AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar Nomination: ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಕೀಯ ‌ಭವಿಷ್ಯ ನಿರ್ಧಾರ

ಕರ್ನಾಟಕ ವಿಧಾನಸಭೆ ಚುನಾವಣೆಗೆ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳು ಇಂದು ಪರಿಶೀಲನೆ ನಡೆಸಲಿದ್ದಾರೆ. ಹೀಗಾಗಿ ಇಂದು ಡಿಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

DK Shivakumar Nomination: ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಕೀಯ ‌ಭವಿಷ್ಯ ನಿರ್ಧಾರ
ಡಿಕೆ ಶಿವಕುಮಾರ್​
ರಮೇಶ್ ಬಿ. ಜವಳಗೇರಾ
|

Updated on: Apr 21, 2023 | 7:21 AM

Share

ಬೆಂಗಳೂರು/ರಾಮನಗರ: ಈ ಬಾರಿ ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)​ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಈಗಾಗಲೇ ನಾಮಪತ್ರ(Nomination) ಸಲ್ಲಿಸಿದ್ದಾರೆ. ಆದ್ರೆ, ಇದೀಗ ಆ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿದ್ದು, ಡಿಕೆ ಶಿವಕುಮಾರ್​ ಅವರ ರಾಜಕೀಯ ಭವಿಷ್ಯ ಇಂದು(ಏಪ್ರಿಲ್ 21) ನಿರ್ಧಾರವಾಗಲಿದೆ. ತಮ್ಮ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ನಿನ್ನೆ (ಏಪ್ರಿಲ್ 20)  ಸಹೋದರ ಸಂಸದ ಡಿಕೆ ಸುರೇಶ್​ ಅವರಿಂದಲೂ ನಾಮಪತ್ರ ಹಾಕಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ನಂತರ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ(nomination verification) ನಡೆಸಲಿದ್ದು, ನಾಮಪತ್ರದಲ್ಲಿ ಲೋಪದೋಷಗಳು ಕಂಡುಬಂದಿದರೆ ತಿರಸ್ಕೃತ ಮಾಡುತ್ತಾರೆ.

ಇದನ್ನೂ ಓದಿ: ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ಐಟಿ ಅಧಿಕಾರಿಗಳು ಸಹ ನಾಲ್ಕು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ಅಲ್ಲದೆ ಏಪ್ರಿಲ್ 17 ರಂದು ಡಿಕೆ ಶಿವಕುಮಾರ್​ ನಾಮಪತ್ರ ಸಲ್ಲಿಕೆ ಮಾಡಿದ ನಂತರ ಐಟಿ ಅಧಿಕಾರಿಗಳು ಆಸ್ತಿ ವಿವರದ ಮಾಹಿತಿ‌ ಪಡೆದಿದ್ದಾರೆ. ಜೊತೆಗೆ ಕನಕಪುರಕ್ಕೆ ಬಂದು ಮಾಹಿತಿ ಪಡೆದು ಹೋಗಿದ್ದಾರೆ‌. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲೇ ಡಿಕೆ ಶಿವಕುಮಾರ್​ ತಮ್ಮ ನಾಮಪತ್ರ ತಿರಸ್ಕಾರ ಆದ್ರೆ, ಸಹೋದರ ಕಣದಲ್ಲಿ ಇರಲಿ ಎಂಬ ಲೆಕ್ಕಾಚಾರಿಂದ ನಾಮಿನೇಷನ್ ಫೈಲ್ ಮಾಡಿಸಿದ್ದಾರೆ.

ತೆರಿಗೆ ಪಾವತಿ ವಿವರದಲ್ಲಿ ವ್ಯತ್ಯಾಸ ಪತ್ತೆ

ನಾಮಪತ್ರ ಸಲ್ಲಿಕೆ ವೇಳೆ ಡಿಕೆಶಿ ಆಸ್ತಿ ವಿವರ ಸಲ್ಲಿಸಿದ್ದು, ಡಿಕೆಶಿ ಆಸ್ತಿ ವಿವರದ ಮಾಹಿತಿಯನ್ನು ಐಟಿ ಅಧಿಕಾರಿಗಳು ಕಲೆಹಾಕಿದ್ದಾರೆ. ಕಳೆದ ಐದು ವರ್ಷಗಳ ತೆರಿಗೆ ಪಾವತಿ ವಿವರವನ್ನು ಕಲೆಹಾಕಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಐಟಿ ಅಧಿಕಾರಿಗಳಿಗೆ ನೀಡಿರುವ ಮಾಹಿತಿ ಬೇರೆಯೇ ಇದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿರೋ ಮಾಹಿತಿಯಲ್ಲಿ ವ್ಯತ್ಯಾಸವಿದೆ. ಹೀಗಾಗಿಯೇ ಡಿಕೆಶಿ ನಾಮಪತ್ರ ತಿರಸ್ಕಾರ ಆಗುವ ಆತಂಕವಿದೆ. ಇಂದು ನಾಮಪತ್ರಗಳ ಪರಿಶೀಲನೆ ಇದ್ದು ಡಿಕೆ ಶಿವಕುಮಾರ್​ ಚುನಾವಣಾ ಭವಿಷ್ಯ ನಿರ್ಧಾರ ಆಗಲಿದೆ.

ಇದನ್ನೂ ಓದಿ: ನಾನು ಸರೆಂಡರ್ ಆಗಲ್ಲ: ಡಿಕೆ ಶಿವಕುಮಾರ್ ಹೀಗ್ಯಾಕೆ ಹೇಳಿದರು ಗೊತ್ತಾ?

ಸುಳ್ಳು ಮಾಹಿತಿ ಎಂದು ಸಾಬೀತಾದರೆ ಕಷ್ಟ

ಒಂದು ವೇಳೆ ಡಿಕೆಶಿ ನಾಮಪತ್ರ ತಿರಸ್ಕಾರವಾದರೆ ಕಣದಲ್ಲಿ ‘ಕೈ’ ಅಭ್ಯರ್ಥಿಯೇ ಇಲ್ಲದಂತಾಗುತ್ತೆ. ಹೀಗಾಗಿ ಡಿಕೆ ಶಿವಕುಮಾರ್​ ನಾಮಪತ್ರ ತಿರಸ್ಕೃತವಾದರೂ ಸಹೋದರ ಇರಲಿ. ಕ್ಷೇತ್ರದಲ್ಲಿ ನಮ್ಮದೇ ಕುಟುಂಬದ ಹಿಡಿತವಿರಲಿ ಎನ್ನುವುದು ಡಿಕೆ ಶಿವಕುಮಾರ್ ಅವರ ಲೆಕ್ಕಾಚಾರವಾಗಿದೆ. ಇನ್ನು ಇಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಒಂದೇ ವೇಳೆ ಯಾರಾದರೂ ತಕರಾರು ಹಾಕಿದರೆ ಸಮಸ್ಯೆಯಾಗಲಿದೆ. ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ಎಂದು ದೂರು ನೀಡಿದರೆ ಸಂಕಷ್ಟ ಎದುರಾಗಲಿದೆ.

ಚುನಾವಣಾ ಅಧಿಕಾರಿಗಳು ಡಿಕೆ ಶಿವಕುಮಾರ್ ಆಸ್ತಿ ವಿವರ ಪರಿಶೀಲನೆ ಮಾಡಲಿದ್ದು, ಸುಳ್ಳು ಅಫಿಡವಿಟ್ ಸಲ್ಲಿಕೆ ಮಾಡಿರುವುದು ಸಾಬೀತಾದ್ರೆ ನಾಮಪತ್ರ ತಿರಸ್ಕೃತ ಸಂಭವವಿದೆ. ಹೀಗಾಗಿಯೇ ಸೇಫರ್‌ ಸೈಡ್‌ಗಾಗಿ ಡಿ.ಕೆ.ಸುರೇಶ್‌ ಅವರಿಂದ ನಾಮಪತ್ರ ಸಲ್ಲಿಸಿದ್ದಾರೆ. ಪ್ಲ್ಯಾನ್ A ಫೇಲ್ ಆದರೂ ಪ್ಲ್ಯಾನ್ B ಸಕ್ಸಸ್ ಆಗಲಿ ಎನ್ನುವುದು ಡಿಕೆಶಿ ಲೆಕ್ಕಾಚಾರವಾಗಿದೆ. ಪರಿಶೀಲನೆ ವೇಳೆ ಆಸ್ತಿ ವಿವರ, ತೆರಿಗೆ ವಿಚಾರ ಕುರಿತ ಅಂಶಗಳ ಕಾರಣದಿಂದ ನಾಮಪತ್ರ ಏನಾದರೂ ರಿಜೆಕ್ಟ್ ಆಗುತ್ತಾ, ತಮ್ಮ ಸಿಎಂ ಆಗುವ ಕನಸು ಭಗ್ನವಾಗುತ್ತಾ ಎಂಬ ಆತಂಕ ಡಿಕೆ ಶಿವಕುಮಾರ್​ಗೆ ಶುರುವಾಗಿದ್ದು, ಅವರ ರಾಜಕೀಯ ಭವಿಷ್ಯ ಏನಾಗಲಿದೆ ಎನ್ನುವುದು ಕಾದುನೋಡಬೇಕಿದೆ.

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ