ಪ್ರೀತಂ ಗೌಡ ಸುಳ್ಳನ್ನೇ ತೀರ್ಥವೆಂದು ಕಣ್ಣಿಗೊತ್ತಿರುವ ಕಾಂಗ್ರೆಸ್; ಜೆಡಿಎಸ್ ವಾಗ್ದಾಳಿ

ಚುನಾವಣಾ ಕುತಂತ್ರಿಯನ್ನು ಕರೆಸಿದರೂ ತನಗೆ ಮತ ಬೀಳುವುದಿಲ್ಲ ಎಂದು ದುರಂಹಕಾರಿ ಪ್ರೀತಂ ಗೌಡಗೆ ಖಾತ್ರಿಯಾಗಿದೆ. ಹಾಗಾಗಿಯೇ ಹೆಚ್​ಡಿ ದೇವೇಗೌಡ ಅವರ ಹೆಸರಿನಲ್ಲಿ ಮತ ಕೇಳಿ, ಚುನಾವಣೆಗೂ ಮೊದಲೇ ಸೋಲೊಪ್ಪಿಕೊಂಡಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ.

ಪ್ರೀತಂ ಗೌಡ ಸುಳ್ಳನ್ನೇ ತೀರ್ಥವೆಂದು ಕಣ್ಣಿಗೊತ್ತಿರುವ ಕಾಂಗ್ರೆಸ್; ಜೆಡಿಎಸ್ ವಾಗ್ದಾಳಿ
ಪ್ರಾತಿನಿಧಿಕ ಚಿತ್ರ
Follow us
|

Updated on: Apr 28, 2023 | 9:20 PM

ಬೆಂಗಳೂರು: ಜೆಡಿಎಸ್​ಗೆ ಮತ ನೀಡಿದರೂ ಬಿಜೆಪಿಗೆ ನೀಡಿದಂತೆಯೇ, ಹಾಗಾಗಿ ಬಿಜೆಪಿಗೇ ಮತ ನೀಡಿ ಎಂಬರ್ಥದಲ್ಲಿ ಹಾಸನ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ (Preetham Gowda) ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬೆನ್ನಲ್ಲೇ ಆ ಕುರಿತು ಕಾಂಗ್ರೆಸ್​​ ಟ್ವೀಟ್ ಮಾಡಿತ್ತು. ಇದರಿಂದ ಕೆರಳಿರುವ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದೆ.

ಚುನಾವಣಾ ಕುತಂತ್ರಿಯನ್ನು ಕರೆಸಿದರೂ ತನಗೆ ಮತ ಬೀಳುವುದಿಲ್ಲ ಎಂದು ದುರಂಹಕಾರಿ ಪ್ರೀತಂ ಗೌಡಗೆ ಖಾತ್ರಿಯಾಗಿದೆ. ಹಾಗಾಗಿಯೇ ಹೆಚ್​ಡಿ ದೇವೇಗೌಡ ಅವರ ಹೆಸರಿನಲ್ಲಿ ಮತ ಕೇಳಿ, ಚುನಾವಣೆಗೂ ಮೊದಲೇ ಸೋಲೊಪ್ಪಿಕೊಂಡಿದ್ದಾರೆ. ಆದರೆ ಕರ್ನಾಟಕ ಕಾಂಗ್ರೆಸ್ ಮಾತ್ರ ಬಿಜೆಪಿಯ ಸುರಿದ ಸುಳ್ಳನ್ನೆ ತೀರ್ಥ ಎಂದುಕೊಂಡು ಕಣ್ಣಿಗೊತ್ತಿಕೊಳ್ಳುತ್ತಿದೆ. ಚುನಾವಣೆ ಗೆಲ್ಲಲು ಈ ಎರಡು ಹಿಂದಿ ಗುಲಾಮಿ ರಾಷ್ಟ್ರೀಯ ಪಕ್ಷಗಳು ಯಾವುದೆ ಮಟ್ಟಕ್ಕಾದರೂ ಇಳಿಯಬಲ್ಲವು. ಜೆಡಿಎಸ್ ಅನ್ನು ಸೋಲಿಸಲು ಯಾರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದು ಈಗ ಸ್ಪಷ್ಟವಾಯ್ತು. ಕಳ್ಳನಿಗೆ ಮಳ್ಳ ಸಾಕ್ಷಿ ಎಂಬಂತೆ ಪ್ರೀತಂ ಬಿಸಾಕಿದ ಮೂಳೆಯನ್ನು ಈಗ ಕರ್ನಾಟಕ ಕಾಂಗ್ರೆಸ್ ಕೂಡಾ ನೆಕ್ಕುತ್ತಿರುವುದು ಹಾಸ್ಯಾಸ್ಪದ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ನಾವು ಪದೇ ಪದೇ ಹೇಳುತ್ತಿದ್ದೇವೆ ಜೆಡಿಎಸ್​ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ. ಅದನ್ನೇ ಈಗ ಸ್ವತಃ ಬಿಜೆಪಿ ಶಾಸಕ ಪ್ರೀತಂ ಗೌಡ ಅನುಮೋದಿಸಿದ್ದಾರೆ. ಮೋದಿ-ದೇವೇಗೌಡರ ಮಧ್ಯೆ ಈಗಾಗಲೇ ಮಾತುಕತೆಯೂ ಆಗಿದೆಯಂತೆ. ಬಿಜೆಪಿಯೊಂದಿಗೆ ಕೈಜೋಡಿಸಿರುವ ಜೆಡಿಎಸ್​​ ಅನ್ನು ಬೆಂಬಲಿಸಬೇಡಿ. ಕಾಂಗ್ರೆಸ್​ಗೆ ಮತ ನೀಡಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.

ಏನು ಹೇಳಿದ್ದರು ಪ್ರೀತಂ ಗೌಡ?

‘ನಾನು ನಿಮಗೆ ಹೇಳುತ್ತಿದ್ದೇನೆ. ಜೆಡಿಎಸ್​ಗೆ ಮತ ನೀಡುವುದೂ ಬಿಜೆಪಿಗೆ ನೀಡಿದಂತೆಯೇ. ಅವರಿಗೆ ನೀಡಿದರೂ ಅದು ನಮಗೇ ಸಲ್ಲಲಿದೆ. ಹೆಚ್​ಡಿ ದೇವೇಗೌಡರು ಮತ್ತು ಮೋದಿ ಸಾಹೇಬ್ರು ಈಗಾಗಲೇ ಮಾತನಾಡಿದ್ದಾರೆ. ಜೆಡಿಎಸ್​​ಗೆ ಕೇವಲ 20 ರಿಂದ 25 ಸ್ಥಾನಗಳಷ್ಟೇ ದೊರೆಯಲಿದೆ. ನೀವು ಬೆಂಗಳೂರಿಗೆ ಹೋಗಲು ಬಯಸುತ್ತೀರಿ ಎಂದಾದರೆ ಅದಕ್ಕಾಗಿ ಮೈಸೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮೂಲಕ ಹೋಗಿ. ನೀವು ಮೈಸೂರಿನಿಂದಾಗಿ ಹೋಗಲು ಬಯಸುತ್ತೀರಾದರೆ ನಾನು ಹೇಳುವುದಿಷ್ಟೇ. ಎಲ್ಲ ನದಿಗಳ ನೀರು ಹರಿದು ಕೊನೆಗೆ ಸೇರುವುದು ಸಮುದ್ರಕ್ಕೇ. ಅದೇ ರೀತಿ ನೀವು ನಮ್ಮನ್ನೇ ಸೇರಬೇಕಷ್ಟೆ. ಈ ಬಗ್ಗೆ ಯೋಚನೆ ಮಾಡಿ. ಬಿಜೆಪಿಯನ್ನೇ ಬೆಂಬಲಿಸಿ’ ಎಂದು ಪ್ರೀತಂ ಗೌಡ ಹೇಳಿರುವ ವಿಡಿಯೋ ವೈರಲ್ ಆಗಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್