AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ: ಭವಿಷ್ಯ ನುಡಿದ KRPP ಅಧ್ಯಕ್ಷ ಜನಾರ್ದನ ರೆಡ್ಡಿ

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ ಎಂದು ಕೆಆರ್​​ಪಿಪಿ ಸಂಸ್ಥಾಪಕ ಅಧ್ಯಕ್ಷ ಜಿ. ಜನಾರ್ದನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ: ಭವಿಷ್ಯ ನುಡಿದ KRPP ಅಧ್ಯಕ್ಷ ಜನಾರ್ದನ ರೆಡ್ಡಿ
ಜಿ. ಜನಾರ್ದನ ರೆಡ್ಡಿ
ಗಂಗಾಧರ​ ಬ. ಸಾಬೋಜಿ
|

Updated on:May 07, 2023 | 9:08 PM

Share

ಕಲಬುರಗಿ: ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ ಎಂದು ಕೆಆರ್​​ಪಿಪಿ ಸಂಸ್ಥಾಪಕ ಅಧ್ಯಕ್ಷ ಜಿ. ಜನಾರ್ದನ ರೆಡ್ಡಿ (Janardhana Reddy) ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೂಡ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕು ಅಂತ ಪಕ್ಷ ಕಟ್ಟಿದ್ದೇನೆ. ದಿಢೀರನೆ ಮುಖ್ಯಮಂತ್ರಿ ಆಗಲು ಪಕ್ಷ ಕಟ್ಟಿಲ್ಲ ಎಂದರು. ಯಡಿಯೂರಪ್ಪನವರಿಗೆ ಕಣ್ಣೀರು ಹಾಕಿಸಿರುವ ಬಿಜೆಪಿ ಸಂಪೂರ್ಣ ಮಣ್ಣುಪಾಲಾಗುತ್ತದೆ. ಯಡಿಯೂರಪ್ಪರನ್ನು ಮೊದಲು ಸಿಎಂ ಮಾಡಿದ್ದು ಜನಾರ್ದನ ರೆಡ್ಡಿ. 2018 ರಲ್ಲಿಯೇ ನಾನು ಪಕ್ಷ ಕಟ್ಟಬೇಕಿತ್ತು. ಆದರೆ ಯಡಿಯೂರಪ್ಪ ಮತ್ತೆ ಸಿಎಂ ಆಗೋದನ್ನು ತಪ್ಪಿಸಬಾರದು ಅಂತ ಸುಮ್ಮನಿದ್ದೆ ಎಂದು ಹೇಳಿದರು.

ಬಿಜೆಪಿ ಶ್ರೀರಾಮುಲು ಅವರನ್ನು ಮೂಲೆಗುಂಪು ಮಾಡಿದೆ: ಜಿ. ಜನಾರ್ದನ ರೆಡ್ಡಿ   

ಇದೀಗ ಶ್ರೀರಾಮುಲು ಅವರನ್ನು ಬಿಜೆಪಿಯವರು ಮೂಲೆಗುಂಪು ಮಾಡಿದ್ದಾರೆ. ಅವರನ್ನು ಪ್ರಚಾರಕ್ಕೆ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಹಣೆಬರ ಚೆನ್ನಾಗಿದ್ದರೆ ಮಣ್ಣು ಮುಟ್ಟಿದರೂ ಬಂಗಾರವಾಗುತ್ತೆ ಅಂತಾರೆ. ನಾನು ಮುಟ್ಟಿದ್ದ ಮಣ್ಣು ಬಂಗಾರ ಆಯಿತು. ನಾನು ಯಾವುದೇ ಗುಡ್ಡಗಳನ್ನು ನುಂಗಿಲ್ಲ. ನಾನು ಜೈಲಿಗೆ ಹೋಗಿ ಬಂದಿದ್ದೇನೆ ಅಂತ ಹೇಳುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಜೈಲಿಗೆ ಹೋಗಿ ಬಂದಿದ್ದಾರೆ ಎಂದರು.

ಇದನ್ನೂ ಓದಿ: ಮೇ 9,10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ: ಆಯೋಗ ಆದೇಶ

ಯಡಿಯೂರಪ್ಪರನ್ನು ಕೂಡ ಜೈಲಿಗೆ ಕಳುಹಿಸಿದ್ದರು. ಬಿಜೆಪಿ ರಾಜ್ಯದಲ್ಲಿ ಜಾತಿ ಹೆಸರಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಬಾರದು. ಇಲ್ಲದಿದ್ದರೆ ಇಡೀ ರಾಜ್ಯದಲ್ಲಿ ಬಿಜೆಪಿ ನಿರ್ನಾಮವಾಗುವುದು ಗ್ಯಾರಂಟಿ ಎಂದು ಹೇಳಿದರು.

ಮಹಿಳಾ‌ ಸಮಾವೇಶದಲ್ಲಿ ಸೆರಗೊಡ್ಡಿ ಮತಯಾಚನೆ ಮಾಡಿದ ಲಕ್ಷ್ಮೀ ಅರುಣಾ 

ಇತ್ತ ಬಳ್ಳಾರಿಯಲ್ಲಿ KRPP ಪಕ್ಷದಿಂದ ಬೃಹತ್​ ಮಹಿಳಾ‌ ಸಮಾವೇಶ ಆಯೋಜನೆ ಮಾಡಲಾಗಿತ್ತು. ಸಮಾವೇಶ ಉದ್ದೇಶಿಸಿ ಮಾತನಾಡಿದ KRPP ಅಭ್ಯರ್ಥಿ ಲಕ್ಷ್ಮೀ ಅರುಣಾ, ನಾನು ರಾಜಕೀಯ ಮನೆತನದಿಂದ ಬಡ ಕುಟುಂಬದಿಂದ ಬೆಳೆದು ಬಂದಿದ್ದೇನೆ. ರಾಜಕೀಯ ಕುತಂತ್ರವನ್ನ ಹತ್ತಿರದಿಂದ ನೋಡಿದ್ದೇನೆ. ಜನಾರ್ದನ ರೆಡ್ಡಿ ರಾಜಕೀಯವಾಗಿ ಎಲ್ಲರನ್ನೂ ಬೆಳೆಸಿದ್ದಾರೆ. ನಂಬಿದವರು, ಬೆಳಸಿದರವರು ಜೊತೆಗೆ ಇದ್ದವರು ನಮ್ಮನ್ನ ನಡು ನೀರಿನಲ್ಲಿ ಬಿಟ್ಟು ಹೋದರು ಎಂದು ಕಿಡಿಕಾರಿದರು.

ಒಂದು ಕಡೆ ನಾನು ಮಕ್ಕಳನ್ನ ಲಾಲನೆ ಪಾಲನೆ ಮಾಡಬೇಕು. ಇನ್ನೊಂದೆಡೆ ಕೇಸಗಳ ವಿಚಾರವನ್ನ ನೋಡಬೇಕು. ಜನಾರ್ದನ ರೆಡ್ಡಿ ಬಂಧನವಾದ ವೇಳೆ ದೀಪಾವಳಿಯ ವೇಳೆ ಮನೆಯಲ್ಲಿ ಕತ್ತಲು ಆವರಿಸಿತ್ತು. ಶಾಲೆಯಲ್ಲಿ ನನ್ನ ಮಕ್ಕಳಿಗೆ ಯಾರು ಎನೋ ಹೇಳ್ತಾರೋ ಅಂದು ಭಯಪಡುತ್ತಿದ್ದರು.

ಇದನ್ನೂ ಓದಿ: ನನ್ನ ನೋಡಿ ಮತ ಹಾಕಿ ಎನ್ನುವವರು ಆ ಪಕ್ಷ ಬಿಟ್ಟು ಬರ್ತಾರಾ? ಜಗದೀಶ್ ಶೆಟ್ಟರ್ ಹೇಳಿಕೆ ಪ್ರಲ್ಹಾದ್​​ ಜೋಶಿ ಟಾಂಗ್

ರಾಜಕೀಯ ಅಂದರೆ ಮೋಸ. ಮಹಾಭಾರತ ಶಕುನಿ ರೀತಿ ಮೋಸ ಮಾಡಿದರು. ರೆಡ್ಡಿ ಬಿಜೆಪಿಯನ್ನ ಅಧಿಕಾರಕ್ಕೆ ತಂದರು. ಆದರೆ ಅವರು ಮಾತ್ರ ಕಷ್ಟದಲ್ಲಿ ಸಿಲುಕಿಕೊಂಡಿದ್ದರು. ರೆಡ್ಡಿ ಒಂದು ಪಕ್ಷವನ್ನ ಅಧಿಕಾರಕ್ಕೆ ತಂದಿದ್ದರು. ಅದಕ್ಕಾಗಿ ವಿರೋಧ ಪಕ್ಷದವರು ಕೆಂಡದಂತಹ ಸಿಟ್ಟು ಹೊಂದಿದ್ದರು.

ನಮ್ಮನ್ನ ಕಷ್ಟಕ್ಕೆ ದುಕಿದವರು ಮತ್ತು ರಾಜಕೀಯ ನಾಯಕರು ನಮ್ಮನ್ನ ದೂರ ಮಾಡಿದ ಬಳಿಕ ಏನಾದರು ಸಾಧಿಸಬೇಕು ಅಂತಾ ಪಕ್ಷ ಸ್ಥಾಪನೆ ಮಾಡಿದ್ದೇವೆ ಎಂದು ಮಹಿಳಾ‌ ಸಮಾವೇಶದಲ್ಲಿ ಸೆರಗೊಡ್ಡಿ ಮತಯಾಚನೆ ಮಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 pm, Sun, 7 May 23

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್