AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಗೆಲ್ಲಲ್ಲ: ಹೆಚ್​ ಡಿ ಕುಮಾರಸ್ವಾಮಿ

ಹೆಚ್​.ಡಿ.ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ. ಶಕುನಿಗಳು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಮುಗಿಸಬೇಕು ಅಂತಿವೆ. ಹಾಸನ ಕ್ಷೇತ್ರದ ಟಿಕೆಟ್​ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್​ ಗೆಲ್ಲಿಸಬೇಕೆಂಬುದೆ ನನ್ನ ಗುರಿ. ಹೆಚ್​.ಡಿ.ರೇವಣ್ಣ 2 ಕ್ಷೇತ್ರಗಳ ಟಿಕೆಟ್​ ಕೇಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಗೆಲ್ಲಲ್ಲ: ಹೆಚ್​ ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 11, 2023 | 1:11 PM

Share

ಹಾಸನ: ಹಾಸನ (Hassan) ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣ (Bhavani Revanna) ಸ್ಪರ್ಧೆ ಮಾಡಿದರೆ ಗೆಲ್ಲಲ್ಲ. ಹಾಸನ ಕ್ಷೇತ್ರದಲ್ಲಿ ಕಾರ್ಯಕರ್ತರ ತೀರ್ಮಾನವೇ ಅಂತಿಮ. ವಾಸ್ತವಿಕ, ಗ್ರೌಂಡ್​ ರಿಯಾಲಿಟಿ ಮೇಲೆ ಟಿಕೆಟ್​​ ನೀಡುತ್ತೇವೆ. ಒಂದೂವರೆ ವರ್ಷದ ಹಿಂದೆ ಹಾಸನದ ಶಾಸಕರು ಸವಾಲು ಹಾಕಿದ್ದರು. ಹಾಗಾಗಿ ಸಾಮಾನ್ಯ ಕಾರ್ಯಕರ್ತನ ನಿಲ್ಲಿಸಿ ಗೆಲ್ಲುತ್ತೇನೆ ಎಂದಿದ್ದೇನೆ. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿ ಮಠಕ್ಕೆ ತೆರಳಿ, ಸ್ವಾಮೀಜಿ ದರ್ಶನ ಪಡೆದು ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತಾನಾಡಿದ ಅವರು ಹೆಚ್​.ಡಿ.ರೇವಣ್ಣ ಕುಟುಂಬಕ್ಕೆ ಯಾರೋ ತಲೆ ತುಂಬುತ್ತಿದ್ದಾರೆ. ಶಕುನಿಗಳು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಮುಗಿಸಬೇಕು ಅಂತಿವೆ. ಹಾಸನ ಕ್ಷೇತ್ರದ ಟಿಕೆಟ್​ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್​ ಗೆಲ್ಲಿಸಬೇಕೆಂಬುದೇ ನನ್ನ ಗುರಿ. ಹೆಚ್​.ಡಿ.ರೇವಣ್ಣ 2 ಕ್ಷೇತ್ರಗಳ ಟಿಕೆಟ್​ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಹಾಸನ ‘ಕುಟುಂಬ ಕಲಹಕ್ಕೆ’ ಹೊಸ ತಂತ್ರ ಮುಂದಿಟ್ಟ ಹೆಚ್​ಡಿ ರೇವಣ್ಣ, ಇಷ್ಟಕ್ಕೂ ಅವರ ಇರಾದೆ ಏನು? ದೊಡ್ಡಗೌಡರು ತಥಾಸ್ತು ಅಂತಾರಾ?

ಎಲ್ಲಾ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರತಿಕ್ರಿಯೆ ನಡೆಯುತ್ತಿದೆ. ನಾನು ನಿರಂತರವಾಗಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದೆನೆ. ಕೆಲವು ಸಣ್ಣ- ಪುಟ್ಟ ಸಮಸ್ಯೆಗಳಿಂದ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ. ಗೊಂದಲ ಬಗ್ಗೆ ಹಲವಾರು ಚರ್ಚೆ, ನಾಲ್ಕು ಗೋಡೆಗಳ ಮಧ್ಯೆ ನಡೆದಿದ್ದು, ಮಾಧ್ಯಮಗಳಿಗೆ ತಮಗೆ ಏನು ಬೇಕೋ ಹಾಗೇ ಮಾತನಾಡುತ್ತಿದ್ದಾರೆ‌ ಎಂದು ಮಾಧ್ಯಮಗಳ ಮೇಲೆ ಹರಿಹಾಯ್ದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಈಗ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಈ ಹಿಂದೆ ದಲಿತ ಕಾರ್ಡ್​ನನ್ನು ಕೊಟ್ಟಾಗ ಅವರು ಉಪಯೋಗ ಮಾಡಿಕೊಳ್ಳಿಲ್ಲ. ಈಗ ಅವರು ದಲಿತ ಸಿಎಂ ಬಗ್ಗೆ ಮಾತನಾಡುತ್ತಾರೆ ಎಂದು ವಾಗ್ದಾಳಿ ಮಾಡಿದರು.

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:07 pm, Tue, 11 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್