AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸ್ತಿಲ್ಲಲ್ಲೇ ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ, ನಮ್ಮ ನಡೆ ಕಾಂಗ್ರೆಸ್ ಕಡೆ ಎಂದ 2008ರ ಅಭ್ಯರ್ಥಿ

ಡಿಕೆ ಶಿವಕುಮಾರ್​ ವಿರುದ್ಧ JDS​ನಿಂದ ಸ್ಪರ್ಧಿಸಿ ಸೋತಿದ್ದ ಅಭ್ಯರ್ಥಿಯನ್ನೇ ಕಾಂಗ್ರೆಸ್ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರಿಂದ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್​ನ ಮತ್ತೊಂದು ವಿಕೆಟ್ ಪತನವಾಗಿದ್ದು, ಚುನಾವಣೆ ತಯಾರಿ ಆರಂಭದಲ್ಲೇ ದಳಪತಿಗಳಿಗೆ ಆಘಾತವಾಗಿದೆ.

ಚುನಾವಣೆ ಹೊಸ್ತಿಲ್ಲಲ್ಲೇ ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ, ನಮ್ಮ ನಡೆ ಕಾಂಗ್ರೆಸ್ ಕಡೆ ಎಂದ 2008ರ ಅಭ್ಯರ್ಥಿ
ದೂಂತೂರು ವಿಶ್ವನಾಥ್
TV9 Web
| Edited By: |

Updated on: Jan 07, 2023 | 4:42 PM

Share

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) 2023)ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ವೈ.ಎಸ್​.ವಿ ದತ್ತಾ ಜೆಡಿಎಸ್(JDS) ತೊರೆದು ಕಾಂಗ್ರೆಸ್ (Congress)​ ಸೇರುವುದಾಗಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಜೆಡಿಎಸ್​ನ ಮತ್ತೊಂದು ಪ್ರಮುಖ ವಿಕೆಟ್ ಪತನವಾಗಿದೆ. ರಾಮನಗರ ಜಿಲ್ಲೆಯ ಜೆಡಿಎಸ್​ನ ಪ್ರಭಾವಿ ನಾಯಕ, 2008ರಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ದೂಂತೂರು ವಿಶ್ವನಾಥ್​,(DM Vishwanath) ತೆನೆ ಇಳಿಸಿ ಕೈ ಹಿಡಿಯಲಿದ್ದಾರೆ.

ಇದನ್ನೂ ಓದಿ: ದೇವೇಗೌಡರ ಮಾನಸ ಪುತ್ರ ಜೆಡಿಎಸ್​ಗೆ ಗುಡ್​ಬೈ, ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್…!

ಹೌದು…2008ರಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ದೂಂತೂರು ವಿಶ್ವನಾಥ್​ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರ್ಪಡೆಗೆ ನಿರ್ಧರಿಸಿದ್ದಾರೆ. ಜನವರಿ 09ರಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ. ಇದೇ ವೇಳೆ ದೂಂತೂರು ವಿಶ್ವನಾಥ್ ಜೊತೆ ಹಲವು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ದೂಂತೂರು ವಿಶ್ವನಾಥ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಂಕ್ರಾಂತಿಯ ಹೊಸ್ತಿಲಲ್ಲಿ ರಾಜಕೀಯ ಸಂಕ್ರಮಣಕ್ಕೆ ನಾಂದಿ ಹಾಡುವುದು ಸೂಕ್ತವೇ ಸರಿ. 2004ರಲ್ಲಿ ಸಾತನೂರು ವಿಧಾನಸಭಾ ಕ್ಷೇತ್ರ, 2008ರಲ್ಲಿ ಮರುವಿಂಗಡಣೆ ಆದ ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಸ್ಪರ್ಧೆ ಮಾಡಿದಾಗ ನಾನಾ ರೀತಿ ಷಡ್ಯಂತ್ರಗಳ ನಡುವೆಯೂ ಸಿಕ್ಕ ನಿಮ್ಮ ಬೆಂಬಲ, ಆಸರೆ, ಆಶೀರ್ವಾದವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

2008 ವಿಧಾನಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಿ ಸೋಲುಕಂಡಿದ್ದರು. ಈ ಬಾರಿ ಡಿಕೆಶಿಗೆ ಫೈಟ್​ ಕೊಡಬೇಕು ಎನ್ನುವ ಹಠಕ್ಕೆ ಬಿದ್ದವರಂತೆ ಸಾಲು-ಸಾಲು ಸಭೆಗಳು, ಪಂಚರತ್ನ ಯಾತ್ರೆಯನ್ನು ಕನಕಪುರದಲ್ಲೇ ಮಾಡಿದ್ದರು. ಅಲ್ಲದೇ ಕಾರ್ಯಕರ್ತರು ಹಾಗೂ ನಾಯಕರಲ್ಲಿ ಹೊಸ ಹುಮ್ಮಸ್ಸು ತುಂಬಿದ್ದರು. ಇನ್ನೇನು ಚುನಾವಣೆ ಮೂರ್ನಾಲ್ಕು ತಿಂಗಳು ಇರುವಾಗಲೇ ಕನಕಪುರ ಜೆಡಿಎಸ್​ ಪ್ರಭಾವಿ ನಾಯಕ ವಿರೋಧಿ ಪಾಳಯಕ್ಕೆ ಜಿಗಿಯುತ್ತಿರುವುದು ದಳಪತಿಗಳಿಗೆ ಆರಂಭಿಕ ಆಘಾತವಾದಂತಾಗಿದೆ.

ಒಂದು ಕಾಲದಲ್ಲಿ ಜನತಾ ಪರಿವಾರದ ಭದ್ರಕೋಟೆಯಾಗಿದ್ದ ಕನಕಪುರ ಕ್ಷೇತ್ರ 2008ರ ನಂತರ ಸಂಪೂರ್ಣವಾಗಿ ಜೆಡಿಎಸ್​ ಕೈತಪ್ಪಿತ್ತು. 2008ರಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದ ದೂಂತೂರು ವಿಶ್ವನಾಥ್ ಗೆಲುವಿನ ಸಮೀಪ ಬಂದು ಸೋಲು ಕಂಡಿದ್ದರು. ಬಳಿಕ 2023ರಲ್ಲಿ ಪಿಜಿಆರ್ ಸಿಂಧ್ಯಾ ಪೈಪೋಟಿ ನೀಡದೇ ಡಿಕೆಶಿ ಮುಂದೆ ಮಂಡಿಯೂರಿದ್ದರು. ನಂತರ 2018ರ ಚುನಾವಣೆಯಲ್ಲಿ ನಾರಾಯಣಗೌಡ ಕಣಕ್ಕಿಳಿದರೂ ಡಿಕೆಶಿ ಮುಂದೆ ಆಟ ನಡೆಯಲಿಲ್ಲ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಕನಕಪುರ ಕ್ಷೇತ್ರಕ್ಕೆ ಜೆಡಿಎಸ್​ನಿಂದ ತಾಲೂಕು ಅಧ್ಯಕ್ಷ ಬಿ. ನಾಗರಾಜು ಹಾಗೂ ಗ್ರಾನೈಟ್ ಉದ್ಯಮಿ ಬಾಲನರಸಿಂಹೇಗೌಡ ಹೆಸರುಗಳು ಕೇಳಿಬರುತ್ತಿವೆ. ಅದು ಏನೇ ಇದ್ದರೂ ಈಗ ಪ್ರಭಾವಿ ನಾಯಕ ವಿಶ್ವನಾಥ್ ಜೆಡಿಎಸ್ ತೊರೆದು ಡಿಕೆಶಿ ಪಾಳಯ ಸೇರುತ್ತಿರುವುದು ದಳಪತಿಗೆ ಮತ್ತಷ್ಟು ಚಿಂತೆಗೀಡು ಮಾಡಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ