AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kapu Election 2023 Winner: ಭರ್ಜರಿ ಗೆಲುವು ಸಾಧಿಸಿದ ಗುರ್ಮೆ ಸುರೇಶ್ ಶೆಟ್ಟಿ

ವಿನಯ್​​ ಕುಮಾರ್ ಸೂರಕೆ ಅವರಿಗೆ ಪೈಪೋಟಿ ನೀಡಿದ್ದು ಗುರ್ಮೆ ಸುರೇಶ್ ಶೆಟ್ಟಿ. ವಿನಯ್​​ ಕುಮಾರ್ ಸೂರಕೆ 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಆದರೆ 2018ರಲ್ಲಿ ಕಾಪುವಿನಲ್ಲಿ ಕಾಂಗ್ರೆಸ್​​ ವಿರೋಧ ಅಲೆಗಳಿದ್ದು. ಈ ಬಾರಿ ಮತ್ತೆ ಕಾಂಗ್ರೆಸ್​ಗೆ ಕಾಪು ಜನ ಮಣೆ ಹಾಕಬಹುದ ಎಂದುಕೊಂಡಿದ್ದಾರೆ, ಆದರೆ ಈ ಬಾರಿ ಕಮಲಕ್ಕೆ ಮತ ನೀಡಿದ್ದಾರೆ.

Kapu Election 2023 Winner: ಭರ್ಜರಿ ಗೆಲುವು ಸಾಧಿಸಿದ ಗುರ್ಮೆ ಸುರೇಶ್ ಶೆಟ್ಟಿ
ಗುರ್ಮೆ ಸುರೇಶ್ ಶೆಟ್ಟಿ
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 3:50 PM

Share

ಕಾಪು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇಂದು ಪ್ರಕಟಗೊಂಡಿದೆ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ (Kapu Assembly Constituency) ಈ ಬಾರಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆದಿತ್ತು. ಇಲ್ಲಿ ಕಾಂಗ್ರೆಸ್​​ ಪ್ರಭಾವ ಹೆಚ್ಚು ಎಂದು ಹೇಳಲಾಗಿತ್ತು, ಆದರೆ ಈ ಬಾರಿ ಕೂಡ ಬಿಜೆಪಿಯೇ ಗೆದ್ದಿದೆ. ಬಿಜೆಪಿ ಭಾರೀ ಗೆಲ್ಲುವು ಸಾಧಿಸಿದೆ. 2018ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ವಿನಯ್​​ ಕುಮಾರ್ ಸೂರಕೆ, ಈ ಬಾರಿ ಮತ್ತೆ ಸ್ಪರ್ಧಿಸಿದ್ದು ಮತ್ತೆ ಸೋತಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಲಾಲಾಜಿ ಮಂಡಲ್​​ ಗೆಲುವು ಸಾಧಿಸಿದರು. ಆದರೆ ಈ ಬಾರಿ ವಿನಯ್​​ ಕುಮಾರ್ ಸೂರಕೆ ಅವರಿಗೆ ಪೈಪೋಟಿ ನೀಡಿದ್ದು ಗುರ್ಮೆ ಸುರೇಶ್ ಶೆಟ್ಟಿ. ವಿನಯ್​​ ಕುಮಾರ್ ಸೂರಕೆ 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಆದರೆ 2018ರಲ್ಲಿ ಕಾಪುವಿನಲ್ಲಿ ಕಾಂಗ್ರೆಸ್​​ ವಿರೋಧ ಅಲೆಗಳಿದ್ದು. ಈ ಬಾರಿ ಮತ್ತೆ ಕಾಂಗ್ರೆಸ್​ಗೆ ಕಾಪು ಜನ ಮಣೆ ಹಾಕಬಹುದ ಎಂದುಕೊಂಡಿದ್ದಾರೆ, ಆದರೆ ಈ ಬಾರಿ ಕಮಲಕ್ಕೆ ಮತ ನೀಡಿದ್ದಾರೆ. ಆದರೂ ಎರಡು ಪಕ್ಷಗಳ ನಡುವೆ ಭಾರೀ ಪೈಪೋಟಿ ನಡೆದಿದೆ.

ಇನ್ನೂ ಇಲ್ಲಿ ಬಿಜೆಪಿ ಅಭ್ಯರ್ಥಿಯು ಕಳೆದ ಚುನಾವಣೆಯಲ್ಲಿ 10 ಸಾವಿರ ಅಂತರದಲ್ಲಿ ಗೆಲುವು ಸಾಧಿಸಿದ್ದರು, ಆದರೆ ಲಾಲಾಜಿ ಮಂಡನ್​​ ಹೇಳಿಕೊಳ್ಳುವಷ್ಟು ಕೆಲಸ ಮಾಡಿಲ್ಲ ಎಂಬ ಮಾತು ಇಲ್ಲಿತ್ತು. ಈ ಕಾರಣಕ್ಕೆ ಬಿಜೆಪಿ ಈ ಬಾರಿ ಜಾತಿ ಲೆಕ್ಕಚಾರ ಹಾಗೂ ಸಂಘಟನಾ ಶಕ್ತಿಗೆ ಅನುಗುಣವಾಗಿ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಟಿಕೇಟ್​ ನೀಡಿತ್ತು , ಇನ್ನೂ ಕಾಂಗ್ರೆಸ್​​ನಿಂದ ಪ್ರಬಲ ಅಭ್ಯರ್ಥಿಯಾಗಿರುವ ವಿನಯ್​​ ಕುಮಾರ್ ಸೂರಕೆ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದರು.

ಇದನ್ನೂ ಓದಿ: Molakalmuru Election 2023 Winner: ಬಿಜೆಪಿ ವಿರುದ್ಧ ಕಾಂಗ್ರೆಸ್​ನ ಗೋಪಾಲಕೃಷ್ಣಗೆ ಗೆಲುವು

ಈ ಬಾರಿಯ ಜೆಡಿಎಸ್​​ನಿಂದ ಸಬೀನಾ ಸಮದ್​​ ಸ್ಪರ್ಧಿಸುತ್ತಿದ್ದು. ಸಬೀನಾ ಸಮದ್​​ ಕಾಪುವಿನಲ್ಲಿ ಪ್ರಬಲ ಅಭ್ಯರ್ಥಿ ಅಲ್ಲದಿದ್ದರು, ಮುಸ್ಲಿಂ ಸಮುದಾಯದ ಮತಗಳು ಇವರ ಪರ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಕಾಪುವಿನಲ್ಲಿ ಕಾಂಗ್ರೆಸ್​​ ಮತ್ತು ಬಿಜೆಪಿ ಹೆಚ್ಚು ಪೈಪೋಟಿ ನೀಡುತ್ತಿರುವ ಕಾರಣ ಭಾರೀ ಅಂತರದಲ್ಲಿ ಜೆಡಿಎಸ್​​​ ಸೋತಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು