AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ, ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ -ಸಿ.ಎಂ.ಇಬ್ರಾಹಿಂ

ಸಮೀಕ್ಷೆಗಳ ಬಗ್ಗೆ ಮಾತನಾಡಿದ ಜೆಡಿಎಸ್​ ರಾಜ್ಯಾಧ್ಯಕ್ಷ ಇಬ್ರಾಹಿಂ, ಸರ್ಕಾರ ರಚಿಸುವ ವಿಶ್ವಾಸವನ್ನು ಹೊರ ಹಾಕಿದ್ದಾರೆ. ರಾಷ್ಟ್ರೀಯ ಪಕ್ಷಗಳ ಬಳಿ ದುಡ್ಡು ಇದೆ, ನಮ್ಮ ಬಳಿ ಏನೂ ಇಲ್ಲ. ಹಣ ಇರುವುದರಿಂದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ ಎಂದರು.

ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ, ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ -ಸಿ.ಎಂ.ಇಬ್ರಾಹಿಂ
ಸಿ.ಎಂ.ಇಬ್ರಾಹಿಂ
Follow us
ಆಯೇಷಾ ಬಾನು
|

Updated on: May 12, 2023 | 1:59 PM

ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದೆ(Karnataka Assembly Election 2023). ಇನ್ನು ಈ ದಿನ ಕಳೆದು ಬೆಳಗ್ಗೆಯೇ ಫಲಿತಾಂಶ ಹೊರಬೀಳಲಿದೆ. ಇದ್ರ ನಡುವೆ ಹೊರಬಿದ್ದಿರೋ ಮತದಾನೋತ್ತರ ಸಮೀಕ್ಷೆ, ರಾಜಕೀಯ ವಲಯದಲ್ಲಿ ಹಲ್ ಚಲ್ ಎಬ್ಬಿಸಿದೆ. ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್​ಗೆ ಬಹುಮತ ಎಂದಿವೆ. ಇದು ಕಾಂಗ್ರೆಸ್​ಗೆ ಮತ್ತಷ್ಟು ಹುರುಪು ಮೂಡುವಂತೆ ಮಾಡಿದ್ದು ಪಕ್ಷದೊಳಗೆ ಸಭೆ, ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್‌‌ಗೆ ಸರಿಯಾದ ಬಹುಮತ ಸಿಗದೆ ಹೋದರೆ ಪಕ್ಷೇತರರನ್ನ ಕರೆತಂದು ಸರ್ಕಾರ ರಚನೆ ಮಾಡಲು ಕಾಂಗ್ರೆಸ್​ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಮತ್ತೊಂದೆಡೆ ಬಿಜೆಪಿ ಕೂಡ ತಂತ್ರಗಾರಿಗೆ ಹೆಣೆಯುತ್ತಿದೆ. ಇದರ ನಡುವೆ ಕಿಂಗ್ ಮೇಕರ್ ಆಗುವ ಆಸೆಯಲ್ಲಿ ಜೆಡಿಎಸ್ ಮುಗುಳು ನಗೆ ಬೀರಿದೆ. ಹೆಚ್​ಡಿ ಕುಮಾರಸ್ವಾಮಿ ನಾನು ಮೈತ್ರಿಗೆ ಸಿದ್ಧ ಎಂದಿದ್ದಾರೆ. ಇನ್ನು ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯದಲ್ಲಿ ಕಿಂಗ್ ಮೇಕರ್ ಆಗಲಿದೆ ಎಂದಿದ್ದಾರೆ.

ಸಮೀಕ್ಷೆಗಳ ಬಗ್ಗೆ ಮಾತನಾಡಿದ ಜೆಡಿಎಸ್​ ರಾಜ್ಯಾಧ್ಯಕ್ಷ ಇಬ್ರಾಹಿಂ, ಸರ್ಕಾರ ರಚಿಸುವ ವಿಶ್ವಾಸವನ್ನು ಹೊರ ಹಾಕಿದ್ದಾರೆ. ರಾಷ್ಟ್ರೀಯ ಪಕ್ಷಗಳ ಬಳಿ ದುಡ್ಡು ಇದೆ, ನಮ್ಮ ಬಳಿ ಏನೂ ಇಲ್ಲ. ಹಣ ಇರುವುದರಿಂದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ. ಜನರಲ್ಲಿ ಗೊಂದಲ ಮೂಡಿಸುವ ಕೆಲಸ ರಾಷ್ಟ್ರೀಯ ಪಕ್ಷಗಳು ಮಾಡಿವೆ. ಜೆಡಿಎಸ್ ಪಕ್ಷ ಯಾವುದಕ್ಕೂ ಹಿಗ್ಗುವುದಿಲ್ಲ, ಕುಗ್ಗುವುದೂ ಇಲ್ಲ. ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ. ಈ ಚುನಾವಣೆ ದುಡ್ಡಿನಲ್ಲಿ ನಡೆದಿದೆ. ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ ಎಂದರು.

ಇದನ್ನೂ ಓದಿ: ‘ಮೈತ್ರಿಗೆ ನಾವು ಸಿದ್ಧ’ ಆದ್ರೆ ಕೆಲವು ಷರತ್ತುಗಳಿಗೆ ಒಪ್ಪಬೇಕು; ನಿಲುವು ಸ್ಪಷ್ಟಪಡಿಸಿದ ಹೆಚ್​ಡಿ ಕುಮಾರಸ್ವಾಮಿ

ನಮಗೆ ಮ್ಯಾಜಿಕ್​ ನಂಬರ್ ದಾಟುವ ವಿಶ್ವಾಸವಿದೆ -ಸಿಎಂ

ಇನ್ನು ಮತ್ತೊಂದೆಡೆ ಬಿಜೆಪಿಗೆ ಬಹುಮತ ಬರುವ ಎಲ್ಲಾ ಲಕ್ಷಣ ಕಾಣುತ್ತಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಗ್ರೌಂಡ್​ ರಿಪೋರ್ಟ್​​ ತಂದಿದ್ದೇವೆ. ನಮಗೆ ಮ್ಯಾಜಿಕ್​ ನಂಬರ್ ದಾಟುವ ವಿಶ್ವಾಸವಿದೆ. ಮೈತ್ರಿ ಸರ್ಕಾರ ರಚಿಸುವ ಪ್ರಶ್ನೆಯೇ ಉದ್ಭವಿಸಲ್ಲ. ಕೇಂದ್ರ ನಾಯಕರಿಗೆ ನಾನೇ ವಾಸ್ತವ ಸ್ಥಿತಿಯನ್ನು ತಿಳಿಸಿದ್ದೇನೆ. ಕೇಂದ್ರ ನಾಯಕರಿಗೂ ಬಹುಮತ ಬರುವ ವಿಶ್ವಾಸ ಇದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್