AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ, ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ -ಸಿ.ಎಂ.ಇಬ್ರಾಹಿಂ

ಸಮೀಕ್ಷೆಗಳ ಬಗ್ಗೆ ಮಾತನಾಡಿದ ಜೆಡಿಎಸ್​ ರಾಜ್ಯಾಧ್ಯಕ್ಷ ಇಬ್ರಾಹಿಂ, ಸರ್ಕಾರ ರಚಿಸುವ ವಿಶ್ವಾಸವನ್ನು ಹೊರ ಹಾಕಿದ್ದಾರೆ. ರಾಷ್ಟ್ರೀಯ ಪಕ್ಷಗಳ ಬಳಿ ದುಡ್ಡು ಇದೆ, ನಮ್ಮ ಬಳಿ ಏನೂ ಇಲ್ಲ. ಹಣ ಇರುವುದರಿಂದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ ಎಂದರು.

ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ, ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ -ಸಿ.ಎಂ.ಇಬ್ರಾಹಿಂ
ಸಿ.ಎಂ.ಇಬ್ರಾಹಿಂ
ಆಯೇಷಾ ಬಾನು
|

Updated on: May 12, 2023 | 1:59 PM

Share

ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದೆ(Karnataka Assembly Election 2023). ಇನ್ನು ಈ ದಿನ ಕಳೆದು ಬೆಳಗ್ಗೆಯೇ ಫಲಿತಾಂಶ ಹೊರಬೀಳಲಿದೆ. ಇದ್ರ ನಡುವೆ ಹೊರಬಿದ್ದಿರೋ ಮತದಾನೋತ್ತರ ಸಮೀಕ್ಷೆ, ರಾಜಕೀಯ ವಲಯದಲ್ಲಿ ಹಲ್ ಚಲ್ ಎಬ್ಬಿಸಿದೆ. ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್​ಗೆ ಬಹುಮತ ಎಂದಿವೆ. ಇದು ಕಾಂಗ್ರೆಸ್​ಗೆ ಮತ್ತಷ್ಟು ಹುರುಪು ಮೂಡುವಂತೆ ಮಾಡಿದ್ದು ಪಕ್ಷದೊಳಗೆ ಸಭೆ, ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್‌‌ಗೆ ಸರಿಯಾದ ಬಹುಮತ ಸಿಗದೆ ಹೋದರೆ ಪಕ್ಷೇತರರನ್ನ ಕರೆತಂದು ಸರ್ಕಾರ ರಚನೆ ಮಾಡಲು ಕಾಂಗ್ರೆಸ್​ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಮತ್ತೊಂದೆಡೆ ಬಿಜೆಪಿ ಕೂಡ ತಂತ್ರಗಾರಿಗೆ ಹೆಣೆಯುತ್ತಿದೆ. ಇದರ ನಡುವೆ ಕಿಂಗ್ ಮೇಕರ್ ಆಗುವ ಆಸೆಯಲ್ಲಿ ಜೆಡಿಎಸ್ ಮುಗುಳು ನಗೆ ಬೀರಿದೆ. ಹೆಚ್​ಡಿ ಕುಮಾರಸ್ವಾಮಿ ನಾನು ಮೈತ್ರಿಗೆ ಸಿದ್ಧ ಎಂದಿದ್ದಾರೆ. ಇನ್ನು ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯದಲ್ಲಿ ಕಿಂಗ್ ಮೇಕರ್ ಆಗಲಿದೆ ಎಂದಿದ್ದಾರೆ.

ಸಮೀಕ್ಷೆಗಳ ಬಗ್ಗೆ ಮಾತನಾಡಿದ ಜೆಡಿಎಸ್​ ರಾಜ್ಯಾಧ್ಯಕ್ಷ ಇಬ್ರಾಹಿಂ, ಸರ್ಕಾರ ರಚಿಸುವ ವಿಶ್ವಾಸವನ್ನು ಹೊರ ಹಾಕಿದ್ದಾರೆ. ರಾಷ್ಟ್ರೀಯ ಪಕ್ಷಗಳ ಬಳಿ ದುಡ್ಡು ಇದೆ, ನಮ್ಮ ಬಳಿ ಏನೂ ಇಲ್ಲ. ಹಣ ಇರುವುದರಿಂದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ. ಜನರಲ್ಲಿ ಗೊಂದಲ ಮೂಡಿಸುವ ಕೆಲಸ ರಾಷ್ಟ್ರೀಯ ಪಕ್ಷಗಳು ಮಾಡಿವೆ. ಜೆಡಿಎಸ್ ಪಕ್ಷ ಯಾವುದಕ್ಕೂ ಹಿಗ್ಗುವುದಿಲ್ಲ, ಕುಗ್ಗುವುದೂ ಇಲ್ಲ. ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ. ಈ ಚುನಾವಣೆ ದುಡ್ಡಿನಲ್ಲಿ ನಡೆದಿದೆ. ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ ಎಂದರು.

ಇದನ್ನೂ ಓದಿ: ‘ಮೈತ್ರಿಗೆ ನಾವು ಸಿದ್ಧ’ ಆದ್ರೆ ಕೆಲವು ಷರತ್ತುಗಳಿಗೆ ಒಪ್ಪಬೇಕು; ನಿಲುವು ಸ್ಪಷ್ಟಪಡಿಸಿದ ಹೆಚ್​ಡಿ ಕುಮಾರಸ್ವಾಮಿ

ನಮಗೆ ಮ್ಯಾಜಿಕ್​ ನಂಬರ್ ದಾಟುವ ವಿಶ್ವಾಸವಿದೆ -ಸಿಎಂ

ಇನ್ನು ಮತ್ತೊಂದೆಡೆ ಬಿಜೆಪಿಗೆ ಬಹುಮತ ಬರುವ ಎಲ್ಲಾ ಲಕ್ಷಣ ಕಾಣುತ್ತಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಗ್ರೌಂಡ್​ ರಿಪೋರ್ಟ್​​ ತಂದಿದ್ದೇವೆ. ನಮಗೆ ಮ್ಯಾಜಿಕ್​ ನಂಬರ್ ದಾಟುವ ವಿಶ್ವಾಸವಿದೆ. ಮೈತ್ರಿ ಸರ್ಕಾರ ರಚಿಸುವ ಪ್ರಶ್ನೆಯೇ ಉದ್ಭವಿಸಲ್ಲ. ಕೇಂದ್ರ ನಾಯಕರಿಗೆ ನಾನೇ ವಾಸ್ತವ ಸ್ಥಿತಿಯನ್ನು ತಿಳಿಸಿದ್ದೇನೆ. ಕೇಂದ್ರ ನಾಯಕರಿಗೂ ಬಹುಮತ ಬರುವ ವಿಶ್ವಾಸ ಇದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್