AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಪರ ಪ್ರಚಾರ ಮಾಡ್ತಾರಾ ರಿಷಬ್​​ ಶೆಟ್ಟಿ? ಸಿಎಂ ಬೊಮ್ಮಾಯಿ ಕೊಟ್ಟ ಸ್ಪಷ್ಟನೆ ಇಲ್ಲಿದೆ

ಬಸವರಾಜ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದಾಗ ಚಿತ್ರ ನಟ ರಿಷಬ್ ಅವರೂ ದೇಗುಲದಲ್ಲಿದ್ದುದು, ಮುಖ್ಯಮಂತ್ರಿಗಳ ಪಾದ ಮುಟ್ಟಿ ನಮಸ್ಕರಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಗಣಪತಿ ಶರ್ಮಾ
|

Updated on: Apr 13, 2023 | 4:07 PM

Share

ಮುಖ್ಯಾಂಶಗಳು

  • ಮುಂದುವರಿದ ಸಿಎಂ ಬೊಮ್ಮಾಯಿ ಟೆಂಪಲ್ ರನ್.
  • ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ರಿಷಬ್ ಶೆಟ್ಟಿಯ ಭೇಟಿಯಾದ ಬೊಮ್ಮಾಯಿ.
  • ಬಿಜೆಪಿ ಪರ ರಿಷಬ್ ಪ್ರಚಾರ ಮಾಡ್ತಾರಾ? ಏನಂದ್ರು ಬೊಮ್ಮಾಯಿ? ಇಲ್ಲಿದೆ ನೋಡಿ.

ಕೊಲ್ಲೂರು: ರಾಜ್ಯ ವಿಧಾನಸಭೆ ಚುನಾವಣೆಯ ಕಾವು ಏರುತ್ತಿರುವಂತೆಯೇ ಪಕ್ಷಗಳ ಪ್ರಚಾರದ ಭರಾಟೆಯೂ ಜೋರಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವು ದೇಗುಲಗಳಿಗೆ ಭೇಟಿ ನೀಡಿದ್ದು ಗುರುವಾರ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಚಿತ್ರ ನಟ ರಿಷಬ್ (Rishab Shetty) ಅವರೂ ದೇಗುಲದಲ್ಲಿದ್ದು, ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೊಮ್ಮಾಯಿ ದೇಗುಲ ಪ್ರವೇಶಿಸುತ್ತಿದ್ದಂತೆಯೇ ಅವರನ್ನು ಎದುರಾದ ರಿಷಬ್, ಕಾಲು ಮುಟ್ಟಿ ನಮಸ್ಕರಿಸಿರುವ ವಿಡಿಯೋ ಪ್ರಸಾರವಾಗಿದ್ದು ಕುತೂಹಲ ಮೂಡಿಸಿದೆ.

ಇತ್ತೀಚೆಗಷ್ಟೇ ನಟ ಸುದೀಪ್ ಅವರು ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ್ದರು. ನಾನು ಹೇಳಿದವರ ಪರ ಸುದೀಪ್ ಪ್ರಚಾರ ಮಾಡಲಿದ್ದಾರೆ ಎಂದು ಬೊಮ್ಮಾಯಿಯೂ ಹೇಳಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ರಿಷಬ್ ಅವರು ಬೊಮ್ಮಾಯಿಯನ್ನು ಭೇಟಿಯಾಗಿದ್ದಾರೆ. ರಿಷಬ್ ಶೆಟ್ಟಿ ಬಿಜೆಪಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆಯೇ ಎಂಬ ವದಂತಿಗಳು ಹರಿದಾಡಿವೆ. ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ ರಿಷಬ್ ಪ್ರಚಾರ ಮಾಡುವ ಬಗ್ಗೆ ಯಾವುದೇ ತೀರ್ಮಾನ ಸದ್ಯಕ್ಕೆ ಆಗಿಲ್ಲ. ಇದೊಂದು ಆಕಸ್ಮಿಕ ಭೇಟಿಯಷ್ಟೇ ಎಂದಿದ್ದಾರೆ.

ಇದನ್ನೂ ಓದಿ: Karnataka Assembly Polls: ಮುಖ್ಯಮಂತ್ರಿ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ತೆರಳಿದ್ದಾಗ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಸಿಕ್ಕರು!

ಪ್ರಚಾರದ ವಿಚಾರವಾಗಿ ಈವರೆಗೆ ನಟ ರಿಷಬ್​​ ಶೆಟ್ಟಿ ಜತೆ ಯಾವುದೇ ಮಾತುಕತೆ ನಡೆದಿಲ್ಲ. ಆದರೆ, ನಮ್ಮ ಸಿದ್ಧಾಂತಕ್ಕೂ ಅವರ ಸಿದ್ಧಾಂತಕ್ಕೂ ಬಹಳ ಸಾಮ್ಯತೆ ಇದೆ. ಅವರು ಆಕಸ್ಮಿಕವಾಗಿ ದೇವಸ್ಥಾನದಲ್ಲಿ ನನಗೆ ಸಿಕ್ಕಿದ್ದಾರೆ. ನಾನು ಬರುವ ಮೊದಲೇ ರಿಷಬ್​ ಶೆಟ್ಟಿ ದೇವಸ್ಥಾನದಲ್ಲಿ ಇದ್ದರು. ಅವರು ಅಲ್ಲಿದ್ದುದು ನನಗೆ ಆಶ್ಚರ್ಯ ಉಂಟು ಮಾಡಿತು. ನಾವು ಜೊತೆಗೆ ಹೋಗಿ ದೇವರಿಗೆ ಪೂಜೆಯನ್ನು ಸಲ್ಲಿಸಿದ್ದೇವೆ. ಇವು ಯಾವುವೂ ಪೂರ್ವ ನಿರ್ಧರಿತ ಆಗಿರಲಿಲ್ಲ. ರಿಷಬ್ ಈ ಹಿಂದೆ ಕೂಡ ನಮ್ಮ ಸಿದ್ಧಾಂತವನ್ನು ಪ್ರತಿಪಾದನೆ ಮಾಡಿದ್ದಾರೆ. ಬಿಜೆಪಿ, ನಾಯಕತ್ವ ಬಗ್ಗೆ ರಿಷಬ್​​ ಒಲವಿರುವ ಮಾತಾಡಿದ್ದಾರೆ. ಆದರೆ, ಪ್ರಚಾರದ ವಿಚಾರವಾಗಿ ಈವರೆಗೆ ಯಾವುದೇ ಮಾತುಕತೆಗಳು ನಮ್ಮ ನಡುವೆ ನಡೆದಿಲ್ಲ. ಮುಂದೆ ಮೂಕಾಂಬಿಕೆ ಏನು ಎಂಬ ಆಶೀರ್ವಾದ ಕೊಡುತ್ತಾಳೆ ನೋಡೋಣ ಎಂದು ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ