AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸುವ ವೇಳೆ ಕದಲೂರು ಉದಯ್​ರಿಂದ ಎಡವಟ್ಟು: 90 ಸಾವಿರ ರೂ. ಬೆಲೆಯ ಸ್ಕೂಟರ್​ಗೆ 90 ಲಕ್ಷ ರೂ. ಉಲ್ಲೇಖ

ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಕದಲೂರು ಉದಯ್​ ನಾಮಪತ್ರ ಸಲ್ಲಿಸುವ ವೇಳೆ ಎಡವಟ್ಟು ಮಾಡಿಕೊಂಡಿದ್ದು, 90 ಸಾವಿರ ರೂ. ಬೆಲೆಯ ಹೊಂಡಾ ಆಕ್ಟೀವಾ ಸ್ಕೂಟರ್​ಗೆ 90 ಲಕ್ಷ ರೂ. ಎಂದು ಅಫಿಡವಿಟ್ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆ ಕದಲೂರು ಉದಯ್​ರಿಂದ ಎಡವಟ್ಟು: 90 ಸಾವಿರ ರೂ. ಬೆಲೆಯ ಸ್ಕೂಟರ್​ಗೆ 90 ಲಕ್ಷ ರೂ. ಉಲ್ಲೇಖ
ಕದಲೂರು ಉದಯ್
ಗಂಗಾಧರ​ ಬ. ಸಾಬೋಜಿ
|

Updated on:Apr 21, 2023 | 4:10 PM

Share

ಮಂಡ್ಯ: ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಕದಲೂರು ಉದಯ್ (Kadaluru Uday) ಭಾರಿ ಗೊಂದಲಕ್ಕೆ ಒಳಗಾಗಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಎಡವಟ್ಟು ಮಾಡಿಕೊಂಡಿದ್ದು, 90 ಸಾವಿರ ರೂ. ಬೆಲೆಯ ಹೊಂಡಾ ಆಕ್ಟೀವಾ ಸ್ಕೂಟರ್​ಗೆ 90 ಲಕ್ಷ ರೂ. ಎಂದು ಅಫಿಡವಿಟ್ ಸಲ್ಲಿಸಿದ್ದಾರೆ ಆ ಮೂಲಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕದಲೂರು ಉದಯ್​ ಇತ್ತೀಚೆಗೆ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದರು.  ಕಾಂಗ್ರೆಸ್‌ನ ತತ್ವ ಸಿದ್ಧಾಂತಗಳನ್ನು ನಂಬಿ ಮದ್ದೂರು ಮೂಲದ ಸಮಾಜ ಸೇವಕ ಉದಯ್‌ ಕದಲೂರು ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅವರನ್ನು ಅಭಿನಂದಿಸಿ ಪಕ್ಷಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇವೆ. ಹಾಗೆಯೇ ಕಾಂಗ್ರೆಸ್‌ ಪಕ್ಷದಲ್ಲಿ ಅವರ ರಾಜಕೀಯ ಜೀವನ ಚೆನ್ನಾಗಿರಲಿ ಎಂದು ಹಾರೈಸುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದರು.

ಕದಲೂರು ಉದಯ್​ ಹೊಂದಿರುವ ದುಬಾರಿ ವಾಹನಗಳು

  • ಫಾರ್ಚ್ಯುನರ್ ಕಾರು KA 04 MT 6555 – 30,12,500
  • ಇನ್ನೋವಾ ಕ್ರಿಸ್ಟ KA 04 M 6555 – 26,35,000
  • ಪೋರ್ಸೆ ಕೆನ್ನಿ ಕಾರು KA 05 MT 6555 – 1.39.00.000
  • ಸ್ಕಾರ್ಪಿಯೋ ಕಾರು KA 02 KA 6555 – 18,15,699
  • ಆಕ್ಟೀವಾ 125 KA 41 ED 6555 – 90,03,730
  • ಆಕ್ಟೀವಾ 125 KA 02 KA 6555 -1.01.628

ಯಾರು ಈ ಕದಲೂರು ಉದಯ್?

ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ನಾಯಕರಲ್ಲಿ ಕದಲೂರು ಉದಯ್ ಒಬ್ಬರಾಗಿದ್ದರು. ಮದ್ದೂರು ಕ್ಷೇತ್ರದ ಮುಖಂಡ ಉದಯ್, ಟಿಕೆಟ್ ಆಕಾಂಕ್ಷಿಯೂ ಆಗಿದ್ದರು. ಅದರಂತೆ ಮಾರ್ಚ್ ತಿಂಗಳಲ್ಲಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್​ಗೆ ಕಾಂಗ್ರೆಸ್ ಗಾಳ, ಕದಲೂರು ಉದಯ್ ಮೂಲಕ ತೆರೆಮರೆಯಲ್ಲಿ ಡಿಕೆ ಶಿವಕುಮಾರ್ ತಂತ್ರ?

ಕಳೆದ ಮೂರು ವರ್ಷಗಳಿಂದ ಸಮಾಜಸೇವೆ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಉದಯ್, ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದರು. ಕೋವಿಡ್ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ನೆರವಾಗುವ ಮೂಲಕ ಗಮನ ಸೆಳೆದಿದ್ದರು. ಸದ್ಯ ಮೂರನೇ ಪಟ್ಟಿಯಲ್ಲಿ ಉದಯ್​ಗೆ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ.

ಇದನ್ನ ಓದಿ: ಮಂಡ್ಯ ಜಿಲ್ಲೆ ಜೆಡಿಎಸ್​ನ ಭದ್ರಕೋಟೆ ಅನ್ನೋದು ಹಾಸ್ಯಾಸ್ಪದ: ಸಂಸದೆ ಸುಮಲತಾ

ಉದಯ್ ಪಕ್ಷ ಸೇರ್ಪಡೆ ನಂತರ ಮಾತನಾಡಿದ್ದ ಡಿಕೆ ಶಿವಕುಮಾರ್, ಮದ್ದೂರು ಕ್ಷೇತ್ರದಲ್ಲಿ ಜೆಡಿಎಸ್​ನ ಡಿಸಿ ತಮ್ಮಣ್ಣ ಅವರನ್ನು ಸೋಲಿಸಲು ಉದಯ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದಿದ್ದರು. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಉದಯ್, ಕಾಂಗ್ರೆಸ್​​ನಿಂದ ಟಿಕೆಟ್ ಪಡೆದು ಮದ್ದೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದರು. ಅಲ್ಲದೆ, ಮೈಸೂರು ಭಾಗದಲ್ಲಿ ಜೆಡಿಎಸ್ ಶಕ್ತಿ ಕುಂದಿಸಬೇಕು ಹಾಗೂ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದಾಗಿ ಹೇಳಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Fri, 21 April 23

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್