AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Doddaballapura: ಮೂರು ಬಾರಿ ಸೋತು, ನಾಲ್ಕನೇ ಭಾರಿ ಅಗ್ನಿ ಪರೀಕ್ಷೆಗಿಳಿದ ಜೆಡಿಎಸ್​ ಅಭ್ಯರ್ಥಿ; ಈ ಬಾರಿಯಾದರೂ ಗೆಲ್ಲಿಸಿ ಎಂದು ಪತ್ನಿಯಿಂದ ಕಣ್ಣೀರ ಪಾಲಿಟಿಕ್ಸ್

ಆತ ಒಂದಲ್ಲ ಎರಡಲ್ಲ ಸತತವಾಗಿ ಮೂರು ಭಾರಿ ಒಂದೇ ಪಕ್ಷ ಹಾಗೂ ಒಂದೇ ಕ್ಷೇತ್ರದಿಂದ ಸ್ವರ್ಧೆ ಮಾಡಿದ್ರು, ಗೆಲುವು ಅನ್ನೂ ಅದೃಷ್ಟ ಕೈಹಿಡಿದಿರಲಿಲ್ಲ. ಆದರೂ, ಛಲ ಬಿಡದೆ ಇದೀಗ ನಾಲ್ಕನೆ ಭಾರಿಯಾದ್ರು ಗೆಲ್ಲಲೇಬೇಕೆಂದು ಅಖಾಡಕ್ಕಿಳಿದಿದ್ದು, ಪತಿಯ ಪರ ಕಣ್ಣೀರು ಸುರಿಸುತ್ತಾ ಸೆರಗೊಡ್ಡಿ ಮತ ಕೇಳುವ ಮೂಲಕ ಪತ್ನಿ ಗಂಡನ ಪರ ಅನುಕಂಪದ ಪ್ರಚಾರಕ್ಕಿಳಿದಿದ್ದಾರೆ.

Doddaballapura: ಮೂರು ಬಾರಿ ಸೋತು, ನಾಲ್ಕನೇ ಭಾರಿ ಅಗ್ನಿ ಪರೀಕ್ಷೆಗಿಳಿದ ಜೆಡಿಎಸ್​ ಅಭ್ಯರ್ಥಿ; ಈ ಬಾರಿಯಾದರೂ ಗೆಲ್ಲಿಸಿ ಎಂದು ಪತ್ನಿಯಿಂದ ಕಣ್ಣೀರ ಪಾಲಿಟಿಕ್ಸ್
ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ, ಜೆಡಿಎಸ್​ ಅಭ್ಯಥಿ ಬಿ.ಮುನೇಗೌಡ
ಕಿರಣ್ ಹನುಮಂತ್​ ಮಾದಾರ್
|

Updated on: Apr 30, 2023 | 8:34 AM

Share

ಬೆಂಗಳೂರು ಗ್ರಾಮಾಂತರ: ವಿಧಾನಸಭೆ ಚುನಾವಣಾ(Karnataka Assembly Election) ಕಣ ರಂಗೇರಿದ್ದು, ಇನ್ನು 10 ದಿನಗಳು ಬಾಕಿಯಿವೆ. ಅದರಂತೆ ಎಲ್ಲಾ ಪಕ್ಷಗಳು ಭರ್ಜರಿಯಾಗಿ ಮತಬೇಟೆಗೆ ಇಳಿದಿವೆ. ಇದೀಗ ಕಾರ್ಯಕರ್ತರ ಹಾಗೂ ದೇವೇಗೌಡರ ಮುಂದೆಯು ಕಣ್ಣೀರಾಕುತ್ತಾ, ಈ ಭಾರಿಯಾದರೂ ನನ್ನ ಗಂಡನ ಕೈಹಿಡಿಯಿರಿ ಎಂದು ಅಂಗಲಾಚುತ್ತಿರುವ ಇವರು ಜೆಡಿಎಸ್(JDS) ಅಭ್ಯರ್ಥಿಯ ಪತ್ನಿ. ಹೌದು ಅಂದಹಾಗೆ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ಭಾರಿಯಿಂದ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿ ಬಿ.ಮುನೇಗೌಡ(B Munegowda)ಗೆ ಕ್ಷೇತ್ರದ ಪ್ರಬಲ ಕಾಂಗ್ರೆಸ್​ ಅಭ್ಯರ್ಥಿ ಹಾಲಿ ಶಾಸಕ ಟಿ.ವೆಂಕಟರಮಣಯ್ಯ ವಿರುದ್ದ ಪ್ರತಿ ಭಾರಿಯು ಅಲ್ಪ ಮತಗಳ ಅಂತರದಿಂದ ಪರಾಜಯಗೊಳ್ಳುತ್ತಾ ಬಂದಿದ್ದಾರೆ. ಆದರೂ ಕೂಡ ಈ ಬಾರಿಯು ಜೆಡಿಎಸ್ ಪಕ್ಷದಿಂದಲೆ ಕಣಕ್ಕಿಳಿದಿದ್ದು, ಅದೇ ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ(T Venkataramanaiah) ಸ್ವರ್ಧೆಯಲ್ಲಿದ್ದಾರೆ. ಆದ್ರು, ಸಹ ಗೆಲ್ಲಲೆಬೇಕು ಎಂದು ಪಣತೊಟ್ಟಿರುವ ಅಭ್ಯರ್ಥಿ ಮುನೇಗೌಡ ಗೆಲುವಿನ ಆಸೆಗೆ ಈ ಭಾರಿ ಪತ್ನಿ ಕೈಜೋಡಿಸಿದ್ದು, ಪತಿ ಮುನೇಗೌಡ ಪರ ಅನುಕಂಪದ ಕ್ಯಾಂಪೇನ್ ಮಾಡ್ತಿದ್ದಾರೆ.

ಕಳೆದ 20 ನೇ ತಾರಿಕು ನಾಮಪತ್ರ ಸಲ್ಲಿಸಲು ಅಭ್ಯರ್ಥಿ ಮುನೇಗೌಡ ಜೊತೆ ಬಂದಿದ್ದ ಪತ್ನಿ ಪದ್ಮಾವತಿ, ಸೆರಗುಚಾಚಿ ಈ ಭಾರಿಯಾದರೂ ಕೈಹಿಡಿಯಿರಿ ಎಂದು ಬಹಿರಂಗ ಸಭೆಯಲ್ಲೆ ಗೋಗರೆದಿದ್ರು. ಹೀಗಾಗಿ ಅಂದು ಗಳಗಳನೆ ಅತ್ತ ಮುನೇಗೌಡ ಪತ್ನಿಯ ಕಣ್ಣೀರನ್ನ ಕಂಡು ಈ ಭಾರಿ ಗೆಲ್ಲಿಸುತ್ತೇವೆ ಅಳಬೇಡಿ ಎಂದು ಕೂಗಿ ಕೂಗಿ ಹೇಳಿದ್ರು. ಇನ್ನು ನಾಮಪತ್ರ ಸಲ್ಲಿಕೆ ದಿನದಿಂದಲು ಹಗಲಿರುಳು ಗಂಡನ ಪರ ಗ್ರಾಮ ಗ್ರಾಮ, ಮನೆ ಮನೆ ಪ್ರಚಾರ ಮಾಡುತ್ತಿರುವ ಪದ್ಮಾವತಿ ಹೋದ ಕಡೆಯಲೆಲ್ಲ ಕಣ್ಣೀರಾಕುತ್ತಾ ಅನುಕಂಪದ ಮೇಲೆ ಮತ ಸೆಳೆಯುವ ಪ್ರಯತ್ನ ಮಾಡ್ತಿದ್ದಾರೆ.

ಇದನ್ನೂ ಓದಿ:Narendra Modi: ಪ್ರಕಾಶ್ ಸಿಂಗ್ ಬಾದಲ್ ಮಹಾನ್ ರಾಜಕೀಯ ನಾಯಕ ಮಾತ್ರವಲ್ಲ, ಹೃದಯವಂತರು: ನರೇಂದ್ರ ಮೋದಿ ಪದ ನಮನ

ಜೊತೆಗೆ ನಿನ್ನೆ(ಏ.29) ಜೆಡಿಎಸ್ ಅಭ್ಯರ್ಥಿ ಪರ ಮತ ಕೇಳಲು ಬಂದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮಕ್ಕೆ ಆಗಮಿಸಿದ್ರು. ಈ ವೇಳೆ ದೇವೇಗೌಡರ ಮುಂದೆಯೂ ಕಣ್ನೀರಾಕುತ್ತಲೆ ಪತಿಯ ಪರ ಮತಯಾಚನೆ ಮಾಡಿದ್ರು. ದೇವೇಗೌಡರು ಕೂತಿದ್ದ ವೇದಿಕೆ ಮೇಲೆಯೆ ಮಾತನಾಡುತ್ತಾ ಸೆರಗೊಡ್ಡಿ ಮತಯಾಚಿಸಿದ ಪದ್ಮಾವತಿ. ಈ ಭಾರಿ ದೇವೇಗೌಡರು ಸಹ ನಮ್ಮ ಪರ ಮತಯಾಚನೆಗೆ ಬಂದಿದ್ದು, ಕೈಕೊಡಬೇಡಿ ನಮ್ಮನ್ನ ಗೆಲ್ಲಿಸಿ ಎಂದು ಅಂಗಲಾಚಿದ್ರು. ಇನ್ನು ಇದೇ ವೇಳೆ ಮೂರು ಬಾರಿ ಮುನೇಗೌಡ ಸೋತಿದ್ದು, ಈ ಭಾರಿಯಾದ್ರು ಗೆಲ್ಲಿಸಿ ಎಂದು ಅಭ್ಯರ್ಥಿ ಪರ ದೇವೇಗೌಡರು ಸಹ ಕ್ಯಾಂಪೇನ್ ನಡೆಸಿದ್ರು.

ಒಟ್ಟಾರೆ ಕಳೆದ ಮೂರು ಭಾರಿಯಿಂದ ಕೋಟಿ ಕೋಟಿ ಹಣ ಖರ್ಚು ಮಾಡಿ, ಸಾಕಷ್ಟು ಪ್ರಚಾರ ಮಾಡಿದ್ರು ಗೆಲುವಿನ ನಗೆ ಬೀರದ ಪತಿಯ ಪರವಾಗಿ ಇದೀಗ ಪತ್ನಿಯು ಅಖಾಡಕ್ಕಿಳಿದ್ದಿದ್ದು, ಪತಿ ಪರ ಕಣ್ಣೀರಿನ ಮೂಲಕ ಅನುಕಂಪದ ಮತ ಕೇಳುತ್ತಿದ್ದಾರೆ. ಇನ್ನು ಇದಕ್ಕೆಲ್ಲ ಕ್ಷೇತ್ರದ ಜನ ಮಣಿಯುತ್ತಾರ ಗೆಲುವಿನ ಮಾಲೇ ಕೊಡ್ತಾರ ಎನ್ನುವುದು ಮೇ 13 ಕ್ಕೆ ಗೊತ್ತಾಗಲಿದೆ.

ವರದಿ: ನವೀನ್ ಟಿವಿ9 ದೇವನಹಳ್ಳಿ

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ