AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ದಿನಾಂಕ ಘೋಷಣೆ ಮೊದಲೇ ಕರ್ನಾಟಕದಲ್ಲಿ 15 ಕೋಟಿ ರೂ. ನಗದು, 57.72 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ, 1,985 FIR

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ನಡೆದಿದ್ದು, ಚುನಾವಣೆ ದಿನಾಂಕ ಘೋಷಣೆ ಮೊದಲೇ ಕರ್ನಾಟಕದಲ್ಲಿ ಕೋಟಿಗಟ್ಟಲೇ ಹಣ ಜಪ್ತಿ ಮಾಡಲಾಗಿದೆ.

ಚುನಾವಣೆ ದಿನಾಂಕ ಘೋಷಣೆ ಮೊದಲೇ ಕರ್ನಾಟಕದಲ್ಲಿ 15 ಕೋಟಿ ರೂ. ನಗದು, 57.72 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ, 1,985 FIR
ರಮೇಶ್ ಬಿ. ಜವಳಗೇರಾ
|

Updated on: Mar 30, 2023 | 9:00 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ದಿನಾಂಕ ನಿಗದಿಯಾಗಿದೆ. ನಿನ್ನೇ ಅಷ್ಟೇ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಇದೇ ಮೇ 10ರಂದು ಮತದಾನ ನಡೆಯಲಿದ್ದು, ಮೇ.13ರಂದು ಮತ ಎಣಿಕೆ ನಡೆಯಲಿದೆ. ಇನ್ನು ರಾಜ್ಯದಲ್ಲಿ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಮತದಾರರ ಓಲೈಕೆಗಾಗಿ ಹಣ, ಅಡುಗೆ ಸಾಮಾಗ್ರಿಗಳು, ಸೀರೆ ಸೇರಿದಂತೆ ನಾನಾ ಗಿಫ್ಟ್​ಗಳನ್ನು ಹಂಚಿದ್ದಾರೆ. ಅಲ್ಲದೇ ದಾಖಲೆಗಳಿಲ್ಲದ ಕೋಟ್ಯಾನುಗಟ್ಟಲೇ ಹಣ ಪತ್ತೆಯಾಗಿದೆ. ಹೌದು… ರಾಜ್ಯದ ವಿಧಾನಸಭಾ ಚುನಾವಣೆ ಅಕ್ರಮಗಳ ಮೇಲೆ ಕಣ್ಗಾವಲು ಇಟ್ಟಿರುವ ಚುನಾವಣಾ ಆಯೋಗವು ಇದುವರೆಗೆ 15 ಕೋಟಿ ರೂ. ನಗದು ಸೇರಿದಂತೆ 57.72 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಬಗ್ಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Elections 2023: ನೀತಿ ಸಂಹಿತೆ ಉಲ್ಲಂಘನೆ ಕಂಡರೆ cVIGIL App​​ ಮೂಲಕ ದೂರು ಸಲ್ಲಿಸಿ; ಆ್ಯಪ್ ಬಳಸುವುದು ಹೇಗೆ?

ಚುನಾವಣಾ ಅಕ್ರಮಗಳ ಮೇಲೆ ನಿಗಾವಹಿಸಲು ವಿವಿಧ ತನಿಖಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪೊಲೀಸ್‌ ಇಲಾಖೆಯು 34.36 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ. 14.24 ಕೋಟಿ ರೂ. ನಗದು, 530 ಕೆಜಿ ಮಾದಕ ವಸ್ತುಗಳು, 15 ಕೆಜಿ ಚಿನ್ನ, 135 ಕೆಜಿ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದೆ. ಇನ್ನು ಅಬಕಾರಿ ಇಲಾಖೆಯು 6.84 ಕೋಟಿ ರೂ. ಮೌಲ್ಯದ 1,38,847 ಲೀಟರ್. ಮದ್ಯ ಮತ್ತು 43 ಕೆಜಿ ಮಾದಕ ವಸ್ತುಗಳನ್ನು ಜಪ್ತಿ ಮಾಡಿದೆ. ಆದಾಯ ತೆರಿಗೆ ಇಲಾಖೆಯು 1.16 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯು ಒಟ್ಟು 5.02 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ.

ಡಿಆರ್‌ಐನಿಂದ 1.03 ಕೋಟಿ ರೂ. ಮೌಲ್ಯದ ವಸ್ತುಗಳು, ಎನ್‌ಸಿಬಿಯಿಂದ 57.15 ಲಕ್ಷ ರು. ಮೌಲ್ಯದ ವಸ್ತುಗಳು, ಸಿಬಿಐಸಿಯಿಂದ 3.97 ಕೋಟಿ ರೂ. ಮೌಲ್ಯದ ವಸ್ತುಗಳು ಮತ್ತು ರಾಜ್ಯ ಸಿವಿಲ್‌ ಏವಿಯೇಷನ್‌ ವತಿಯಿಂದ 69.40 ಲಕ್ಷ ರು. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮಗಳಿಗೆ ಸಂಬಂಧಿಸಿದಂತೆ ಮಾರ್ಚ್ 9 ರಿಂದ ಮಾರ್ಚ್ 27 ರವರೆಗೆ ಒಟ್ಟು 1,985 ಎಫ್‌ಐಆರ್‌ಗಳು ದಾಖಲಾಗಿವೆ.

ರಾಜ್ಯದ ವಿಧಾನಸಭಾ ಚುನಾವಣೆ ಅಕ್ರಮಗಳ ಮೇಲೆ ಕಣ್ಗಾವಲು ಇಟ್ಟಿರುವ ಚುನಾವಣಾ ಆಯೋಗವು 2,040 ಫ್ಲೈಯಿಂಗ್ ಸ್ಕ್ವಾಡ್‌, 2,605 ಸ್ಟ್ಯಾಟಿಕ್ ಪರಿವೀಕ್ಷಣಾ ತಂಡ, 266 ವಿಡಿಯೋ ವೀಕ್ಷಣೆ ತಂಡಗಳು, 631 ವಿಡಿಯೋ ಕಣ್ಗಾವಲು ತಂಡ ಮತ್ತು 225 ಲೆಕ್ಕಪರಿಶೋಧಕ ತಂಡ ರಚಿಸಲಾಗಿದೆ ಮತ್ತು 942 ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಇನ್ನು ರಾಜಕೀಯ ಪಕ್ಷಗಳು ಮತದಾರರಿಗೆ ಸರಕು ಮತ್ತು ನಗದು ಹಂಚುವುದನ್ನು ತಡೆಯಲು ಅಂತಾರಾಜ್ಯ ಗಡಿಗಳಲ್ಲಿ ಒಟ್ಟು 171 ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?