AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರಪೇಟೆಯಲ್ಲಿ 2.54 ಕೋಟಿ ರೂ. ಪತ್ತೆ ಕೇಸ್: ಕಾಂಗ್ರೆಸ್​ ಅಭ್ಯರ್ಥಿಗೆ ಐಟಿ ನೋಟಿಸ್

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲೆಂದು ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್​​ನ ವಿಲ್ಲಾ ಸುಮಾರು 4.05 ಕೋಟಿ ರೂಪಾಯಿ ಹಣ ಇಟ್ಟಿದ್ದರು.

ಬಂಗಾರಪೇಟೆಯಲ್ಲಿ 2.54 ಕೋಟಿ ರೂ. ಪತ್ತೆ ಕೇಸ್: ಕಾಂಗ್ರೆಸ್​ ಅಭ್ಯರ್ಥಿಗೆ ಐಟಿ ನೋಟಿಸ್
ಕಾಂಗ್ರೆಸ್​ ಅಭ್ಯರ್ಥಿ ನಾರಾಯಣಸ್ವಾಮಿ, ಪತ್ತೆಯಾದ ಹಣ
ಆಯೇಷಾ ಬಾನು
|

Updated on: May 08, 2023 | 1:01 PM

Share

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ₹2.54 ಕೋಟಿ ಪತ್ತೆಯಾಗಿದ್ದ ಕೇಸ್​ಗೆ ಸಂಬಂಧಿಸಿ ಬಂಗಾರಪೇಟೆ ಕಾಂಗ್ರೆಸ್​ ಅಭ್ಯರ್ಥಿ ನಾರಾಯಣಸ್ವಾಮಿಗೆ ಕಾರಣ ಕೇಳಿ ಐಟಿ ನೋಟಿಸ್​ ನೀಡಿದೆ. ಜಿಯೋನ್​​​​​ ಹಿಲ್ಸ್​ ಗಾಲ್ಫ್ ರೆಸಾರ್ಟ್​ನ 279 ನಂಬರ್ ವಿಲ್ಲಾದಲ್ಲಿ ಹಣ ಪತ್ತೆಯಾಗಿತ್ತು. ಮತದಾರರಿಗೆ ಹಂಚಲು ತಂದಿಟ್ಟಿದ್ದ ಹಣವನ್ನು ಕೆಜಿಎಫ್ SP ಧರಣಿದೇವಿ ಜಪ್ತಿ ಮಾಡಿದ್ದರು. ಪ್ರಕರಣ ಸಂಬಂಧ ಚುನಾವಣಾಧಿಕಾರಿ ಶ್ರುತಿ ಎಫ್​ಐಆರ್ ದಾಖಲಿಸಿದ್ದರು. ಸದ್ಯ ಹಣ ಸಂಗ್ರಹದ ಮೂಲ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲೆಂದು ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್​​ನ ವಿಲ್ಲಾ ಸುಮಾರು 4.05 ಕೋಟಿ ರೂಪಾಯಿ ಹಣ ಇಟ್ಟಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕೆಜಿಎಫ್ ಎಸ್ಪಿ ಧರಣಿದೇವಿ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿದ್ದು, ವಿಲ್ಲಾದ ರೂಮ್ ನಂಬರ್-279ನಲ್ಲಿ ಬೆಡ್​​ ಮೇಲೆ 500, 200, 2 ಸಾವಿರ ರೂ. ಮುಖಬೆಲೆಯ ಕಂತೆ ಕಂತೆ ಹಣ ಸಿಕ್ಕಿತ್ತು. ಬಂಗಾರಪೇಟೆ ಪಂಚಾಯಿತಿ ಹೆಸರು, ಬೂತ್​ಗಳ ಹೆಸರು ಬರೆದು ಎನ್ವಲಪ್ ಕವರ್​ಗಳಲ್ಲಿ ಹಣ ಇಟ್ಟಿದ್ದರು.

ಇದನ್ನೂ ಓದಿ: ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಶೋಭಾ ಕರಂದ್ಲಾಜೆ

ರೂಮ್​ನಲ್ಲಿ ಒಟ್ಟು 2 ಕೋಟಿ ರೂ. ಹಣ ಪತ್ತೆಯಾಗಿದ್ದವು. ಅಲ್ಲದೇ ವಿಲ್ಲಾದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಪರಿಶೀಲನೆ ನಡೆಸಿದಾಗ ಮೂರು ಗೋಣಿ ಚೀಲಗಳಲ್ಲಿ ತುಂಬಿಸಿ ಇಟ್ಟಿದ್ದ ಒಂದೂವರೆ ಕೋಟಿ ಹಣ ಪತ್ತೆಯಾಗಿತ್ತು. ಹೀಗೆ ಒಟ್ಟಾರೆ 4.5 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿತ್ತು. ಅಧಿಕಾರಿಗಳು ದಾಳಿ ಮಾಡುವ ಮುಂಚೆಯೇ ಹಣ ತಂದಿಟ್ಟವರು ಎಸ್ಕೇಪ್ ಆಗಿದ್ದರು.

ಇನ್ನು ದಾಖಲೆಗಳ ಪರಿಶೀಲನೆ ನಡೆಸಿದಾಗ ಈ ವಿಲ್ಲಾ ಬೆಂಗಳೂರು ಮೂಲದ ಪೋನಿಕಾ ಕಾಪಾಡಿಯಾ ವೈಫ್ ಆಫ್ ಕರನ್ ಕಾಪಾಡಿಯಾ ಎಂಬುವರ ಹೆಸರಿನಲ್ಲಿದೆ. ರಮೇಶ್ ಯಾದವ್ ಎಂಬವರು ಬಾಡಿಗೆ ಪಡೆದಿದ್ದಾರೆ ಎಂಬುದು ಗೊತ್ತಾಗಿತ್ತು. ಕಾರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮುಖಂಡನದ್ದು ಎಂಬ ಮಾಹಿತಿ ಸಿಕ್ಕಿದ್ದು, ಪೊಲೀಸ್ರು ತನಿಖೆ ಕೈಗೊಂಡಿದ್ದರು. ಸದ್ಯ ಈಗ ಬಂಗಾರಪೇಟೆ ಕಾಂಗ್ರೆಸ್​ ಅಭ್ಯರ್ಥಿ ನಾರಾಯಣಸ್ವಾಮಿಗೆ ಐಟಿ ನೋಟಿಸ್ ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು