AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kadur Election 2023 Winner: ಕಡೂರಿನಲ್ಲಿ ವೈಎಸ್​ವಿ ದತ್ತಾ ವಿರುದ್ಧ ಗೆಲುವು ಸಾಧಿಸಿದ ಕೆಎಸ್​ ಆನಂದ್

KS Anand:ಕಡೂರಿನಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ವೈಎಸ್​ವಿ ದತ್ತಾ ವಿರುದ್ಧ ಕಾಂಗ್ರೆಸ್​ನ ಕೆಎಸ್​ ಆನಂದ್ ಗೆಲುವು ಸಾಧಿಸಿದ್ದಾರೆ.

Kadur Election 2023 Winner: ಕಡೂರಿನಲ್ಲಿ ವೈಎಸ್​ವಿ ದತ್ತಾ ವಿರುದ್ಧ ಗೆಲುವು ಸಾಧಿಸಿದ ಕೆಎಸ್​ ಆನಂದ್
ಕೆಎಸ್​ ಆನಂದ್
ನಯನಾ ರಾಜೀವ್
|

Updated on:May 13, 2023 | 5:20 PM

Share

ಕಡೂರಿನಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ವೈಎಸ್​ವಿ ದತ್ತಾ ವಿರುದ್ಧ ಕಾಂಗ್ರೆಸ್​ನ ಕೆಎಸ್​ ಆನಂದ್ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ರಾಜಕೀಯ ಮೇಲಾಟಗಳಿಂದ ಸುದ್ದಿಯಲ್ಲಿರುವ ಕಡೂರು ವಿಧಾನಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಏರ್ಪಟ್ಟಿತ್ತು.

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮತ್ತೆ ಜೆಡಿಎಸ್​ ಸೇರ್ಪಡೆಯಾಗಿ ಕಣದಲ್ಲಿದ್ದರು.

ಈ ಕ್ಷೇತ್ರದಲ್ಲಿ 2008, 2013 ಹಾಗೂ 2018ರಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದ, ವೈಎಸ್​ವಿ ದತ್ತಾ, 2013ರಲ್ಲಿ ಮಾತ್ರ ಸುಮಾರು 42 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದರು.

ಕಳೆದ ಬಾರಿ ದತ್ತಾ ವಿರುದ್ಧ 16 ಸಾವಿರ ಮತಗಳಿಂದ ಗೆದ್ದಿದ್ದ ಬೆಳ್ಳಿ ಪ್ರಕಾಶ್ ಅಲಿಯಾಸ್ ಕೆಎಸ್​ ಪ್ರಕಾಶ್​ಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ. ಕಳೆದ ಬಾರಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಕೆಎಸ್​ ಆನಂದ್​ಗೆ ಮತ್ತೆ ಈ ಬಾರಿ ಟಿಕೆಟ್ ನೀಡಲಾಗಿತ್ತು.

ಕೆಎಸ್​ ಆನಂದ ಬದಲಿಗೆ ತನಗೆ ಟಿಕೆಟ್ ಬೇಕೆಂದು ಮನವಿ ಮಾಡಿ, ವೈಎಸ್​ವಿ ದತ್ತಾ ಕಾಂಗ್ರೆಸ್ ಸೇರಿದ್ದರು. ಹೀಗಾಗಿ ಕಡೂರು ಕ್ಷೇತ್ರವು ಈ ಬಾರಿ ಮೂವರಿಗೂ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು.

ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:19 pm, Sat, 13 May 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!