AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ-ಮೈದುನ ಫೈಟ್​: ಬಳ್ಳಾರಿಯಲ್ಲಿ ಸೋಮಶೇಖರ್​ ರೆಡ್ಡಿ ವಿರುದ್ಧ ನಾಮಪತ್ರ ಸಲ್ಲಿಸಿದ ಲಕ್ಷ್ಮೀ ಅರುಣಾ

ಇಂದು ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಕೆಆರ್​ಪಿಪಿ ಅಭ್ಯರ್ಥಿಯಾಗಿ ಲಕ್ಷ್ಮೀ ಅರುಣಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬೃಹತ್ ಮೆರವಣಿಗೆ ಮಾಡಿ, ನಂತರ ಪಾಲಿಕೆ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಅತ್ತೆ-ಮೈದುನ ಫೈಟ್​: ಬಳ್ಳಾರಿಯಲ್ಲಿ ಸೋಮಶೇಖರ್​ ರೆಡ್ಡಿ ವಿರುದ್ಧ ನಾಮಪತ್ರ ಸಲ್ಲಿಸಿದ ಲಕ್ಷ್ಮೀ ಅರುಣಾ
ನಮಪತ್ರ ಸಲ್ಲಿಸಿದ ಲಕ್ಷ್ಮೀ ಅರುಣಾ
ವಿವೇಕ ಬಿರಾದಾರ
|

Updated on:Apr 17, 2023 | 3:21 PM

Share

ಬಳ್ಳಾರಿ: ಮಾಜಿ ಸಚಿವ ಗಣಿ ಧಣಿ ಗಾಲಿ ಜನಾರ್ಧನ ರೆಡ್ಡಿ (Janardhan Reddy) ಬಿಜೆಪಿಯಿಂದ (BJP) ಹೊರ ಬಂದು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” (KRPP) ವನ್ನು ಸ್ಥಾಪಿಸಿದ್ದಾರೆ. ಕಲ್ಯಾಣ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಪಕ್ಷ ಸ್ಥಾಪಿಸಿದ್ದು, ಈ ಬಾರಿಯ ಚುನಾವಣೆಗೆ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳನ್ನು ಸುತ್ತುತ್ತಿದ್ದು, ಇದು ರಾಷ್ಟ್ರೀಯ ಪಕ್ಷಗಳಿಗೆ ತೆಲೆನೋವಾಗಿದೆ. ಜನಾರ್ದನ ರೆಡ್ಡಿ ಪಕ್ಷ, ಬಿಜೆಪಿ ಪಾಲಿಗೆ ಮುಳುವಾಗು ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯ ಕೆಲ ಮತಗಳು ರೆಡ್ಡಿ ಪಾಲಾಗುವ ಸಂಭವವಿದೆ. ಜನಾರ್ದನ ರೆಡ್ಡಿ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧವಾಗಿದ್ದಾರೆ. ಇದರಿಂದ ಈ ಕ್ಷೇತ್ರಗಳಲ್ಲಿ ಬಿಜೆಪಿಯ ಮತಗಳು ಇಬ್ಬಾವಾಗಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಜನಾರ್ದನ ರೆಡ್ಡಿ ಈಗಾಗಲೇ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಲಕ್ಮೀ ಅರುಣಾ ಅವರನ್ನು, ಬಿಜೆಪಿ ಅಭ್ಯರ್ಥಿ, ಸಹೋದರ ಸೋಮಶೇಖರ ರೆಡ್ಡಿ ವಿರುದ್ಧ ಕಣಕ್ಕಿಳಿಸಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಅತ್ತೆ ಮತ್ತು ಮೈದುನ ನಡುವೆ ಪೈಪೋಟಿ ಏರ್ಪಟ್ಟಿದೆ.

ಇನ್ನು ರಾಜ್ಯ ವಿಧಾನಸಭೆ ಚುನಾವಣೆಯ ಕದನಕ್ಕೆ ಕಲಿಗಳು ಸಜ್ಜಾಗುತ್ತಿದ್ದು, ಸ್ಪರ್ಧೆಗೆ ನೊಂದಾಯಿಸಿಕೊಳ್ಳುತ್ತಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು ಕೂಡಾ ನಾಮಪತ್ರ ಸಲ್ಲಿಸಿಸುತ್ತಿದ್ದಾರೆ. ಅದರಂತೆ ಇಂದು (ಏ.17) ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಕೆಆರ್​ಪಿಪಿ ಅಭ್ಯರ್ಥಿಯಾಗಿ ಲಕ್ಷ್ಮೀ ಅರುಣಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬೃಹತ್ ಮೆರವಣಿಗೆ ಮಾಡಿದ್ದು, ನಂತರ ಪಾಲಿಕೆ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸುವ ಮೂಲಕ ಮೈದುನ ಸೋಮಶೇಖರ್​ ರೆಡ್ಡಿ ಅವರಿಗೆ, ಈ ಬಾರಿ ವಿಜಯಪತಾಕೆ ನಾನೆ ಹಾರಿಸುವುದು ಎಂದಿದ್ದಾರೆ. ಲಕ್ಷ್ಮೀ ಅರುಣಾ ಅವರು ನಾಮಪತ್ರ ಸಲ್ಲಿಕೆ ವೇಳೆ ತಂದೆ ಪರಮೇಶ್ವರ ರೆಡ್ಡಿ, ತಾಯಿ ನಾಗಲಕ್ಷ್ಮೀ. ಪುತ್ರಿ ಬ್ರಹ್ಮಣಿ, ಅಳಿಯ ರಾಜೀವ ರೆಡ್ಡಿ ಸಾಥ್​ ನೀಡಿದ್ದಾರೆ.

ತೋರಿಕೆಯ ಫೈಟ್?

ಮೊತ್ತೊಂದಡೆ ಲಕ್ಷ್ಮೀ ಅರಣಾ ಸ್ಪರ್ಧೆ ತೋರಿಕೆಯ ಫೈಟ್​ ಎಂದು ಹೇಳಲಾಗುತ್ತಿದೆ. ಬಹಿರಂಗವಾಗಿ, ಪತ್ನಿಯನ್ನು ಜನಾರ್ದನ ರೆಡ್ಡಿ ಕಣಕ್ಕಿಳಿಸಿರುವುದು ಸಹೋದರನಿಗೆ ಮಾಡಿರುವ ಚಾಲೆಂಜ್ ಎಂತಲೇ ಕಾಣಿಸಿದೆ. ಜನಾರ್ದನ ರೆಡ್ಡಿಯ ಮಾತುಗಳೂ ಅದೇ ಅರ್ಥ ಬರುವಂತಿದ್ದವು. ಆದರೆ ಇದು ತೋರಿಕೆಗಾಗಿ ಮಾತ್ರವೇ ಕುಟುಂಬದವರ ನಡುವಿನ ಕದನವಾಗಿದೆಯೇ, ಇದೂ ಒಂದು ಗೇಮ್ ಪ್ಲಾನ್ ಆಗಿದೆಯೇ ಎಂಬ ಪ್ರಶ್ನೆಗಳೂ ಎದ್ದಿವೆ. ಬಿಜೆಪಿಗೂ ಕೆಆರ್​ಪಿಪಿ ಹೊಡೆತ ಕೊಡಬೇಕೆಂದಿದೆಯೇ ಅಥವಾ ಕಾಂಗ್ರೆಸ್‌ ಹೊಡೆತ ಕೊಡಬೇಕೆಂಬುದ ಉದ್ದೇಶವೇ ಎಂಬ ಅನುಮಾನಗಳೂ ವ್ಯಕ್ತವಾಗುತ್ತಿವೆ.

ಇದನ್ನೂ ಓದಿ: ದುಬಾರಿ ಬೆಲೆ ಬಾಳುವ ಕಾರುಗಳ ಒಡೆಯನಾಗಿದ್ದರೂ ಕೋಟಿಗಟ್ಟಲೇ ಸಾಲ ಹೊಂದಿರುವ ಬಳ್ಳಾರಿ ಬಿಜೆ‍ಪಿ ಅಭ್ಯರ್ಥಿ ಸೋಮಶೇಖರ್ ರೆಡ್ಡಿ

ರೆಡ್ಡಿಯಿಂದ ಬೆಳೆದವರೇ ಇಂದು ಅವರನ್ನ ದೂರಮಾಡಿದ್ದಾರೆ

ಕೆಲ ದಿನಗಳ ಹಿಂದೆ ಕೆಆರ್​ಪಿಪಿ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಮೈದುನ ಸೋಮಶೇಖರ ರೆಡ್ಡಿ ಮತ್ತು ಸಚಿವ, ಜನಾರ್ದನ ರೆಡ್ಡಿ ಗೆಳೆಯ ಶ್ರೀರಾಮುಲು ವಿರುದ್ಧ ಗುಡುಗಿದ್ದರು. ನನ್ನ ಪತಿ ಗಾಲಿ ಜನಾರ್ದನ ರೆಡ್ಡಿ ಹಲವು ನಾಯಕರನ್ನು ಬೆಳೆಸಿದ್ದಾರೆ. ಗ್ರಾ.ಪಂ. ಸದಸ್ಯರಿಂದ ಹಿಡಿದು ಮುಖ್ಯಮಂತ್ರಿ ಮಾಡಿದ್ದಾರೆ. ರೆಡ್ಡಿ ಹೇಳಿದಂತೆ ರಾಜಕೀಯ ಅಂದ್ರೆ ಮೋಸ, ತಂತ್ರ, ಕುತಂತ್ರ. ರಾಜಕೀಯದಲ್ಲಿ ಸ್ನೇಹ ಸಂಬಂಧ ಲೆಕ್ಕಕ್ಕೇ ಬರಲ್ಲ ಅಂತಾ ಹೇಳುತ್ತಾರೆ. ರೆಡ್ಡಿಯಿಂದ ಬೆಳೆದವರೇ ಇಂದು ಅವರನ್ನ ದೂರಮಾಡಿ ಹೋಗಿದ್ದಾರೆ ಎಂದು ಸೋಮಶೇಖರ ರೆಡ್ಡಿ, ಶ್ರೀರಾಮುಲು ವಿರುದ್ಧ ಲಕ್ಷ್ಮೀ ಪರೋಕ್ಷ ವಾಗ್ದಾಳಿ ಮಾಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Mon, 17 April 23

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ