AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kanakapura Election 2023 Winner: ಕನಕಪುರದಲ್ಲಿ ಡಿಕೆ ಶಿವಕುಮಾರ್​ಗೆ ಭರ್ಜರಿ ಗೆಲುವು

DK Shivakumar: ಕನಕಪುರದಲ್ಲಿ ಕಾಂಗ್ರೆಸ್​ನ ಡಿ.ಕೆ.ಶಿವಕುಮಾರ್​ಗೆ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಆರ್.ಅಶೋಕ್​ ಹೀನಾಯ ಸೋಲುಂಡಿದ್ದಾರೆ.

Kanakapura Election 2023 Winner: ಕನಕಪುರದಲ್ಲಿ ಡಿಕೆ ಶಿವಕುಮಾರ್​ಗೆ ಭರ್ಜರಿ ಗೆಲುವು
ಡಿಕೆ ಶಿವಕುಮಾರ್
TV9 Web
| Edited By: |

Updated on: May 13, 2023 | 12:59 PM

Share

ರಾಮನಗರ: ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಒಂದಾಗಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಡಿಕೆಶಿ ಜಯಶಾಲಿಯಾಗಿದ್ದಾರೆ. ಮೇ 10ರಂದು ಮತದಾನ ನಡೆದಿದ್ದ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆಲುವಿನ ನಗೆ ಬೀರಿದ್ದಾರೆ. ಕನಕಪುರದಲ್ಲಿ ಕಾಂಗ್ರೆಸ್​ನ ಡಿ.ಕೆ.ಶಿವಕುಮಾರ್​ಗೆ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಆರ್.ಅಶೋಕ್​ ಹೀನಾಯ ಸೋಲುಂಡಿದ್ದಾರೆ.

ಡಿಕೆ ಶಿವಕುಮಾರ್ ಭಾವುಕ

ಕಾಂಗ್ರೆಸ್ ಭದ್ರಕೋಟೆಯಾಗಿರುವ ಕನಕಪುರದಲ್ಲಿ ಡಿಕೆ ಶಿವಕುಮಾರ್​ಗೆ ಟಕ್ಕರ್ ಕೊಡಲು ಬಿಜೆಪಿ ಸಚಿವ ಆರ್ ಅಶೋಕ್​ರನ್ನು ನಿಲ್ಲಿಸಿತ್ತು. ಆದ್ರೆ ಕನಕಪುರ ಮತದಾರರು ಹೊಸ ಅಭ್ಯರ್ಥಿ ಪರ ಒಲವು ತೋರಿಸಿಲ್ಲ. ಆರ್​ ಅಶೋಕ್ ಹೀನಾಯವಾಗಿ ಸೋತಿದ್ದಾರೆ. ಬಿಜೆಪಿಯ ಮಾಸ್ಟರ್ ಪ್ಲಾನ್​ಗಳೆಲ್ಲವೂ ತಲೆಗೆಳಗಾಗಿವೆ. ಘಟಾನುಘಟಿಗಳ ರೋಡ್​ ಶೋ, ಪ್ರಚಾರ ಯಾವುದಕ್ಕೂ ಫಲ ಸಿಕ್ಕಿಲ್ಲ. ಸದ್ಯ ಗೆಲುವಿನ ನಗೆ ಬೀರಿದ ಡಿಕೆ ಶಿವಕುಮಾರ್ ಫಲಿತಾಂಶ ಕಂಡು ಭಾವುಕರಾದ್ರು. ಜೈಲಿನಲ್ಲಿದ್ದ ದಿನಗಳನ್ನ ಮೆಲುಕು ಹಾಕಿ ಭಾವುಕರಾಗಿ ಕಣ್ಣೀರಿಟ್ಟರು. ಜೈಲಿನಲ್ಲಿದ್ದಾಗ ಸೋನಿಯಾ ಗಾಂಧಿ ಅವರು ನೋಡೋಕೆ ಬಂದ ಸನ್ನಿವೇಶ ನೆನಪಿಸಿಕೊಂಡ ಭಾವುಕರಾದ್ರು.

ಇನ್ನು ಕನಕಪುರ ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳೇ ನಿರ್ಣಾಯಕ. ಹೀಗಾಗಿ ಬಿಜೆಪಿ ಒಕ್ಕಲಿಗ ಸಮುದಾಯದ ಆರ್​ ಅಶೋಕ್​ರನ್ನು ನಿಲ್ಲಿಸಿತ್ತು. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ 2,24,956 ಮತದಾರರಲ್ಲಿ 1,90,124 ಮತದಾನ ಮಾಡಿದ್ದರು. ಎರಡು ದಶಕಗಳ ಹಿಂದೆ ಜೆಡಿಎಸ್‌ ಪಾಲಿಗೆ ಭದ್ರಕೋಟೆಯಾಗಿದ್ದ ಕನಕಪುರ, ಈಗ ಡಿಕೆ ಶಿವಕುಮಾರ್ ಅವರ ಮುಷ್ಟಿಯಲ್ಲಿದೆ. ಸಾತನೂರಿನಿಂದ ಕನಕಪುರಕ್ಕೆ ಬಂದ ಡಿ.ಕೆ. ಶಿವಕುಮಾರ್, 2008ರಿಂದ ಇಲ್ಲಿಯವರೆಗೂ ಪ್ರತಿ ಚುನಾವಣೆಯಲ್ಲೂ ಗೆಲುವನ್ನು ತಮ್ಮದಾಗಿಸಿಕೊಂಡು ಬಂದಿದ್ದಾರೆ. ಡಿಕೆಶಿಗೆ ಎದುರಾಳಿಗಳೇ ಇಲ್ಲ.ಕಳೆದ ಹಲವು ವರ್ಷದಿಂದ ಸೋಲನ್ನೆ ಕಾಣದ ಡಿ.ಕೆ.ಶಿವಕುಮಾರ್ ಅವರಿಗೆ ಸಹೋದರ ಡಿ.ಕೆ.ಸುರೇಶ್ ಅವರು ಆನೆ ಬಲ ಇದ್ದಂತೆ.

ಇದನ್ನೂ ಓದಿ: Kanakapura Assembly Constituency: ಸೋಲಿಲ್ಲದ ಸರದಾರ ಡಿಕೆ ಶಿವಕುಮಾರ್ ಮಣಿಸಲು ಆರ್ ಅಶೋಕ್ ಅಸ್ತ್ರ, ಇಲ್ಲಿ ಗೆಲುವು ಯಾರದು?

1983 ರಿಂದ 2008ರವರೆಗೆ(6 ಬಾರಿ) ಪಾರುಪತ್ಯ ಮೆರೆದಿದ್ದ ಪಿ.ಜಿ.ಆರ್.ಸಿಂಧ್ಯಾ ಅವರು 2013ರಲ್ಲಿ ಡಿಕೆಶಿಗೆ ಸರ್ಧೆ ನೀಡಿ, 68 ಸಾವಿರ ಮತ ಪಡೆದರು. ಈಗ ಡಿಕೆಶಿ ಜೊತೆ ಗುರುತಿಸಿಕೊಂಡಿದ್ದಾರೆ. ಬಳಿಕ ಜೆಡಿಎಸ್‌ನಿಂದ ಫೀನಿಕ್ಸಿ ಹಕ್ಕಿಯಂತೆ ಎದ್ದು ಬಂದಿದ್ದ ವಿಶ್ವನಾಥ್, ಕ್ಷೇತ್ರ ಮರುವಿಂಗಡಣೆಯ ನಂತರ 2008ರಲ್ಲಿ ನಡೆದ ಚುನಾವಣೆಯಲ್ಲಿ ಕೇವಲ 7 ಸಾವಿರ ಮತಗಳ ಅಂತರದಿಂದ ಡಿಕೆಶಿ ಎದುರು ಮಂಡಿಯೂರಿದ್ದರು. ಇನ್ನು  2018ರ ಚುನಾವಣೆಯಲ್ಲಿ ಡಿಕೆಶಿ ಜೆಡಿಎಸ್ ಅಭ್ಯರ್ಥಿ ನಾರಾಯಣಗೌಡ ವಿರುದ್ದ 79,909 ಮತಗಳಿಂದ ಗೆಲುವು ಸಾಧಿಸಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?