AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರಪೇಟೆಯಲ್ಲಿ 2.54 ಕೋಟಿ ರೂ. ಪತ್ತೆ ಕೇಸ್: ಕಾಂಗ್ರೆಸ್​ ಅಭ್ಯರ್ಥಿಗೆ ಐಟಿ ನೋಟಿಸ್

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲೆಂದು ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್​​ನ ವಿಲ್ಲಾ ಸುಮಾರು 4.05 ಕೋಟಿ ರೂಪಾಯಿ ಹಣ ಇಟ್ಟಿದ್ದರು.

ಬಂಗಾರಪೇಟೆಯಲ್ಲಿ 2.54 ಕೋಟಿ ರೂ. ಪತ್ತೆ ಕೇಸ್: ಕಾಂಗ್ರೆಸ್​ ಅಭ್ಯರ್ಥಿಗೆ ಐಟಿ ನೋಟಿಸ್
ಕಾಂಗ್ರೆಸ್​ ಅಭ್ಯರ್ಥಿ ನಾರಾಯಣಸ್ವಾಮಿ, ಪತ್ತೆಯಾದ ಹಣ
ಆಯೇಷಾ ಬಾನು
|

Updated on: May 08, 2023 | 1:01 PM

Share

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ₹2.54 ಕೋಟಿ ಪತ್ತೆಯಾಗಿದ್ದ ಕೇಸ್​ಗೆ ಸಂಬಂಧಿಸಿ ಬಂಗಾರಪೇಟೆ ಕಾಂಗ್ರೆಸ್​ ಅಭ್ಯರ್ಥಿ ನಾರಾಯಣಸ್ವಾಮಿಗೆ ಕಾರಣ ಕೇಳಿ ಐಟಿ ನೋಟಿಸ್​ ನೀಡಿದೆ. ಜಿಯೋನ್​​​​​ ಹಿಲ್ಸ್​ ಗಾಲ್ಫ್ ರೆಸಾರ್ಟ್​ನ 279 ನಂಬರ್ ವಿಲ್ಲಾದಲ್ಲಿ ಹಣ ಪತ್ತೆಯಾಗಿತ್ತು. ಮತದಾರರಿಗೆ ಹಂಚಲು ತಂದಿಟ್ಟಿದ್ದ ಹಣವನ್ನು ಕೆಜಿಎಫ್ SP ಧರಣಿದೇವಿ ಜಪ್ತಿ ಮಾಡಿದ್ದರು. ಪ್ರಕರಣ ಸಂಬಂಧ ಚುನಾವಣಾಧಿಕಾರಿ ಶ್ರುತಿ ಎಫ್​ಐಆರ್ ದಾಖಲಿಸಿದ್ದರು. ಸದ್ಯ ಹಣ ಸಂಗ್ರಹದ ಮೂಲ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲೆಂದು ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್​​ನ ವಿಲ್ಲಾ ಸುಮಾರು 4.05 ಕೋಟಿ ರೂಪಾಯಿ ಹಣ ಇಟ್ಟಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕೆಜಿಎಫ್ ಎಸ್ಪಿ ಧರಣಿದೇವಿ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿದ್ದು, ವಿಲ್ಲಾದ ರೂಮ್ ನಂಬರ್-279ನಲ್ಲಿ ಬೆಡ್​​ ಮೇಲೆ 500, 200, 2 ಸಾವಿರ ರೂ. ಮುಖಬೆಲೆಯ ಕಂತೆ ಕಂತೆ ಹಣ ಸಿಕ್ಕಿತ್ತು. ಬಂಗಾರಪೇಟೆ ಪಂಚಾಯಿತಿ ಹೆಸರು, ಬೂತ್​ಗಳ ಹೆಸರು ಬರೆದು ಎನ್ವಲಪ್ ಕವರ್​ಗಳಲ್ಲಿ ಹಣ ಇಟ್ಟಿದ್ದರು.

ಇದನ್ನೂ ಓದಿ: ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಶೋಭಾ ಕರಂದ್ಲಾಜೆ

ರೂಮ್​ನಲ್ಲಿ ಒಟ್ಟು 2 ಕೋಟಿ ರೂ. ಹಣ ಪತ್ತೆಯಾಗಿದ್ದವು. ಅಲ್ಲದೇ ವಿಲ್ಲಾದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಪರಿಶೀಲನೆ ನಡೆಸಿದಾಗ ಮೂರು ಗೋಣಿ ಚೀಲಗಳಲ್ಲಿ ತುಂಬಿಸಿ ಇಟ್ಟಿದ್ದ ಒಂದೂವರೆ ಕೋಟಿ ಹಣ ಪತ್ತೆಯಾಗಿತ್ತು. ಹೀಗೆ ಒಟ್ಟಾರೆ 4.5 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿತ್ತು. ಅಧಿಕಾರಿಗಳು ದಾಳಿ ಮಾಡುವ ಮುಂಚೆಯೇ ಹಣ ತಂದಿಟ್ಟವರು ಎಸ್ಕೇಪ್ ಆಗಿದ್ದರು.

ಇನ್ನು ದಾಖಲೆಗಳ ಪರಿಶೀಲನೆ ನಡೆಸಿದಾಗ ಈ ವಿಲ್ಲಾ ಬೆಂಗಳೂರು ಮೂಲದ ಪೋನಿಕಾ ಕಾಪಾಡಿಯಾ ವೈಫ್ ಆಫ್ ಕರನ್ ಕಾಪಾಡಿಯಾ ಎಂಬುವರ ಹೆಸರಿನಲ್ಲಿದೆ. ರಮೇಶ್ ಯಾದವ್ ಎಂಬವರು ಬಾಡಿಗೆ ಪಡೆದಿದ್ದಾರೆ ಎಂಬುದು ಗೊತ್ತಾಗಿತ್ತು. ಕಾರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮುಖಂಡನದ್ದು ಎಂಬ ಮಾಹಿತಿ ಸಿಕ್ಕಿದ್ದು, ಪೊಲೀಸ್ರು ತನಿಖೆ ಕೈಗೊಂಡಿದ್ದರು. ಸದ್ಯ ಈಗ ಬಂಗಾರಪೇಟೆ ಕಾಂಗ್ರೆಸ್​ ಅಭ್ಯರ್ಥಿ ನಾರಾಯಣಸ್ವಾಮಿಗೆ ಐಟಿ ನೋಟಿಸ್ ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ