Kadur Election 2023 Winner: ಕಡೂರಿನಲ್ಲಿ ವೈಎಸ್ವಿ ದತ್ತಾ ವಿರುದ್ಧ ಗೆಲುವು ಸಾಧಿಸಿದ ಕೆಎಸ್ ಆನಂದ್
KS Anand:ಕಡೂರಿನಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ವೈಎಸ್ವಿ ದತ್ತಾ ವಿರುದ್ಧ ಕಾಂಗ್ರೆಸ್ನ ಕೆಎಸ್ ಆನಂದ್ ಗೆಲುವು ಸಾಧಿಸಿದ್ದಾರೆ.

ಕಡೂರಿನಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ವೈಎಸ್ವಿ ದತ್ತಾ ವಿರುದ್ಧ ಕಾಂಗ್ರೆಸ್ನ ಕೆಎಸ್ ಆನಂದ್ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ರಾಜಕೀಯ ಮೇಲಾಟಗಳಿಂದ ಸುದ್ದಿಯಲ್ಲಿರುವ ಕಡೂರು ವಿಧಾನಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಏರ್ಪಟ್ಟಿತ್ತು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈಎಸ್ವಿ ದತ್ತಾ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮತ್ತೆ ಜೆಡಿಎಸ್ ಸೇರ್ಪಡೆಯಾಗಿ ಕಣದಲ್ಲಿದ್ದರು.
ಈ ಕ್ಷೇತ್ರದಲ್ಲಿ 2008, 2013 ಹಾಗೂ 2018ರಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದ, ವೈಎಸ್ವಿ ದತ್ತಾ, 2013ರಲ್ಲಿ ಮಾತ್ರ ಸುಮಾರು 42 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದರು.
ಕಳೆದ ಬಾರಿ ದತ್ತಾ ವಿರುದ್ಧ 16 ಸಾವಿರ ಮತಗಳಿಂದ ಗೆದ್ದಿದ್ದ ಬೆಳ್ಳಿ ಪ್ರಕಾಶ್ ಅಲಿಯಾಸ್ ಕೆಎಸ್ ಪ್ರಕಾಶ್ಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ. ಕಳೆದ ಬಾರಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಕೆಎಸ್ ಆನಂದ್ಗೆ ಮತ್ತೆ ಈ ಬಾರಿ ಟಿಕೆಟ್ ನೀಡಲಾಗಿತ್ತು.
ಕೆಎಸ್ ಆನಂದ ಬದಲಿಗೆ ತನಗೆ ಟಿಕೆಟ್ ಬೇಕೆಂದು ಮನವಿ ಮಾಡಿ, ವೈಎಸ್ವಿ ದತ್ತಾ ಕಾಂಗ್ರೆಸ್ ಸೇರಿದ್ದರು. ಹೀಗಾಗಿ ಕಡೂರು ಕ್ಷೇತ್ರವು ಈ ಬಾರಿ ಮೂವರಿಗೂ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು.
ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:19 pm, Sat, 13 May 23




