AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಂ ಗೌಡ ಸುಳ್ಳನ್ನೇ ತೀರ್ಥವೆಂದು ಕಣ್ಣಿಗೊತ್ತಿರುವ ಕಾಂಗ್ರೆಸ್; ಜೆಡಿಎಸ್ ವಾಗ್ದಾಳಿ

ಚುನಾವಣಾ ಕುತಂತ್ರಿಯನ್ನು ಕರೆಸಿದರೂ ತನಗೆ ಮತ ಬೀಳುವುದಿಲ್ಲ ಎಂದು ದುರಂಹಕಾರಿ ಪ್ರೀತಂ ಗೌಡಗೆ ಖಾತ್ರಿಯಾಗಿದೆ. ಹಾಗಾಗಿಯೇ ಹೆಚ್​ಡಿ ದೇವೇಗೌಡ ಅವರ ಹೆಸರಿನಲ್ಲಿ ಮತ ಕೇಳಿ, ಚುನಾವಣೆಗೂ ಮೊದಲೇ ಸೋಲೊಪ್ಪಿಕೊಂಡಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ.

ಪ್ರೀತಂ ಗೌಡ ಸುಳ್ಳನ್ನೇ ತೀರ್ಥವೆಂದು ಕಣ್ಣಿಗೊತ್ತಿರುವ ಕಾಂಗ್ರೆಸ್; ಜೆಡಿಎಸ್ ವಾಗ್ದಾಳಿ
ಪ್ರಾತಿನಿಧಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 28, 2023 | 9:20 PM

Share

ಬೆಂಗಳೂರು: ಜೆಡಿಎಸ್​ಗೆ ಮತ ನೀಡಿದರೂ ಬಿಜೆಪಿಗೆ ನೀಡಿದಂತೆಯೇ, ಹಾಗಾಗಿ ಬಿಜೆಪಿಗೇ ಮತ ನೀಡಿ ಎಂಬರ್ಥದಲ್ಲಿ ಹಾಸನ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ (Preetham Gowda) ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬೆನ್ನಲ್ಲೇ ಆ ಕುರಿತು ಕಾಂಗ್ರೆಸ್​​ ಟ್ವೀಟ್ ಮಾಡಿತ್ತು. ಇದರಿಂದ ಕೆರಳಿರುವ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದೆ.

ಚುನಾವಣಾ ಕುತಂತ್ರಿಯನ್ನು ಕರೆಸಿದರೂ ತನಗೆ ಮತ ಬೀಳುವುದಿಲ್ಲ ಎಂದು ದುರಂಹಕಾರಿ ಪ್ರೀತಂ ಗೌಡಗೆ ಖಾತ್ರಿಯಾಗಿದೆ. ಹಾಗಾಗಿಯೇ ಹೆಚ್​ಡಿ ದೇವೇಗೌಡ ಅವರ ಹೆಸರಿನಲ್ಲಿ ಮತ ಕೇಳಿ, ಚುನಾವಣೆಗೂ ಮೊದಲೇ ಸೋಲೊಪ್ಪಿಕೊಂಡಿದ್ದಾರೆ. ಆದರೆ ಕರ್ನಾಟಕ ಕಾಂಗ್ರೆಸ್ ಮಾತ್ರ ಬಿಜೆಪಿಯ ಸುರಿದ ಸುಳ್ಳನ್ನೆ ತೀರ್ಥ ಎಂದುಕೊಂಡು ಕಣ್ಣಿಗೊತ್ತಿಕೊಳ್ಳುತ್ತಿದೆ. ಚುನಾವಣೆ ಗೆಲ್ಲಲು ಈ ಎರಡು ಹಿಂದಿ ಗುಲಾಮಿ ರಾಷ್ಟ್ರೀಯ ಪಕ್ಷಗಳು ಯಾವುದೆ ಮಟ್ಟಕ್ಕಾದರೂ ಇಳಿಯಬಲ್ಲವು. ಜೆಡಿಎಸ್ ಅನ್ನು ಸೋಲಿಸಲು ಯಾರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದು ಈಗ ಸ್ಪಷ್ಟವಾಯ್ತು. ಕಳ್ಳನಿಗೆ ಮಳ್ಳ ಸಾಕ್ಷಿ ಎಂಬಂತೆ ಪ್ರೀತಂ ಬಿಸಾಕಿದ ಮೂಳೆಯನ್ನು ಈಗ ಕರ್ನಾಟಕ ಕಾಂಗ್ರೆಸ್ ಕೂಡಾ ನೆಕ್ಕುತ್ತಿರುವುದು ಹಾಸ್ಯಾಸ್ಪದ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ನಾವು ಪದೇ ಪದೇ ಹೇಳುತ್ತಿದ್ದೇವೆ ಜೆಡಿಎಸ್​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ. ಅದನ್ನೇ ಈಗ ಸ್ವತಃ ಬಿಜೆಪಿ ಶಾಸಕ ಪ್ರೀತಂ ಗೌಡ ಅನುಮೋದಿಸಿದ್ದಾರೆ. ಮೋದಿ-ದೇವೇಗೌಡರ ಮಧ್ಯೆ ಈಗಾಗಲೇ ಮಾತುಕತೆಯೂ ಆಗಿದೆಯಂತೆ. ಬಿಜೆಪಿಯೊಂದಿಗೆ ಕೈಜೋಡಿಸಿರುವ ಜೆಡಿಎಸ್​​ ಅನ್ನು ಬೆಂಬಲಿಸಬೇಡಿ. ಕಾಂಗ್ರೆಸ್​ಗೆ ಮತ ನೀಡಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.

ಏನು ಹೇಳಿದ್ದರು ಪ್ರೀತಂ ಗೌಡ?

‘ನಾನು ನಿಮಗೆ ಹೇಳುತ್ತಿದ್ದೇನೆ. ಜೆಡಿಎಸ್​ಗೆ ಮತ ನೀಡುವುದೂ ಬಿಜೆಪಿಗೆ ನೀಡಿದಂತೆಯೇ. ಅವರಿಗೆ ನೀಡಿದರೂ ಅದು ನಮಗೇ ಸಲ್ಲಲಿದೆ. ಹೆಚ್​ಡಿ ದೇವೇಗೌಡರು ಮತ್ತು ಮೋದಿ ಸಾಹೇಬ್ರು ಈಗಾಗಲೇ ಮಾತನಾಡಿದ್ದಾರೆ. ಜೆಡಿಎಸ್​​ಗೆ ಕೇವಲ 20 ರಿಂದ 25 ಸ್ಥಾನಗಳಷ್ಟೇ ದೊರೆಯಲಿದೆ. ನೀವು ಬೆಂಗಳೂರಿಗೆ ಹೋಗಲು ಬಯಸುತ್ತೀರಿ ಎಂದಾದರೆ ಅದಕ್ಕಾಗಿ ಮೈಸೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮೂಲಕ ಹೋಗಿ. ನೀವು ಮೈಸೂರಿನಿಂದಾಗಿ ಹೋಗಲು ಬಯಸುತ್ತೀರಾದರೆ ನಾನು ಹೇಳುವುದಿಷ್ಟೇ. ಎಲ್ಲ ನದಿಗಳ ನೀರು ಹರಿದು ಕೊನೆಗೆ ಸೇರುವುದು ಸಮುದ್ರಕ್ಕೇ. ಅದೇ ರೀತಿ ನೀವು ನಮ್ಮನ್ನೇ ಸೇರಬೇಕಷ್ಟೆ. ಈ ಬಗ್ಗೆ ಯೋಚನೆ ಮಾಡಿ. ಬಿಜೆಪಿಯನ್ನೇ ಬೆಂಬಲಿಸಿ’ ಎಂದು ಪ್ರೀತಂ ಗೌಡ ಹೇಳಿರುವ ವಿಡಿಯೋ ವೈರಲ್ ಆಗಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್