AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS Manifesto for Karnataka election 2023: ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್

ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆಯನ್ನು ಬೆಂಗಳೂರಿನ ಜೆಡಿಎಸ್‌‌ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ ಪ್ರಣಾಳಿಕೆ ರಿಲೀಸ್​ ಮಾಡಿದೆ. ಪ್ರಣಾಳಿಕೆಯಲ್ಲಿ ಜಾತ್ಯತೀತ ಜನತಾದಳ ಹಲವು ಭರವಸೆ ನೀಡಿದೆ.

JDS Manifesto for Karnataka election 2023: ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 27, 2023 | 6:17 PM

Share

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆ (manifesto) ಯನ್ನು ಬೆಂಗಳೂರಿನ ಜೆಡಿಎಸ್‌‌ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ ಪ್ರಣಾಳಿಕೆ ರಿಲೀಸ್​ ಮಾಡಿದೆ. ಮಾಜಿ‌ ಸಿಎಂ H.D.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಪರಿಷತ್ ಸದಸ್ಯ ಬಿ.ಎಂ.ಫಾರೂಕ್‌ರಿಂದ JDS ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಪ್ರಣಾಳಿಕೆಯಲ್ಲಿ ಜಾತ್ಯತೀತ ಜನತಾದಳ ಹಲವು ಭರವಸೆ ನೀಡಿದೆ. ಸಾಮಾಜಿಕ ಭದ್ರತೆಗಳಾದ ಮಾತೃಶ್ರೀ ಯೋಜನೆ, ರೈತಬಂಧು ಯೋಜನೆ, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಪರಿಹಾರ, ಹಿರಿಸಿರಿ ಯೋಜನೆ, ಸಾರಥಿಗೆ ಸೈ ಯೋಜನೆ, ರಕ್ಷಕ ಬಂಧು ಯೋಜನೆ, ಚೈತನ್ಯ ಯೋಜನೆಗಳಾದ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಭರವಸೆ ನೀಡಲಾಗಿದೆ.

ಮಹಿಳೆಯರಿಗೆ ವಿಶೇಷ ಯೋಜನೆ

ಕುಮಾರಸ್ವಾಮಿ ಅವರು ಮಹಿಳೆಯರಿಗಾಗಿ ವಿಶೇಷ ಯೋಜನೆಯನ್ನು ಘೋಷಿಸಿದ್ದಾರೆ. ಗರ್ಭಿಣಿಯರಿಗೆ ಆರು ತಿಂಗಳವರೆಗೆ ತಿಂಗಳಿಗೆ 6,000 ರೂ. ಮತ್ತು ಪ್ರಾದೇಶಿಕ ಪಕ್ಷವು ಮಹಿಳಾ ಸ್ವಸಹಾಯ ಗುಂಪುಗಳ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದೆ. ವಿಧವೆಯರ ಪಿಂಚಣಿಯನ್ನು 900 ರೂ.ಗಳಿಂದ 2,500 ರೂ.ಗೆ ಹೆಚ್ಚಿಸಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ: ವರುಣ ಕ್ಷೇತ್ರದಲ್ಲಿ ಸೋಮಣ್ಣಗೆ ಶಾಕ್​ ಕೊಡಲು ಕಾಂಗ್ರೆಸ್​ ಪ್ಲ್ಯಾನ್​: ಯಡಿಯೂರಪ್ಪ ಆಪ್ತನಿಗೆ ಗಾಳ ಹಾಕಿದ ಕಾಂಗ್ರೆಸ್​​

ಉದ್ಯೋಗ ಖಾಯಂ

ಮಾಜಿ ಪ್ರಧಾನಿ ಹೆಚ್​​ಡಿ. ದೇವೇಗೌಡ ಅವರ ನೇತೃತ್ವದ ಪಕ್ಷವು ಅಂಗನವಾಡಿ ಕಾರ್ಯಕರ್ತರ ಉದ್ಯೋಗವನ್ನು ಖಾಯಂಗೊಳಿಸುವುದಾಗಿ ಮತ್ತು ಅವರ ವೇತನವನ್ನು 5,000 ರೂ.ಗಳಷ್ಟು ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಇದನ್ನೂ ಓದಿ: Geetha Shivarajkumar: ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್​ಕುಮಾರ್

ವೃತ್ತಿನಿರತ ವಕೀಲರ ರಕ್ಷಣೆಗೆ ಕಾಯ್ದೆ, ಮೀಸಲಾತಿ ಗೊಂದಲ ನಿವಾರಣೆ, ಧಾರ್ಮಿಕ ಅಲ್ಪಸಂಖ್ಯಾತ ಏಳಿಗೆ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಏಳಿಗೆ ಮತ್ತು ಅಭಿವೃದ್ಧಿ, ಬಗರ್ ಹುಕುಂ ಸಾಗುವಳಿ, ಋತು ಯೋಜನೆಗೆ ಕಾಯಕಲ್ಪ, ರಾಷ್ಟ್ರೀಯ ಪಿಂಚಣಿ ಯೋಜನೆ, ಹಳೇ ಪಿಂಚಣೆ ಯೋಜನೆ ಜಾರಿಗೆ ಭರವಸೆ ನೀಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ 

  • ಕನ್ನಡನಾಡಿನಲ್ಲಿರುವ ಭಾಷೆಗಳ ಮತ್ತು ಸಂಸ್ಕೃತಿ ಸಂರಕ್ಷಣೆ ಅಭಿವೃದ್ಧಿ
  • ಆರಕ್ಷಕರಿಗೆ ಅಭಯ
  • ಕಲಾ ಪ್ರೋತ್ಸಾಹ
  • ಆಯುಷ್ ವೈದ್ಯರಿಗೆ ಅಭಯ
  • ಸ್ವರ್ಣ ಕುಟೀರ ಯೋಜನೆ
  • ಪಂಚರತ್ನ ಯೋಜನೆ ಜಾರಿ ಭರವಸೆ

ಶಿಕ್ಷಣವೇ ಆಧುನಿಕ ಶಕ್ತಿ 

  • ವಿದ್ಯಾ ಸ್ನೇಹಿ ಯೋಜನೆ
  • ಅಡಿಪಾಯ- ಅಂಗನವಾಡಿಗಳ ಬಲವರ್ಧನೆ
  • ಶಿಕ್ಷಣ ಮತ್ತು ಆಧುನಿಕ ಶಕ್ತಿ
  • ವಿದ್ಯಾ ಜಾಲ
  • ವಿಕಲಚೇತನ ಮಕ್ಕಳಿಗೆ ವಿಶೇಷ ಶಿಕ್ಷಣ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Thu, 27 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ