AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Manifesto: ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಮಹಿಳೆಯರಿಗೆ ಉಚಿತ ಬಸ್ ಪಾಸ್

ಪ್ರಸಕ್ತ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿ ನಾಳೆ ಬೆಂಗಳೂರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಹೆಣ್ಣು ಮಕ್ಕಳಿಗೆ ಬಸ್‌ನಲ್ಲಿ ಉಚಿತ ಬಸ್ ಪಾಸ್ ಕೊಡುವ ತೀರ್ಮಾನ ಮಾಡಿ ನಾಳೆ ಪ್ರಕಟಿಸುತ್ತೇವೆ ಅಂತ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

BJP Manifesto: ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಮಹಿಳೆಯರಿಗೆ ಉಚಿತ ಬಸ್ ಪಾಸ್
ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಿರುವ ಜೆಪಿ ನಡ್ಡಾ
Rakesh Nayak Manchi
Rakesh Nayak Manchi|

Updated on:Apr 30, 2023 | 8:59 PM

Share

ಬೆಂಗಳೂರು: ಪ್ರಸಕ್ತ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿಯ ಪ್ರಣಾಳಿಕೆ ನಾಳೆ ಬಿಡುಗಡೆಯಾಗಲಿದೆ. ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ (Congress) ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದು, ಈಗಾಗಲೇ ಸಾಲುಸಾಲು ಉಚಿತ ಘೋಷಣೆಗಳನ್ನು ಮಾಡಿದೆ. ಇತ್ತ ಪಂಚರತ್ನ ಹೆಸರಿನಲ್ಲಿ ಜೆಡಿಎಸ್ (JDS) ರಾಜ್ಯ ಪ್ರವಾಸ ನಡೆಸುತ್ತಿದೆ. ಇದೀಗ ರಾಜ್ಯದಲ್ಲಿ ಮತ್ತೆ ಸರ್ಕಾರ ರಚಿಸುತ್ತೇವೆ ಎಂಬ ಹುಮ್ಮಸ್ಸಿನಲ್ಲಿರುವ ಬಿಜೆಪಿ, ನಾಳೆ ಬೆಂಗಳೂರಿನಲ್ಲಿ ಪ್ರಣಾಳಿಕೆ ಬಿಡುಗಡೆ (BJP Manifesto) ಮಾಡುತ್ತಿದೆ. ಬೆಂಗಳೂರಿನ ವಸಂತನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ಈ ಬಗ್ಗೆ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿಯಲ್ಲಿ ಮಾತನಾಡಿದ ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ಹೆಣ್ಣು ಮಕ್ಕಳಿಗೆ ಬಸ್‌ನಲ್ಲಿ ಉಚಿತ ಬಸ್ ಪಾಸ್ ಕೊಡುವ ತೀರ್ಮಾನ ಮಾಡುತ್ತೇವೆ. ನಾಳೆ ಈ ತೀರ್ಮಾನ ಪ್ರಕಟಿಸುತ್ತೇವೆ ಎಂದರು.

ಬಿಜೆಪಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದ್ದಾರೆ. ಮೋದಿಯವರು ಮಹಿಳೆಯರಿಗೆ ಯಾವ ರೀತಿ ಮಹತ್ವ ಕೊಟ್ಟಿದ್ದಾರೆ ಅನ್ನೋದಕ್ಕೆ ಇದು ಉದಾಹರಣೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ನಾಯಕ ರಾಹುಲ್ ಗಾಂಧಿ, ನಮ್ಮ ನಾಯಕರು ಮೋದಿ, ಅಮಿತ್ ಶಾ. ಆ ರಾಹುಲ್ ಗಾಂಧಿ ಎಲ್ಲಿ? ಮೋದಿ, ಶಾ ಎಲ್ಲಿ? ಈ ಇಬ್ಬರು ನಾಯಕರ ಮುಂದೆ ರಾಹುಲ್ ನಿಲ್ಲುವುದಕ್ಕೆ ಸಾಧ್ಯ ಇದೆಯಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Modi Mysuru Road Show: ಮೈಸೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ

ಮಾಜಿ ಸಿಎಂ ವಿರೇಂದ್ರ ಪಾಟೀಲರ ರಾಜೀನಾಮೆ ಕಾಂಗ್ರೆಸ್ ಪಡೆದಿತ್ತು. ರಾಜೀವ ಗಾಂಧಿ ವಿಮಾನ ನಿಲ್ದಾಣದಲ್ಲಿಯೇ ರಾಜೀನಾಮೆ‌ ಕೊಡಿ ಅಂತಾ ಹೇಳಿದ್ದರು. ಯಾವ ಅಪರಾಧಕ್ಕಾಗಿ ವಿರೇಂದ್ರ ಪಾಟೀಲರನ್ನು ಅಧಿಕಾರಿಂದ ಇಳಿಸಿದ್ದೀರಿ? ಇದಕ್ಕೆ ಕಾಂಗ್ರೆಸ್ ಉತ್ತರ ಕೊಡುತ್ತಾ? ಕಾಂಗ್ರೆಸ್ ಎಲ್ಲ ರಾಜ್ಯಗಳಲ್ಲಿ ಸೋತು ನೆಲ‌ಕಚ್ಚಿದೆ. ಈ ಚುನಾವಣೆಯಲ್ಲಿ ಬಿಜೆಪಿ 130-140 ಸ್ಥಾನ ಗೆಲ್ಲುತ್ತದೆ, ಆ ಬಳಿಕ ಕಾಂಗ್ರೆಸ್ ದಿವಾಳಿ ಆಗುವುದಿದೆ ಎಂದರು.

18-20 ಲಕ್ಷ ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಕೊಟ್ಟಿದ್ದು ಯಡಿಯೂರಪ್ಪ, ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಕೊಟ್ಟಿದ್ದು ನಿಮ್ಮ ಯಡಿಯೂರಪ್ಪ, ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡನೆ ಮಾಡಿದ್ದೂ ನಾನೇ. ದೇಶದ ಮಠ ಮಂದಿರಗಳ ಅಭಿವೃದ್ಧಿ ಕೆಲಸ ಮೋದಿ ಮಾಡುತ್ತಿದ್ದಾರೆ. ಶಿಕ್ಷಣಕ್ಕೆ ಹೆಚ್ಚು ‌ಒತ್ತು ನೀಡಿದ್ದೇವೆ. ಭಾರತವನ್ನು ಇಡೀ ವಿಶ್ವಕ್ಕೆ ಪರಿಚಯಿಸಿದ್ದು ಮೋದಿ. ಇಂತಹ ಮೋದಿಯವರ ಬಗ್ಗೆ ಅಲ್ಲೊಬ್ಬ ಇಲ್ಲೊಬ್ಬ ಹಗುರವಾಗಿ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆಯಂಥ ಹಿರಿಯರು ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಇಡೀ ವಿಶ್ವವೇ ಅಚ್ಚರಿಯಿಂದ ಮೋದಿಯವರನ್ನು ನೋಡುತ್ತಿದೆ. ಅವರು ವಿಶ್ವದ ನಾಯಕರಾಗುತ್ತಿದ್ದಾರೆ. ಅಂತವರ ಬಗ್ಗೆ ಕಾಂಗ್ರೆಸ್ ಹಗುರವಾಗಿ ಮಾತನಾಡುತ್ತಿದೆ. ಇದಕ್ಕೆ ಜನರೇ ಉತ್ತರ ಕೊಡಬೇಕು. ಕಾಂಗ್ರೆಸ್ ಅಡ್ರೆಸ್ ಇಲ್ಲದೆ ಓಡಬೇಕು. ಮತ ಎಣಿಕೆ ಕೇಂದ್ರದಿಂದ ಕಾಂಗ್ರೆಸ್ ಏಜೆಂಟರು ಓಡುವಂತಾಗಬೇಕು. ಆ ರೀತಿ ಜನ ಮತದಾನ ಮಾಡಬೇಕು ಎಂದರು.

ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪ್ರಚಾರಾರ್ಥ ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, 1709 ಕೋಟಿ ರೂ. ಅನುದಾನ ಬಿಜೆಪಿ ಅವಧಿಯಲ್ಲಿ ಧಾರವಾಡ ಗ್ರಾಮೀಣಕ್ಕೆ ನೀಡಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 pm, Sun, 30 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!