋದರನನ್ನ ಪ್ರಶ್ನಿಸಿದ್ದ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋಗಿದ್ದು, ಗಣೇಶಪ್ಪನ ಮಗ ಆದಿತ್ಯಾ ಮತ್ತು ಕೆಲವರು ಕೃಷ್ಣಪ್ಪನ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ರು. ಕುಡುಗೋಲಿನಿಂದ ಅಟ್ಯಾಕ್‌ ಮಾಡಿದ್ರು. ಇದ್ರಿಂದ ಗಾಯಗೊಂಡ ಕೃಷ್ಣಪ್ಪನನ್ನ ಆಸ್ಪತ್ರೆಗೆ ಸೇರಿಸಲಾಗಿತ್ತಾದ್ರೂ ಬದುಕುಳಿಯಲಿಲ್ಲ.

ಇನ್ನು ಹೋಸಕೋಟೆ ತಾಲೂಕಿನ ಕೊಡಹಳ್ಳಿ ಕುರುಬರಹಳ್ಳಿ, ಶಿವನಾಪುರ, ತಮ್ಮರಸನಹಳ್ಳಿ, ನೆರಗನಹಳ್ಳಿ ಸೇರಿದಂತೆ ಹಲವಡೆ ಶರತ್ ಬಚ್ಚೇಗೌಡ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಾ ಎಂಟಿಬಿ ಬೆಂಬಲಿಗರ ಮನೆಗಳ ಮುಂದೆ ಪಟಾಕಿ ಸಿಡಿಸಿದ್ರು. ಈ ವೇಳೆ ಮನೆ ಕಾಂಪೌಂಡ್‌ ಒಳಗೆ ಪಟಾಕಿ ಹಾಕಿದ್ರಂತೆ. ಹೀಗಾಗಿ ಮನೆ ಮುಂದೆ ಪಟಾಕಿ ಸಿಡಿಸಬೇಡಿ ಅಂತ ಹೇಳಿದಕ್ಕೆ, ಗಲಾಟೆಯಾಗಿದೆ. ಇದ್ರಿಂದ ಕೆರಳಿದ ಎಂಟಿಬಿ ಬೆಂಬಲಿಗರು ನಂದಗುಡಿ ಪೊಲೀಸ್ ಠಾಣೆ ಮುಂದೆ ಕೃಷ್ಣಪ್ಪನ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:55 pm, Mon, 15 May 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ