AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನಕ್ಕೂ ಮುನ್ನವೇ ಐಟಿ ಶಾಕ್​​, ಜೆಡಿಎಸ್​ ಅಭ್ಯರ್ಥಿ ಮನೆ ಮೇಲೆ ದಾಳಿ: ಪತ್ನಿ ವಶಕ್ಕೆ

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇರುವಾಗಲೇ ಜಿಲ್ಲೆಯ ಹಿರಿಯೂರು ಕ್ಷೇತ್ರದ JDS ಅಭ್ಯರ್ಥಿ ರವೀಂದ್ರಪ್ಪ ಅವರ ಮೇಲೆ ಐಟಿ ದಾಳಿ ಮಾಡುವ ಮೂಲಕ ಶಾಕ್​ ನೀಡಿದೆ.

ಮತದಾನಕ್ಕೂ ಮುನ್ನವೇ ಐಟಿ ಶಾಕ್​​, ಜೆಡಿಎಸ್​ ಅಭ್ಯರ್ಥಿ ಮನೆ ಮೇಲೆ ದಾಳಿ: ಪತ್ನಿ ವಶಕ್ಕೆ
ಪತ್ನಿ ಲತಾ, ಡಿಎಸ್​ ಅಭ್ಯರ್ಥಿ ರವೀಂದ್ರಪ್ಪ
ಗಂಗಾಧರ​ ಬ. ಸಾಬೋಜಿ
|

Updated on:May 09, 2023 | 7:11 PM

Share

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇರುವಾಗಲೇ ಜಿಲ್ಲೆಯ ಹಿರಿಯೂರು ಕ್ಷೇತ್ರದ JDS ಅಭ್ಯರ್ಥಿ ರವೀಂದ್ರಪ್ಪ ಅವರ ಮೇಲೆ ಐಟಿ ದಾಳಿ ಮಾಡುವ ಮೂಲಕ ಶಾಕ್​ ನೀಡಿದೆ. ಹಿರಿಯೂರಿನಲ್ಲಿರುವ ಮನೆ ಮೇಲೆ 6 ಜನ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ರವೀಂದ್ರಪ್ಪ ಪತ್ನಿ ಲತಾ ಅವರನ್ನು ಐಟಿ ವಶಕ್ಕೆ ಪಡೆದಿದೆ. ಸೊಸೆ ಶ್ವೇತಾರನ್ನು ಅಧಿಕಾರಿಗಳು ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಏಪ್ರಿಲ್ 28ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸಾಕಷ್ಟು ದಾಖಲೆಗಳು ಲಭ್ಯವಾಗಿದ್ದು, ಅಧಿಕಾರಿಗಳು ಸೀಜ್​ ಮಾಡಿದ್ದರು. ವಿಚಾರಣೆಗೆ ಬರುವಂತೆ ರವೀಂದ್ರಪ್ಪಗೆ ಅಧಿಕಾರಿಗಳು ನೋಟಿಸ್ ನೀಡಿದ್ದರು.

ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಮಯ 2ಕ್ಕೆ 6 ಜನರ ಐಟಿ ಅಧಿಕಾಗಳ ತಂಡ ಮತ್ತೆ ಪರಿಶೀಲನೆ ಮಾಡಿದ್ದು, ವಶಕ್ಕೆ ಪಡೆದಿರುವ ಸಾಧ್ಯತೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕೋಳಿ, ಮೂರು ಸಾವಿರ ರೂ. ನಗದು ಆಮಿಷ: ಜೆಡಿಎಸ್​ ವಿರುದ್ಧ ಬಿಜೆಪಿ ಅಭ್ಯರ್ಥಿ ಆರೋಪ

ಮತದಾರರಿಗೆ ಹಂಚಲು ಮನೆಯಲ್ಲಿ ಹಣ ಸಂಗ್ರಹಿಸಿಟ್ಟ ಶಂಕೆ: ಕಾಂಗ್ರೆಸ್​ ಅಭ್ಯರ್ಥಿ ಸಂಬಂಧಿ ಮನೆಯಲ್ಲಿ ಶೋಧ

ಚಿಕ್ಕಬಳ್ಳಾಪುರ: ಮತದಾರರಿಗೆ ಹಂಚಲು ಮನೆಯಲ್ಲಿ ಹಣ ಸಂಗ್ರಹಿಸಿಟ್ಟ ಶಂಕೆ ಹಿನ್ನೆಲೆ ಕಾಂಗ್ರೆಸ್​ ಅಭ್ಯರ್ಥಿ ಪ್ರದೀಪ್ ಈಶ್ವರ್ ಸಂಬಂಧಿ ಶ್ರೀಧರ್ ಮನೆಯಲ್ಲಿ ಪೊಲೀಸರು ಶೋಧ ಮಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರದಲ್ಲಿರುವ ಶ್ರೀಧರ್ ಮನೆಯಲ್ಲಿ ಸರ್ಚ್ ವಾರಂಟ್ ಪಡೆದು ಪೊಲೀಸರಿಂದ ಪರಿಶೀಲನೆ ಮಾಡಿದ್ದಾರೆ.

ದೇವಲಾಪುರ ಕಾಲೋನಿ ತೋಟದ ಮನೆಯಲ್ಲಿ 50 ಲಕ್ಷ ಹಣ ಜಪ್ತಿ

ಮೈಸೂರು: ಚುನಾವಣಾಧಿಕಾರಿಗಳ ತಂಡದ ಮಿಂಚಿನ ಕಾರ್ಯಾಚರಣೆ ಮಾಡಿದ್ದು, ತೋಟದ ಮನೆಯಲ್ಲಿ ದಾಖಲೆ ಇಲ್ಲದೆ ಮತದಾರರಿಗೆ ಹಂಚಲು ಇಟ್ಟಿದ್ದ 50 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧಾರದ ಮೇರೆಗೆ ದೇವಲಾಪುರ ಕಾಲೋನಿ ತೋಟದ ಮನೆಯಲ್ಲಿ ಕಾರ್ಯಾಚರಣೆ ಮಾಡಿ ಬಚ್ಚಿಟ್ಟಿದ್ದ ಹಣ ಪತ್ತೆ ಮಾಡಿದ್ದಾರೆ.

ಇದನ್ನೂ ಓದಿ: ಬಿಡದಿ ಬಳಿಯ ವಂಡರ್ಲಾ ರೆಸಾರ್ಟ್​ ಮೇಲೆ ಐಟಿ ರೇಡ್: ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಶಂಕೆ

ಈ ವೇಳೆ ಅಧಿಕಾರಿಗಳ‌ ಜೊತೆ ಮಾತಿನ ಚಕಮಕಿ ಉಂಟಾಗಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹಣ ವಶಕ್ಕೆ ಪಡೆದುಕೊಂಡು ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲೇ ಇದ್ದ ಎಂ ಸ್ಯಾಂಡ್ ಒಳಗೆ ಮತ್ತಷ್ಟು ಹಣ ಬಚ್ಚಿಟ್ಟಿರುವ ಮಾಹಿತಿ ಹಿನ್ನೆಲೆ  ಜೆಸಿಬಿಯಿಂದ ಎಂ ಸ್ಯಾಂಡ್ ರಾಶಿ ತೆರವುಗೊಳಿಸಿ ಹುಡುಕಾಟ ಮಾಡಿದ್ದು, ಆದರೆ ಹಣ ಪತ್ತೆಯಾಗಿಲ್ಲ. ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಹಲವು ಕ್ಷೇತ್ರಗಳಲ್ಲಿ ಐಟಿ ದಾಳಿ 

ಬೆಂಗಳೂರಿನ ಹಲವು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಐಟಿ ಕಾರ್ಯಾಚರಣೆ ಮಾಡಿದ್ದು, ಸುಮಾರು 15.53 ಕೋಟಿ ರೂ, ನಗದು, ಹಾಗೂ 7 ಕೋಟಿ ಮೌಲ್ಯದ 10.14 ಕೆಜಿ ಚಿನ್ನಾಭರಣ ಸೀಜ್​ ಮಾಡಲಾಗಿದೆ. ಶಿವಾಜಿನಗರ ವ್ಯಾಪ್ತಿಯಲ್ಲಿ 4.77, ಆರ್​ಆರ್ ನಗರ ವ್ಯಾಪ್ತಿಯಲ್ಲಿ 3.44, ಮಲ್ಲೇಶ್ವರಂ ವ್ಯಾಪ್ತಿಯಲ್ಲಿ 3.35, ಪುಲಿಕೇಶಿನಗರ ವ್ಯಾಪ್ತಿಯಲ್ಲಿ 2.30 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Tue, 9 May 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!