AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H D Kumaraswamy: ಜೆಡಿಎಸ್ ರಥಯಾತ್ರೆ ದಿನ 126 ಅಸೆಂಬ್ಲಿ ಚುನಾವಣೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

JDS: ಹೆಚ್ ಡಿ ಕುಮಾರಸ್ವಾಮಿ ಅವರು ಎಲ್ಲಾ ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳ ಜೊತೆ ಒನ್ ಟೂ ಒನ್ ಮಾತುಕತೆ ನೆಡೆಸಲಿದ್ದಾರೆ. ಈಗಾಗಲೇ 126 ಕ್ಷೇತ್ರಗಳ ಅಭ್ಯರ್ಥಿಗಳ ಪ್ರಗತಿ ವರದಿಗಳು ಹೆಚ್.ಡಿ.ಕೆ. ಕೈ ಸೇರಿವೆ.

H D Kumaraswamy: ಜೆಡಿಎಸ್ ರಥಯಾತ್ರೆ ದಿನ 126 ಅಸೆಂಬ್ಲಿ ಚುನಾವಣೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ
ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on: Oct 18, 2022 | 12:53 PM

Share

ಮೈಸೂರು: ಮುಂದಿನ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು ರಾಜ್ಯ ರಾಜಕೀಯದಲ್ಲಿ ತಕ್ಕಮಟ್ಟಿಗೆ ಅಲ್ಲಿ ರಾಜಕೀಯ ಚದುರಂಗದಾಟಗಳು ಶುರುವಾಗಿವೆ. ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷವಾದ ಕಾಂಗ್ರೆಸ್​ ತಮ್ಮ ತಮ್ಮ ಯಾತ್ರೆಗಳನ್ನು ಕೈಗೊಂಡಿವೆ. ಈ ಮಧ್ಯೆ, ಮತ್ತೊಂದು ಪ್ರಮುಖ ಪಕ್ಷವಾದ ಜಾತ್ಯತೀತ ಜನತಾ ದಳ ಪಕ್ಷವೂ 2023ರ ಚುನಾವಣೆಗೆ (Karnataka Assembly Elections 2023) ವೇದಿಕೆ ಸಿದ್ದಪಡಿಸಿಕೊಳ್ಳುತ್ತಿದೆ. ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ ಜೆಡಿಎಸ್ ವತಿಯಿಂದ (JDS) ​ನಾಳೆ ಬುಧವಾರದಿಂದ ಎರಡು ದಿನಗಳ ಕಾಲ ಮಹತ್ವದ ಸಭೆ ಆಯೋಜಿಸಲಾಗಿದೆ. 126 ದಳಪತಿಗಳ (ಅಸೆಂಬ್ಲಿ ಚುನಾವಣೆ ಅಭ್ಯರ್ಥಿಗಳು) ಅಂತಿಮ ಪಟ್ಟಿಯನ್ನು ಪಕ್ಷದ ಹಿರಿಯ ನಾಯಕ ಹೆಚ್.ಡಿ. ಕುಮಾರಸ್ವಾಮಿ (H D Kumaraswamy) ಫೈನಲ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ 126 ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಆಕಾಂಕ್ಷಿಗಳ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ 126 ವಿಧಾನಸಭಾ ಅಭ್ಯರ್ಥಿಗಳ ಹೆಸರುಗಳನ್ನು ಜೆಡಿಎಸ್ ಅಂತಿಮಗೊಳಿಸಲಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮತ್ತು ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಹೆಚ್ ಡಿ ಕುಮಾರಸ್ವಾಮಿ ಅವರು ಎಲ್ಲಾ ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳ ಜೊತೆ ಒನ್ ಟೂ ಒನ್ ಮಾತುಕತೆ ನೆಡೆಸಲಿದ್ದಾರೆ. ಈಗಾಗಲೇ 126 ಕ್ಷೇತ್ರಗಳ ಅಭ್ಯರ್ಥಿಗಳ ಪ್ರಗತಿ ವರದಿಗಳು ಹೆಚ್.ಡಿ.ಕೆ. ಕೈ ಸೇರಿವೆ. ಸಕ್ರಿಯವಾಗಿ ಕೆಲಸ ಮಾಡದ ಆಕಾಂಕ್ಷಿಗಳ ಹೆಸರನ್ನ ಹೆಚ್ ಡಿ ಕೆ ಪಟ್ಟಿಯಿಂದ ಕೈಬಿಡಲಿದ್ದಾರೆ ಎಂದು ತಿಳಿದುಬಂದಿದೆ. ಪಂಚರತ್ನ ರಥಯಾತ್ರೆ ಕಾರ್ಯಕ್ರಮ ದಿನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್