AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯವರನ್ನು ವಿಷಸರ್ಪ ಅಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ: ಕ್ಷಮೆ ಕೇಳಲ್ಲ ಎಂದ ಯತ್ನಾಳ್

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರಿಗೆ ನಾನು ವಿಷಕನ್ಯ ಅಂದಿದ್ದೇನೆ. ನಾನು ಕ್ಷಮೆ ಕೇಳಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ 91 ಸಾರಿ ಬೈದಿದ್ದಾರೆ. ಹೀಗಾಗಿ ವಿಷ ಸರ್ಪ ಅಂದಾಗ ನಾನು ವಿಷಕನ್ಯ ಅಂದಿದ್ದೇನೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 01, 2023 | 1:19 PM

Share

ಹುಬ್ಬಳ್ಳಿ: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರಿಗೆ (Sonia Gandhi) ನಾನು ವಿಷಕನ್ಯ ಅಂದಿದ್ದೇನೆ. ನಾನು ಕ್ಷಮೆ ಕೇಳಲ್ಲ. ದೊರೆಸ್ವಾಮಿ ನಾಟಕ‌ ಕಂಪನಿಗೆ ಕಾಂಗ್ರೆಸ್ (Congress) ಏಜೆಂಟ್ ಅಂದಿದ್ದೆ. ನಾನು ರಾಜೀನಾಮೆ ಕೊಡುತ್ತೇನೆ. ಕ್ಷಮೆ ಕೇಳಲ್ಲ. ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಬಗ್ಗೆ 91 ಸಾರಿ ಬೈದಿದ್ದಾರೆ. ಹೀಗಾಗಿ ವಿಷ ಸರ್ಪ ಅಂದಾಗ ನಾನು ವಿಷಕನ್ಯ ಅಂದಿದ್ದೇನೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​ (Basangouda Patil Yatnal) ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿಯಾಗುವ ವಿಚಾರವಾಗಿ ಮಾತನಾಡಿದ ಅವರು ಪಕ್ಷ ಯಾರನ್ನಾದರು ಮುಖ್ಯಮಂತ್ರಿ ಮಾಡಲಿ, ಬಸವರಾಜ ಬೊಮ್ಮಾಯಿ ಅವರನ್ನಾದರೂ ಮಾಡಲಿ ಅಥವಾ ನನ್ನನ್ನಾದರೂ ಮಾಡಲಿ ಎನ್ನುವ ಮೂಲಕ ಮುಖ್ಯಮಂತ್ರಿಯಾಗುವ ಇಂಗಿತವನ್ನು ವ್ಯಕ್ತಪಿಡಿಸದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಎಲ್ಲರಕ್ಕಿಂತ ನಾನು ಗಟ್ಟಿಯಾಗಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರದು ನಮ್ಮ ತರಹ ಸ್ಟ್ರಾಂಗ್ ಹಿಂದೂತ್ವ ಅಲ್ಲ. ಅವರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ನಾನು ಮುಖ್ಯಮಂತ್ರಿ ಆಗುವ ಕನಸು ಕಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಉಚಿತ ಗ್ಯಾಸ್, ನಂದಿನಿ ಹಾಲು ಸೇರಿದಂತೆ ಬಿಜೆಪಿ ಪ್ರಜಾ ಪ್ರಣಾಳಿಕೆ ಮುಖ್ಯಾಂಶಗಳು ಇಲ್ಲಿವೆ

ಮಾಜಿ ಮುಖ್ಯಮಂತ್ರಿ ಬಿಎಸ್​​ ಯಡಿಯೂರಪ್ಪ ಅವರನ್ನು ಪಕ್ಷ ಕಡೆಗಣನೆ ಮಾಡಿದೆ ಎನ್ನುವ ಹೇಳಿಕೆ  ವಿಚಾರವಾಗಿ ಮಾತನಾಡಿದ ಅವರು ಅವರ ಹತ್ತೀರನೇ ಅಧಿಕಾರ ಇದೆ ಅಲ್ಲ. ಕೆಲವೊಮ್ಮೆ ಅಧಿಕಾರ ಹೋಗತ್ತೆ ಬಿಡಿ. ನಾನು ಸ್ವಲ್ಪ ಸ್ಟೇಟ ಫಾರ್ವರ್ಡ್, ಕುಟುಂಬ ರಾಜಕಾರಣಕ್ಕೆ ವಿರೋಧಿ. ಇವಾಗ ನನಗೂ ಅಧಿಕಾರ ಇಲ್ಲ. ನನ್ನ ಮುಖ್ಯಮಂತ್ರಿ ಅಭ್ಯರ್ಥಿ ಅಂತೀರಿ. ನಾನು ಲಿಂಗಾಯತರಿಗೆ ಅನ್ಯಾಯ ಮಾಡಿಲ್ಲ. ನಾನು ಗೆಲ್ಲುತ್ತೇನೆ ಲೀಡ್ ನೋಡಲ್ಲ ಎಂದರು.

ಜಗದೀಶ್ ಶೆಟ್ಟರ್ ಯಾವತ್ತೂ ಹಿಂದುತ್ವದ ಪರ ಮಾತಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಗಲಾಟೆಯಾದಗ 4 ಜನರನ್ನು ಎನಕೌಂಟರ್ ಮಾಡಬೇಕಿತ್ತು. ಹಳೇ ಹುಬ್ಬಳ್ಳಿಯಲ್ಲಿ ಗಲಾಟೆ ಮಾಡಿದಾಗ ಶೆಟ್ಟರ್ ಕಡೆ ಅಧಿಕಾರ ಇತ್ತು. ಪೊಲೀಸ್ ಠಾಣೆಗ ಹೋದವರನ್ನು ನಾಲ್ಕು ಜನರನ್ನ ಎನಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಲಿಂಗಾಯತ ಜಪ ಮಾಡುತ್ತಿದ್ದಾರೆ. ನಾವು ಸಭೆ ಮಾಡಿದ್ದು ನಿಜ, ಜಗದೀಶ್​ ಶೆಟ್ಟರ್ ಪಕ್ಷ ಬಿಟ್ಟು ಹೋಗಿದ್ದರ ಪರಿಣಾಮ ಏನಾಗುತ್ತೆ ಎಂದು ಚರ್ಚೆ ಮಾಡಿದ್ದೇವೆ. ಲಿಂಗಾಯತ ಮುಖ್ಯಮಂತ್ರಿ ಅನ್ನೋ ಪ್ರಶ್ನೆ ಇಲ್ಲ. ಕಾಂಗ್ರೆಸ್​ಗೆ ತಾಕತ್ ಧಮ್ ಇದ್ದರೇ ಲಿಂಗಾಯತ ಮುಖ್ಯಮಂತ್ರಿ ಮಾಡಲಿ ಎಂದು ಸವಾಲು ಹಾಕಿದರು.

ವಿಜಯಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರದಿರುವ ವಿಚಾರವಾಗಿ ಮಾತನಾಡಿದ ಅವರು ವಿಜಯಪುರದಲ್ಲಿ ಹಿಂದೂ ಮುಸ್ಲಿಂ ಇಲೆಕ್ಷನ್ ರೀ. ಅಲ್ಲಿ ಯಾರಾದರು ಹಿಂದೆ ಪಡೆಯಲಿ ಅಥವಾ ಬಿಡಲಿ ತಲೆ ಕೆಡಿಸಿಕೊಳ್ಳಬೇಡಿ. ಯಾವ ಬಿಗ್ ಶಾಕ್ ಇಲ್ಲ. ನನ್ನ ಶಾಕ್ ಬೇರೆ ಇದೆ ಎಂದು ಮಾತನಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Mon, 1 May 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!