AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು, ನಾನು ಹಿಂದೆ ಉಪಮುಖ್ಯಮಂತ್ರಿಯಾಗಿದ್ದವನು; ಡಾ ಜಿ ಪರಮೇಶ್ವರ್

‘ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು, ನಾನು ಈ ಹಿಂದೆ ಕೂಡ ಉಪ ಮುಖ್ಯಮಂತ್ರಿಯಾಗಿದ್ದೆ. ಎಲ್ಲ ಸಮುದಾಯಗಳನ್ನು ಪರಿಗಣಿಸಿ ಡಿಸಿಎಂ ಸ್ಥಾನ ಕೊಡಬೇಕಾಗುತ್ತದೆ ಎಂದು ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್​ ಹೇಳಿದರು.

ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು, ನಾನು ಹಿಂದೆ ಉಪಮುಖ್ಯಮಂತ್ರಿಯಾಗಿದ್ದವನು; ಡಾ ಜಿ ಪರಮೇಶ್ವರ್
ಜಿ ಪರಮೇಶ್ವರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 18, 2023 | 12:03 PM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Elections 2023 Result) ಮೇ.13 ರಂದು ಬಂದಿದ್ದು, ಅದರಂತೆ ಸಿದ್ದರಾಮಯ್ಯ(Siddaramaiah) 2 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇನ್ನು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್(Dk Shivakumar) ಎಂದು ಘೋಷಿಸಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್(G Parameshwara) ‘ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು, ನಾನು ಈ ಹಿಂದೆ ಕೂಡ ಉಪ ಮುಖ್ಯಮಂತ್ರಿಯಾಗಿದ್ದೆ. ಎಲ್ಲ ಸಮುದಾಯಗಳನ್ನು ಪರಿಗಣಿಸಿ ಡಿಸಿಎಂ ಸ್ಥಾನ ಕೊಡಬೇಕಾಗುತ್ತದೆ. ಒಬ್ಬರು ಮಾತ್ರ ಅಧಿಕಾರದಲ್ಲಿ ಇರಬೇಕೆಂಬುದು ಸೂಕ್ತವಲ್ಲ, ಎಲ್ಲರ ನಾಯಕತ್ವದಿಂದ ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.

ಮುಖ್ಯಮಂತ್ರಿ ಆಗಲು ಸಿದ್ಧ, ನಾನೂ 50 ಶಾಸಕರನ್ನು ಕರೆದೊಯ್ಯಬಹುದು ಎಂದು ಹೇಳಿದ್ದ ಪರಮೇಶ್ವರ್​

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್​ಗೆ ಕಗ್ಗಂಟಾಗಿ ಪರಿಣಮಿಸಿತ್ತು, ಇದರ ಬೆನ್ನಲ್ಲೇ, ನಾನೂ ಸಿಎಂ ಆಗಲು ಸಿದ್ಧ ಎಂದು ಜಿ ಪರಮೇಶ್ವರ ಹೇಳಿರುವುದಾಗಿ ವರದಿಯಾಗಿತ್ತು. ಮುಖ್ಯಮಂತ್ರಿ ಆಗಲು ಸಿದ್ಧನಿದ್ದೇನೆ. ನಾನೂ 50 ಶಾಸಕರನ್ನು ಕರೆದೊಯ್ಯಬಹುದು. ಆದರೆ, ಎಂದಿಗೂ ಲಾಬಿ ಮಾಡುವುದಿಲ್ಲ ಎಂದು ಪರಮೇಶ್ವರ ಹೇಳಿದ್ದರು. ಈ ಮೂಲಕ, ತಮ್ಮನ್ನು ಮುಖ್ಯಮಂತ್ರಿ ಮಾಡಿದರೆ ಸರ್ಕಾರ ಮುನ್ನಡೆಸಲು ಸಿದ್ಧ ಎಂದು ಕೊರಟಗೆರೆ ಕ್ಷೇತ್ರದ ಶಾಸಕರಾಗಿರುವ ಅವರು ಹೇಳಿದ್ದರು.

ಇದನ್ನೂ ಓದಿ:ನನ್ನನ್ನು ಮುಂದಿನ ಮುಖ್ಯಮಂತ್ರಿ ಎನ್ನಬೇಡಿ; ಆ ಪದವೇ ನನಗೆ ಡೇಂಜರ್ ಆಗುತ್ತೆ – ಡಾ. ಪರಮೇಶ್ವರ್ ಅಳಲು

ನನಗೆ ಹೈಕಮಾಂಡ್ ಮೇಲೆ ನಂಬಿಕೆ ಇದೆ. ನನಗೆ ಕೆಲವು ತತ್ವಗಳಿವೆ. ನಾನೂ ಸಹ 50 ಶಾಸಕರನ್ನು ಕರೆದುಕೊಂಡು ಹೋಗಿ ಗುಲ್ಲೆಬ್ಬಿಸಬಹುದು. ಆದರೆ ನನಗೆ ಪಕ್ಷದ ಶಿಸ್ತು ಹೆಚ್ಚು ಮುಖ್ಯ ಎಂದು ಪರಮೇಶ್ವರ ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿತ್ತು. ಹೈಕಮಾಂಡ್ ತೀರ್ಮಾನ ಕೈಗೊಂಡು ಸರ್ಕಾರ ಮುನ್ನಡೆಸಲು ಹೇಳಿದರೆ, ನಾನು ಆ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧನಿದ್ದೇನೆ. ನಾನು ಅವಕಾಶವನ್ನು ನಿರಾಕರಿಸುತ್ತೇನೆ ಎಂದಲ್ಲ, ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ ಎಂಬುದು ಹೈಕಮಾಂಡ್‌ಗೆ ತಿಳಿದಿದೆ. ನಾನೂ ಸಹ ಪಕ್ಷಕ್ಕೆ ಸಹಾಯ ಮಾಡಿದ್ದೇನೆ. ಅಧಿಕಾರದ ವಿಚಾರದಲ್ಲಿ ಹೇಳುವುದಾದರೆ ನಾನು ಉಪ ಮುಖ್ಯಮಂತ್ರಿಯಾಗಿದ್ದೆ. ಹೀಗಾಗಿ ಲಾಬಿ ಮಾಡುವ ಬದಲು ಸುಮ್ಮನಿದ್ದೇನೆ. ಹೀಗಿದ್ದ ಮಾತ್ರಕ್ಕೆ ನಾನು ಅನರ್ಹ ಎಂದು ಅರ್ಥವಲ್ಲ ಎಂದೂ ಅವರು ಹೇಳಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದೇ ಸೂಕ್ತ ಎಂದೂ ಅವರು ಅಭಿಪ್ರಾಯಪಟ್ಟಿದ್ದರು ಎಂದು ವರದಿ ಉಲ್ಲೇಖಿಸಿತ್ತು. ಸಿಎಂ ಹುದ್ದೆಯ ಪೈಪೋಟಿ ಶೀಘ್ರದಲ್ಲೇ ಕೊನೆಗೊಳ್ಳಬಹುದು ಎಂಬ ಆಶಾವಾದವನ್ನೂ ಅವರು ವ್ಯಕ್ತಪಡಿಸಿದ್ದರು. ಉಪ ಮುಖ್ಯಮಂತ್ರಿಗಳ ನೇಮಕ ಸಾಧ್ಯತೆಯನ್ನು ಅವರು ತಳ್ಳಿ ಹಾಕಿಲ್ಲ. ಆ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಅವರು ಪ್ರತಿಕ್ರಿಯಿಸಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್