AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್‌ ಕುಮಾರಸ್ವಾಮಿ ಆಸ್ತಿ ಮೌಲ್ಯ 77 ಕೋಟಿ, ಲ್ಯಾಂಬೊರ್ಗಿನಿ ಸಹಿತ ಐದು ಕಾರುಗಳ ಒಡೆಯ; ಇನ್ನೂ ಏನೆಲ್ಲ ಇವೆ? ಇಲ್ಲಿದೆ ವಿವರ

ರಾಜ್ಯ ವಿಧಾನಸಭೆ ಚುನಾವಣೆಗೆ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿರುವ ನಿಖಿಲ್ ಕುಮಾರಸ್ವಾಮಿ, ತಾವು ಹೊಂದಿರುವ ಆಸ್ತಿ ಹಾಗೂ ಸ್ವತ್ತುಗಳ ವಿವರ ಬಹಿರಂಗಪಡಿಸಿದ್ದಾರೆ. ವಿವರ ಇಲ್ಲಿದೆ.

ನಿಖಿಲ್‌ ಕುಮಾರಸ್ವಾಮಿ ಆಸ್ತಿ ಮೌಲ್ಯ 77 ಕೋಟಿ, ಲ್ಯಾಂಬೊರ್ಗಿನಿ ಸಹಿತ ಐದು ಕಾರುಗಳ ಒಡೆಯ; ಇನ್ನೂ ಏನೆಲ್ಲ ಇವೆ? ಇಲ್ಲಿದೆ ವಿವರ
ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ
Ganapathi Sharma
|

Updated on:Apr 18, 2023 | 2:22 PM

Share

ರಾಮನಗರ: ರಾಜ್ಯ ವಿಧಾನಸಭೆ ಚುನಾವಣೆಗೆ ರಾಮನಗರ ಕ್ಷೇತ್ರದಿಂದ ಜೆಡಿಎಸ್ (JDS) ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy), ತಾವು ಹೊಂದಿರುವ ಆಸ್ತಿ ಹಾಗೂ ಸ್ವತ್ತುಗಳ ವಿವರ ಬಹಿರಂಗಪಡಿಸಿದ್ದಾರೆ. ತಮ್ಮ ಕುಟುಂಬವು 77 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದೆ ಎಂದು ಅವರು ಅಫಿಡವಿಟ್​​ನಲ್ಲಿ ಉಲ್ಲೇಖಿಸಿದ್ದು, 38.94 ಕೋಟಿ ರೂ. ರೂ ಸಾಲದ ಹೊರೆ ಇದೆ. ಲ್ಯಾಂಬೊರ್ಗಿನಿ ಸಹಿತ ಐದು ಕಾರುಗಳು ಇವೆ ಎಂದು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದರು. ಇದೀಗ ರಾಮನಗರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಗೆಲ್ಲುವ ತವಕದಲ್ಲಿದ್ದಾರೆ.

  • ನಿಖಿಲ್ ಕುಮಾರಸ್ವಾಮಿ ಬಳಿ 46.81 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ.
  • ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಹೆಸರಿನಲ್ಲಿ 1.79 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ.
  • ನಿಖಿಲ್‌ ಕುಮಾರಸ್ವಾಮಿ ಬಳಿ 28 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ.
  • ರೇವತಿ ಬಳಿ 28 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ ಇದೆ.
  • 2019ರ ಲೋಕಸಭೆ ಚುನಾವಣೆ ವೇಳೆ ನಿಖಿಲ್‌ 74 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆ ಮಾಡಿಕೊಂಡಿದ್ದರು.

ನಿಖಿಲ್ ಬಳಿ ಇರುವ ಚರಾಸ್ತಿ ಯಾವುದೆಲ್ಲ?

ನಿಖಿಲ್ ಕುಮಾರಸ್ವಾಮಿ ಬಳಿ 1.01 ಲಕ್ಷ ರೂ. ನಗದು ಹಾಗೂ ಪತ್ನಿ ಬಳಿ 3.53 ಲಕ್ಷ ರೂ. ನಗದು ಇದೆ. ನಿಖಿಲ್ ಬಳಿ 2.16 ಕೋಟಿ ರೂ. ಮೊತ್ತದ ರೇಂಜ್‌ ರೋವರ್, 2.9 ಕೋಟಿ ರೂ. ಮೊತ್ತದ ಲ್ಯಾಂಬೊರ್ಗಿನಿ ಸೇರಿದಂತೆ ಐದು ಕಾರುಗಳಿವೆ.

ಚಿನ್ನ, ಬೆಳ್ಳಿ ಎಷ್ಟಿದೆ?

1151 ಗ್ರಾಂ ತೂಕದ 64.45 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಹಾಗೂ 16 ಕೆಜಿ ತೂಕದ 11.08 ಲಕ್ಷ ರೂ. ಮೌಲ್ಯದ ಬೆಳ್ಳಿ ನಿಖಿಲ್ ಬಳಿ ಇದೆ. ಅವರ ಪತ್ನಿ ರೇವತಿ ಬಳಿ ಬಳಿ 36.35 ಲಕ್ಷ ರೂ. ಮೌಲ್ಯದ 641 ಗ್ರಾಂ ಚಿನ್ನ, 11.33 ಲಕ್ಷ ರೂ. ಮೌಲ್ಯದ 12.59 ಕ್ಯಾರೆಟ್‌ನಷ್ಟು ವಜ್ರ ಹಾಗೂ 23.20 ಲಕ್ಷ ರೂ. ಮೌಲ್ಯದ 33.5 ಕೆಜಿ ಬೆಳ್ಳಿ ಇದೆ

ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ ನಿಖಿಲ್?

ಕಸ್ತೂರಿ ಮೀಡಿಯಾ ಪ್ರೈ.ಲಿ. ಕಂಪನಿಯಲ್ಲಿ ನಿಖಿಲ್‌ 76 ಲಕ್ಷ ರೂ, ಹೊರೈಜನ್‌ ರಿಯಾಲ್ಟಿ ಕಂಪನಿಯಲ್ಲಿ 6 ಕೋಟಿ ರೂ. ಸೇರಿದಂತೆ ವಿವಿಧೆಡೆ ಹಣ ಹೂಡಿಕೆ ಮಾಡಿದ್ದಾರೆ. ತಂದೆ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಅನೇಕರಿಗೆ ಸಾಲ ನೀಡಿದ್ದಾರೆ

ಎಲ್ಲೆಲ್ಲಿವೆ ನಿಖಿಲ್ ಚರಾಸ್ತಿ?

ನಿಖಿಲ್‌ ಕುಮಾರಸ್ವಾಮಿ ಬೆಂಗಳೂರಿನ ರಿಚ್‌ಮಂಡ್‌ ಟೌನ್‌ನಲ್ಲಿ ಮೂರು ವಾಣಿಜ್ಯ ಕಟ್ಟಡಗಳನ್ನು ಹೊಂದಿದ್ದು, ಇವುಗಳ ಸದ್ಯದ ಮಾರುಕಟ್ಟೆ ಮೌಲ್ಯ 28 ಕೋಟಿ ರೂ. ಇದೆ. ಸದ್ಯ ಯಾವುದೇ ಕೃಷಿ ಅಥವಾ ಕೃಷಿಯೇತರ ಭೂಮಿ ಹೊಂದಿಲ್ಲ. ಪತ್ನಿ ರೇವತಿ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿ 28.36 ಲಕ್ಷ ಮೌಲ್ಯದ ಅಪಾರ್ಟ್‌ಮೆಂಟ್‌ ಹೊಂದಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಆದಾಯವೆಷ್ಟು?

ನಿಖಿಲ್ ಕುಮಾರಸ್ವಾಮಿ ವಾರ್ಷಿಕ 4.27 ಕೋಟಿ ರೂ. ಆದಾಯ ಗಳಿಸುತ್ತಿದ್ದಾರೆ. 2021-22ನೇ ಸಾಲಿನಲ್ಲಿ ನಿಖಿಲ್‌ ಕುಮಾರಸ್ವಾಮಿ ವಾರ್ಷಿಕ 4.27 ಕೋಟಿ ವಾರ್ಷಿಕ ಆದಾಯ ಘೋಷಿಸಿಕೊಂಡಿದ್ದರು. 2017-18ರಲ್ಲಿ ಅವರ ವಾರ್ಷಿಕ ಆದಾಯ 71.42 ಲಕ್ಷ ರೂ. ಆಗಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Mon, 17 April 23

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು