AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H D Kumaraswamy: ಜೆಡಿಎಸ್ ರಥಯಾತ್ರೆ ದಿನ 126 ಅಸೆಂಬ್ಲಿ ಚುನಾವಣೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

JDS: ಹೆಚ್ ಡಿ ಕುಮಾರಸ್ವಾಮಿ ಅವರು ಎಲ್ಲಾ ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳ ಜೊತೆ ಒನ್ ಟೂ ಒನ್ ಮಾತುಕತೆ ನೆಡೆಸಲಿದ್ದಾರೆ. ಈಗಾಗಲೇ 126 ಕ್ಷೇತ್ರಗಳ ಅಭ್ಯರ್ಥಿಗಳ ಪ್ರಗತಿ ವರದಿಗಳು ಹೆಚ್.ಡಿ.ಕೆ. ಕೈ ಸೇರಿವೆ.

H D Kumaraswamy: ಜೆಡಿಎಸ್ ರಥಯಾತ್ರೆ ದಿನ 126 ಅಸೆಂಬ್ಲಿ ಚುನಾವಣೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ
ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on: Oct 18, 2022 | 12:53 PM

Share

ಮೈಸೂರು: ಮುಂದಿನ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು ರಾಜ್ಯ ರಾಜಕೀಯದಲ್ಲಿ ತಕ್ಕಮಟ್ಟಿಗೆ ಅಲ್ಲಿ ರಾಜಕೀಯ ಚದುರಂಗದಾಟಗಳು ಶುರುವಾಗಿವೆ. ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷವಾದ ಕಾಂಗ್ರೆಸ್​ ತಮ್ಮ ತಮ್ಮ ಯಾತ್ರೆಗಳನ್ನು ಕೈಗೊಂಡಿವೆ. ಈ ಮಧ್ಯೆ, ಮತ್ತೊಂದು ಪ್ರಮುಖ ಪಕ್ಷವಾದ ಜಾತ್ಯತೀತ ಜನತಾ ದಳ ಪಕ್ಷವೂ 2023ರ ಚುನಾವಣೆಗೆ (Karnataka Assembly Elections 2023) ವೇದಿಕೆ ಸಿದ್ದಪಡಿಸಿಕೊಳ್ಳುತ್ತಿದೆ. ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ ಜೆಡಿಎಸ್ ವತಿಯಿಂದ (JDS) ​ನಾಳೆ ಬುಧವಾರದಿಂದ ಎರಡು ದಿನಗಳ ಕಾಲ ಮಹತ್ವದ ಸಭೆ ಆಯೋಜಿಸಲಾಗಿದೆ. 126 ದಳಪತಿಗಳ (ಅಸೆಂಬ್ಲಿ ಚುನಾವಣೆ ಅಭ್ಯರ್ಥಿಗಳು) ಅಂತಿಮ ಪಟ್ಟಿಯನ್ನು ಪಕ್ಷದ ಹಿರಿಯ ನಾಯಕ ಹೆಚ್.ಡಿ. ಕುಮಾರಸ್ವಾಮಿ (H D Kumaraswamy) ಫೈನಲ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ 126 ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಆಕಾಂಕ್ಷಿಗಳ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ 126 ವಿಧಾನಸಭಾ ಅಭ್ಯರ್ಥಿಗಳ ಹೆಸರುಗಳನ್ನು ಜೆಡಿಎಸ್ ಅಂತಿಮಗೊಳಿಸಲಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮತ್ತು ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಹೆಚ್ ಡಿ ಕುಮಾರಸ್ವಾಮಿ ಅವರು ಎಲ್ಲಾ ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳ ಜೊತೆ ಒನ್ ಟೂ ಒನ್ ಮಾತುಕತೆ ನೆಡೆಸಲಿದ್ದಾರೆ. ಈಗಾಗಲೇ 126 ಕ್ಷೇತ್ರಗಳ ಅಭ್ಯರ್ಥಿಗಳ ಪ್ರಗತಿ ವರದಿಗಳು ಹೆಚ್.ಡಿ.ಕೆ. ಕೈ ಸೇರಿವೆ. ಸಕ್ರಿಯವಾಗಿ ಕೆಲಸ ಮಾಡದ ಆಕಾಂಕ್ಷಿಗಳ ಹೆಸರನ್ನ ಹೆಚ್ ಡಿ ಕೆ ಪಟ್ಟಿಯಿಂದ ಕೈಬಿಡಲಿದ್ದಾರೆ ಎಂದು ತಿಳಿದುಬಂದಿದೆ. ಪಂಚರತ್ನ ರಥಯಾತ್ರೆ ಕಾರ್ಯಕ್ರಮ ದಿನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?