ಟಿಕೆಟ್​ ಗೊಂದಲ: ಹೈಕಮಾಂಡ್​ ಬುಲಾವ್, ದೆಹಲಿಗೆ ಹೋಗುವ ಮುನ್ನ ಮಹತ್ವದ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್

ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಅವರನ್ನು ಹೈಕಮಾಂಡ್​ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಇನ್ನು ದೆಹಲಿಗೆ ಹೋಗುವ ಮುನ್ನ ಶೆಟ್ಟರ್​ ಪತ್ರಿಕಾಗೋಷ್ಠಿ ನಡೆಸಿ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಟಿಕೆಟ್​ ಗೊಂದಲ: ಹೈಕಮಾಂಡ್​ ಬುಲಾವ್, ದೆಹಲಿಗೆ ಹೋಗುವ ಮುನ್ನ ಮಹತ್ವದ ಹೇಳಿಕೆ ನೀಡಿದ ಜಗದೀಶ್ ಶೆಟ್ಟರ್
ಜಗದೀಶ್​ ಶೆಟ್ಟರ್​
Follow us
|

Updated on:Apr 12, 2023 | 8:13 AM

ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನು 2 ದಿನ ಮಾತ್ರ ಬಾಕಿ ಇರುವಾಗ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೊನೆಗೂ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೈಕಮಾಂಡ್ ಕೊಕ್​ ನೀಡಿದೆ. ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೆಗೂ ಸಹ ಮೊದಲ ಪಟ್ಟಿಯಲ್ಲಿ ಟಿಕೆಟ್​ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಶೆಟ್ಟರ್​ ಅವರನ್ನು ಹೈಕಮಾಂಡ್​ ದೆಹಲಿಗೆ ಬರುವಂತೆ ದಿಢೀರ್ ಬುಲಾವ್ ನೀಡಿದೆ. ಅದರಂತೆ ಜಗದೀಶ್ ಶೆಟ್ಟರ್​ ಇಂದು(ಏಪ್ರಿಲ್​​ 12) ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿ ಟಿಕೆಟ್​ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Jagadish Shettar: ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಕರೆ; ಏನಂದರು ಜಗದೀಶ್ ಶೆಟ್ಟರ್?

ದೆಹಲಿಗೆ ಹೋಗುವ ಮುನ್ನ ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನ ಭೇಟಿಯಾಗಬೇಕಿತ್ತು. ಆದ್ರೆ ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರ ಏರ್​ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರಬಹುದು ಎಂದು ಟಿಕೆಟ್​ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.

ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಪಕ್ಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನು ನಮ್ಮ ಸಚಿವರ ಮೂಲಕ ಮಾಡಿಸಿದ್ದೇನೆ. ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರು ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನುವುದಿಲ್ವಾ ಎಂದು ಪ್ರಶ್ನಿಸಿದ ಜಗದೀಶ್​ ಶೆಟ್ಟರ್, ರಾಷ್ಟ್ರೀಯ ನಾಯಕರ ಭಾವನೆ‌ ಮೇಲೆ ನನ್ನ ನಿರ್ಧಾರ ಆಗುತ್ತೆ ಎಂದು ಸ್ಪಷ್ಟಪಡಿಸಿದರು.

ಹುಬ್ಬಳ್ಳಿ ಸೆಂಟ್ರಲ್​ನಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡಿಕೊಂಡು ಬಂದಿದ್ದು, ಈ ಬಾರಿ ಹೊಸ ಮುಖಕ್ಕೆ ಟಿಕೆಟ್​ ನೀಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಿದೆ. ಆದ್ರೆ, ಶೆಟ್ಟರ್, ಈ ಬಾರಿ​ ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಘಂಟಾಘೋಷವಾಗಿ ಹೇಳಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹುಬ್ಬಳ್ಳಿ ಸೆಂಟ್ರಲ್​ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಸದ್ಯಕ್ಕೆ ಕಾಯ್ದಿರಿಸಿದೆ.

ಜಗದೀಶ್ ಶೆಟ್ಟರ್​ ಅವರನ್ನು ಮನವೊಲಿಸಿ ಹೊಸ ಮುಖಕ್ಕೆ ನೀಡುವ ಪ್ಲಾನ್ ಹೈಕಮಾಂಡ್ ಮಾಡಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್​, ಜಗದೀಶ್​ ಶೆಟ್ಟರ್​ ಅವರನ್ನು ಮನವೊಲಿಸಲು ಕೂಡಲೇ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಅದರಂತೆ ಶೆಟ್ಟರ್​ ದೆಹಲಿಯತ್ತ ಹೊರಟ್ಟಿದ್ದು, ಏನೆಲ್ಲಾ ಬೆಳವಣಿಗೆಗಳು ಆಗಲಿವೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:02 am, Wed, 12 April 23

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್