AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಆಪರೇಷನ್ ಹಸ್ತ; ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಗಂಭೀರ ಪ್ಲ್ಯಾನಿಂಗ್

ಈ ಮಧ್ಯೆ ಎಕ್ಸಿಟ್ ಪೋಲ್​ಗಳು ಅತಂತ್ರ ವಿಧಾನಸಭೆಯ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ‘ಆಪರೇಷನ್ ಹಸ್ತ’ದ ಬಗ್ಗೆ ಗಂಭೀರ ಪ್ಲ್ಯಾನಿಂಗ್ ನಡೆಸುತ್ತಿದ್ದಾರೆ.

ಈ ಬಾರಿ ಆಪರೇಷನ್ ಹಸ್ತ; ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಗಂಭೀರ ಪ್ಲ್ಯಾನಿಂಗ್
ಕಾಂಗ್ರೆಸ್
ಗಣಪತಿ ಶರ್ಮಾ
|

Updated on: May 11, 2023 | 7:55 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ದಾಖಲೆಯ ಶೇ 73.19ರಷ್ಟು ಮತದಾನವಾಗಿದೆ. ಈ ಮಧ್ಯೆ ಎಕ್ಸಿಟ್ ಪೋಲ್​ಗಳು ಅತಂತ್ರ ವಿಧಾನಸಭೆಯ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ‘ಆಪರೇಷನ್ ಹಸ್ತ’ದ ಬಗ್ಗೆ ಗಂಭೀರ ಪ್ಲ್ಯಾನಿಂಗ್ ನಡೆಸುತ್ತಿದ್ದಾರೆ. ಒಂದು ವೇಳೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ಬಹುಮತಕ್ಕೆ ಬೇಕಾದ ಸ್ಥಾನಗಳು ದೊರೆಯದಿದ್ದಲ್ಲಿ ಹೇಗೆ ಸರ್ಕಾರ ರಚಿಸಬಹುದು ಎಂಬ ಬಗ್ಗೆ ಖುದ್ದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಯೋಜನೆ ರೂಪಿಸಲಾಗುತ್ತಿದೆ.

ಫಲಿತಾಂಶ ಬರುವ ವೇಳೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಕಾಂಗ್ರೆಸ್‌ ನಾಯಕರು ಈಗಾಗಲೇ ನಿರ್ಧಾರ ಕೈಗೊಂಡಿದ್ದಾರೆ. ಈ ವಿಚಾರವಾಗಿ ಸುರ್ಜೇವಾಲ ಅವರು ಸಿದ್ದರಾಮಯ್ಯ ಜೊತೆಗೂ ಮಾತುಕತೆ ನಡೆಸಿದ್ದಾರೆ. ಫಲಿತಾಂಶ ಬಂದ ಬಳಿಕ ಗೊಂದಲ ಮೂಡುವುದು ಬೇಡ. ಫಲಿತಾಂಶ ಬರುವ ವೇಳೆಗೆ ಎಲ್ಲ ಸಿದ್ದತೆಗಳು ಆಗಿರಬೇಕು ಎಂದು ಕೆಲವು ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಆಪರೇಶನ್ ಕಮಲ ನಡೆದು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರದಂತೆ ಮಾಡುವ ಬಗ್ಗೆಯೂ ಸಮಾಲೋಚನೆ ನಡೆದಿದೆ. ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಪ್ಲಾನ್ ಮಾಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಅತಂತ್ರ ಫಲಿತಾಂಶದ ಭಯ: ಆಯ್ಕೆಯಾದ ಕೈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇಂದು ತಡರಾತ್ರಿ ಮೆಗಾ ಪ್ಲಾನ್​

ಅತಂತ್ರ ಫಲಿತಾಂಶದ ಸಾಧ್ಯತೆ ಹಿನ್ನೆಲೆಯಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾದ ಕಾಂಗ್ರೆಸ್, ಇಂದು ತಡರಾತ್ರಿ ಝೂಮ್ ಮೀಟಿಂಗ್ ಮಾಡಲಿದೆ. ಈ ಆನ್​ಲೈನ್ ಸಭೆಯಲ್ಲಿ 224 ಅಭ್ಯರ್ಥಿಗಳ ಜೊತೆಗೂ ಮಾತುಕತೆ ನಡೆಸಲಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರಿಗೂ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ