AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS Ticket Fight: ಸಾಮಾನ್ಯ ಕಾರ್ಯಕರ್ತ ಅಂದ್ರೆ ಯಾರು; ಎಚ್​ಡಿಕೆ ಉದ್ದೇಶಿಸಿ ರೇವಣ್ಣ ಪ್ರಶ್ನೆ

ವಿಧಾನಸಭೆ ಚುನಾವಣೆಗೆ ಹಾಸಕ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಜೆಡಿಎಸ್​​ನಲ್ಲಿ (JDS) ಸೃಷ್ಟಿಯಾಗಿರುವ ಭಿನ್ನಮತ ಮತ್ತಷ್ಟು ತಾರಕಕ್ಕೇರಿದೆ.

JDS Ticket Fight: ಸಾಮಾನ್ಯ ಕಾರ್ಯಕರ್ತ ಅಂದ್ರೆ ಯಾರು; ಎಚ್​ಡಿಕೆ ಉದ್ದೇಶಿಸಿ ರೇವಣ್ಣ ಪ್ರಶ್ನೆ
ಹೆಚ್​ ಡಿ ರೇವಣ್ಣ
ಗಣಪತಿ ಶರ್ಮಾ
|

Updated on:Apr 11, 2023 | 3:07 PM

Share

ಹಾಸನ: ವಿಧಾನಸಭೆ ಚುನಾವಣೆಗೆ ಹಾಸಕ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಜೆಡಿಎಸ್​​ನಲ್ಲಿ (JDS) ಸೃಷ್ಟಿಯಾಗಿರುವ ಭಿನ್ನಮತ ಮತ್ತಷ್ಟು ತಾರಕಕ್ಕೇರಿದೆ. ಸಾಮಾನ್ಯ ಕಾರ್ಯಕರ್ತನಿಗೇ ಟಿಕೆಟ್ ನೀಡಲಾಗುವುದು ಎಂಬ ಹೇಳಿಕೆಗೆ ಬದ್ಧ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಹೆಚ್​ಡಿ ರೇವಣ್ಣ (HD Revanna) ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆನೆಕೆರೆ ಗ್ರಾಮದಲ್ಲಿ ಮಾತನಾಡಿದ ರೇವಣ್ಣ, ಹೆಚ್​ಡಿ ಕುಮಾರಸ್ವಾಮಿಯನ್ನು ಉದ್ದೇಶಿಸಿ ಪರೋಕ್ಷವಾಗಿ ಸಾಮಾನ್ಯ ಕಾರ್ಯಕರ್ತ ಅಂದರೆ ಯಾರು ಎಂದು ಪ್ರಶ್ನಿಸಿದ್ದಾರೆ. ಪಕ್ಷದಿಂದ ಯಾವ ಫಲವನ್ನೂ ಪಡೆಯದವನು ಸಾಮಾನ್ಯ ಕಾರ್ಯಕರ್ತ. ಹೆಚ್​​ಡಿ ದೇವೇಗೌಡರಿಗೆ ಹಾಸನ ಜಿಲ್ಲೆಯ ಬಗ್ಗೆ ಎಲ್ಲವೂ ಗೊತ್ತು. ಅವರು ಹೇಳಿದಂತೆ ನಾವು ಕೇಳುತ್ತೇವೆ ಎಂದು ರೇವಣ್ಣ ಹೇಳಿದ್ದಾರೆ.

ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಗೆಲ್ಲಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂಬುದೇ ನಮ್ಮ ಉದ್ದೇಶ. ಸಾಮಾನ್ಯ ಕಾರ್ಯಕರ್ತ ಯಾರು ಎಂಬುದನ್ನು ದೇವೇಗೌಡರು ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.

ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಯಾಕೆ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿ. ನನ್ನ ಕ್ಷೇತ್ರ ಹೊಳೆನರಸೀಪುರ, ಆ ಜನ ನನ್ನನ್ನು 30 ವರ್ಷ ಸಾಕಿದ್ದಾರೆ ಎಂದು ಹೇಳಿದ್ದಾರೆ.

ದೇವೇಗೌಡರಿಗೆ ಅರವತ್ತು ವರ್ಷಗಳ ಅನುಭವ ಇದೆ. ಸೋಲು ಗೆಲುವು ಎರಡನ್ನೂ ಕಂಡಿದ್ದಾರೆ. ಅವರ ಆಶೀರ್ವಾದದಿಂದ ಇಪ್ಪತ್ತೈದು ವರ್ಷ ಎಂಎಲ್‌ಎ ಆಗಿದ್ದೀನೆ. ಪ್ರಜ್ವಲ್ ಸಂಸದರಾಗಿದ್ದಾರೆ, ಭವಾನಿ ಜಿ.ಪಂ. ಸದಸ್ಯರಾಗಿದ್ದಾರೆ, ಸೂರಜ್ ಎಂಎಲ್‌ಸಿ ಆಗಿದ್ದಾರೆ. ದೇವೇಗೌಡರ ತೀರ್ಮಾನವೇ ಅಂತಿಮ ಎಂದು ರೇವಣ್ಣ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: HD Revanna: ಅಲ್ಪಸಂಖ್ಯಾತರಿಗೆ ಗುತ್ತಿಗೆ ಕೊಟ್ಟಿಲ್ಲ, ಕಲ್ಯಾಣಮಂಟಪ ಹೆಸರಲ್ಲೂ ಲೂಟಿ; ಶಿವಲಿಂಗೇಗೌಡ ವಿರುದ್ಧ ರೇವಣ್ಣ ವಾಗ್ದಾಳಿ

ಈ ಮಧ್ಯೆ ಟಿಕೆಟ್ ಫೈಟ್ ವಿಚಾರವಾಗಿ ಮಾತನಾಡಿದ ಸೂರಜ್ ರೇವಣ್ಣ, ಆ ಬಗ್ಗೆ ನಾನೇನೂ ಹೇಳಲಾಗದು. ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆ ದೊಡ್ಡವರು ನಿರ್ಧಾರ ಕೈಗೊಳ್ಳುತ್ತಾರೆ. ದೇವೇಗೌಡರನ್ನು ರೇವಣ್ಣ ಭೇಟಿ ಮಾಡಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಆನೆಕೆರೆ ನಮ್ಮ ಹೋಬಳಿಗೆ ಬರುವುದರಿಂದ ಇಲ್ಲಿನ ಜಾತ್ರೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದೆ. ಹಾಗಾಗಿ ದೇವೇಗೌಡರನ್ನು ರೇವಣ್ಣ ಭೇಟಿಯಾಗಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲ. ನಾನು ಟಿವಿನೇ ನೋಡ್ತಿಲ್ಲ. ರೇವಣ್ಣ ಅವರು ಹಾಸನ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬನ್ನಿ ಎಂದು ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಈಡೇರಿಸುವುದಷ್ಟೇ ನನ್ನ ಉದ್ದೇಶ. ಅಭಿವೃದ್ಧಿ ಮುಂದಿಟ್ಟುಕೊಂಡು ಜನರ ಬಳಿ ಹೋಗಿ ಅಂದಿದ್ದಾರೆ, ಅದನ್ನು ಬಿಟ್ಟರೆ ನನಗೆ ಬೇರೆನೂ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Tue, 11 April 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ