AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಆಪರೇಷನ್ ಹಸ್ತ; ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಗಂಭೀರ ಪ್ಲ್ಯಾನಿಂಗ್

ಈ ಮಧ್ಯೆ ಎಕ್ಸಿಟ್ ಪೋಲ್​ಗಳು ಅತಂತ್ರ ವಿಧಾನಸಭೆಯ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ‘ಆಪರೇಷನ್ ಹಸ್ತ’ದ ಬಗ್ಗೆ ಗಂಭೀರ ಪ್ಲ್ಯಾನಿಂಗ್ ನಡೆಸುತ್ತಿದ್ದಾರೆ.

ಈ ಬಾರಿ ಆಪರೇಷನ್ ಹಸ್ತ; ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಗಂಭೀರ ಪ್ಲ್ಯಾನಿಂಗ್
ಕಾಂಗ್ರೆಸ್
ಗಣಪತಿ ಶರ್ಮಾ
|

Updated on: May 11, 2023 | 7:55 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ದಾಖಲೆಯ ಶೇ 73.19ರಷ್ಟು ಮತದಾನವಾಗಿದೆ. ಈ ಮಧ್ಯೆ ಎಕ್ಸಿಟ್ ಪೋಲ್​ಗಳು ಅತಂತ್ರ ವಿಧಾನಸಭೆಯ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ‘ಆಪರೇಷನ್ ಹಸ್ತ’ದ ಬಗ್ಗೆ ಗಂಭೀರ ಪ್ಲ್ಯಾನಿಂಗ್ ನಡೆಸುತ್ತಿದ್ದಾರೆ. ಒಂದು ವೇಳೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ಬಹುಮತಕ್ಕೆ ಬೇಕಾದ ಸ್ಥಾನಗಳು ದೊರೆಯದಿದ್ದಲ್ಲಿ ಹೇಗೆ ಸರ್ಕಾರ ರಚಿಸಬಹುದು ಎಂಬ ಬಗ್ಗೆ ಖುದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಯೋಜನೆ ರೂಪಿಸಲಾಗುತ್ತಿದೆ.

ಫಲಿತಾಂಶ ಬರುವ ವೇಳೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಕಾಂಗ್ರೆಸ್‌ ನಾಯಕರು ಈಗಾಗಲೇ ನಿರ್ಧಾರ ಕೈಗೊಂಡಿದ್ದಾರೆ. ಈ ವಿಚಾರವಾಗಿ ಸುರ್ಜೇವಾಲ ಅವರು ಸಿದ್ದರಾಮಯ್ಯ ಜೊತೆಗೂ ಮಾತುಕತೆ ನಡೆಸಿದ್ದಾರೆ. ಫಲಿತಾಂಶ ಬಂದ ಬಳಿಕ ಗೊಂದಲ ಮೂಡುವುದು ಬೇಡ. ಫಲಿತಾಂಶ ಬರುವ ವೇಳೆಗೆ ಎಲ್ಲ ಸಿದ್ದತೆಗಳು ಆಗಿರಬೇಕು ಎಂದು ಕೆಲವು ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಆಪರೇಶನ್ ಕಮಲ ನಡೆದು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರದಂತೆ ಮಾಡುವ ಬಗ್ಗೆಯೂ ಸಮಾಲೋಚನೆ ನಡೆದಿದೆ. ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಪ್ಲಾನ್ ಮಾಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಅತಂತ್ರ ಫಲಿತಾಂಶದ ಭಯ: ಆಯ್ಕೆಯಾದ ಕೈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇಂದು ತಡರಾತ್ರಿ ಮೆಗಾ ಪ್ಲಾನ್​

ಅತಂತ್ರ ಫಲಿತಾಂಶದ ಸಾಧ್ಯತೆ ಹಿನ್ನೆಲೆಯಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾದ ಕಾಂಗ್ರೆಸ್, ಇಂದು ತಡರಾತ್ರಿ ಝೂಮ್ ಮೀಟಿಂಗ್ ಮಾಡಲಿದೆ. ಈ ಆನ್​ಲೈನ್ ಸಭೆಯಲ್ಲಿ 224 ಅಭ್ಯರ್ಥಿಗಳ ಜೊತೆಗೂ ಮಾತುಕತೆ ನಡೆಸಲಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರಿಗೂ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ