AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jagadish Shettar: ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ಗೆ ಬಂದರೆ ಸ್ವಾಗತ; ಸಿದ್ದರಾಮಯ್ಯ

ಬಿಜೆಪಿ ಹಿರಿಯ ನಾಯಕ ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Jagadish Shettar: ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ಗೆ ಬಂದರೆ ಸ್ವಾಗತ; ಸಿದ್ದರಾಮಯ್ಯ
ಸಿದ್ದರಾಮಯ್ಯImage Credit source: PTI
Ganapathi Sharma
|

Updated on: Apr 15, 2023 | 12:48 PM

Share

ಬೆಳಗಾವಿ: ಬಿಜೆಪಿ ಹಿರಿಯ ನಾಯಕ ಜಗದೀಶ್​ ಶೆಟ್ಟರ್​ (Jagadish Shettar) ಕಾಂಗ್ರೆಸ್​ಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಕೆಎಸ್ ಈಶ್ವರಪ್ಪ ಪಕ್ಷದ ಸಿದ್ಧಾಂತ ಎನ್ನುತ್ತಿದ್ದರು, ಈಗ ಎಲ್ಲಿಗೆ ಹೋದರು? ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರ್ಪಡೆಯಿಂದ ಪಕ್ಷಕ್ಕೆ ಲಾಭ ಆಗಲಿದೆ. ಲಕ್ಷ್ಮಣ ಸವದಿ ಕೇಳಿದ ಕಡೆ ಪ್ರಚಾರದ ಜವಾಬ್ದಾರಿ ಕೊಡುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿಯ ಟಿಕೆಟ್ ವಂಚಿತ ಶಾಸಕ ಅನಿಲ್ ಬೆನಕೆ ನನ್ನ ಸಂಪರ್ಕಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ವರುಣಾ ಕ್ಷೇತ್ರದಲ್ಲಿ ವಸತಿ ಸಚಿವ ವಿ. ಸೋಮಣ್ಣ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ವಿ.ಸೋಮಣ್ಣ ಹೊರಗಿನವರು. ವರುಣಾದಲ್ಲಿ ಅವರ ಒಂದು ಮತವೂ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ, ಸವದಿ ಮುಖಾಮುಖಿ

ಬೆಳಗಾವಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹಾಗೂ ಲಕ್ಷ್ಮಣ ಸವದಿ ಮುಖಾಮುಖಿಯಾದರು. ನಂತರ ಉಭಯ ನಾಯಕರು ಕೆಲ ಹೊತ್ತು ಮಾತುಕತೆ ನಡೆಸಿದರು. ಸಿದ್ದರಾಮಯ್ಯ ಅವರು ಸಾಂಬ್ರಾ ‌ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹಳಿಯಾಳಕ್ಕೆ ತೆರಳುತ್ತಿದ್ದರು. ಇದೇ ವೇಳೆ ಕಾಂಗ್ರೆಸ್ ಸೇರ್ಪಡೆ ಬಳಿಕ ಬೆಂಗಳೂರಿನಿಂದ ‌ಬೆಳಗಾವಿಗೆ ಆಗಮಿಸಿದ್ದ ಲಕ್ಷ್ಮಣ ಸವದಿ ಮುಖಾಮುಖಿಯಾದರು.

ಇದನ್ನೂ ಓದಿ: Rahul Gandhi: ಏ.16ರಿಂದ ರಾಹುಲ್​ ಗಾಂಧಿ ಎರಡು ದಿನ ರಾಜ್ಯ ಪ್ರವಾಸ: ಕೋಲಾರದಲ್ಲಿ ಬೃಹತ್​ ಸಮಾವೇಶ

ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಶುಕ್ರವಾರ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸವದಿ ಯಾವುದೇ ಷರತ್ತು ನಮ್ಮ ಮುಂದಿಟ್ಟಿಲ್ಲ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕು ಮತ್ತು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದಷ್ಟೇ ಹೇಳಿದ್ದಾರೆ ಎಂದು ತಿಳಿಸಿದ್ದರು.

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಇಂದೇ ಬಿಡುಗಡೆ; ಸಿದ್ದರಾಮಯ್ಯ

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಇಂದೇ ಬಿಡುಗಡೆಯಾಗಬಹುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ 5 ಕ್ಷೇತ್ರಗಳ ಹೆಸರು ಘೋಷಣೆಯಾಗಲಿದೆ. ನನ್ನನ್ನು ಎಲ್ಲಿ ಬೇಕಾದರೂ ಪ್ರಚಾರಕ್ಕೆ ಬಳಸಿಕೊಳ್ಳಿ ಎಂದು ಸವದಿ ಹೇಳಿದ್ದಾರೆ. ಬೆಳಗಾವಿ ಸೇರಿ ಹಲವೆಡೆ ಕಾಂಗ್ರೆಸ್ ಪರ ಸವದಿ ಪ್ರಚಾರ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ