AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kapu Election 2023 Winner: ಭರ್ಜರಿ ಗೆಲುವು ಸಾಧಿಸಿದ ಗುರ್ಮೆ ಸುರೇಶ್ ಶೆಟ್ಟಿ

ವಿನಯ್​​ ಕುಮಾರ್ ಸೂರಕೆ ಅವರಿಗೆ ಪೈಪೋಟಿ ನೀಡಿದ್ದು ಗುರ್ಮೆ ಸುರೇಶ್ ಶೆಟ್ಟಿ. ವಿನಯ್​​ ಕುಮಾರ್ ಸೂರಕೆ 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಆದರೆ 2018ರಲ್ಲಿ ಕಾಪುವಿನಲ್ಲಿ ಕಾಂಗ್ರೆಸ್​​ ವಿರೋಧ ಅಲೆಗಳಿದ್ದು. ಈ ಬಾರಿ ಮತ್ತೆ ಕಾಂಗ್ರೆಸ್​ಗೆ ಕಾಪು ಜನ ಮಣೆ ಹಾಕಬಹುದ ಎಂದುಕೊಂಡಿದ್ದಾರೆ, ಆದರೆ ಈ ಬಾರಿ ಕಮಲಕ್ಕೆ ಮತ ನೀಡಿದ್ದಾರೆ.

Kapu Election 2023 Winner: ಭರ್ಜರಿ ಗೆಲುವು ಸಾಧಿಸಿದ ಗುರ್ಮೆ ಸುರೇಶ್ ಶೆಟ್ಟಿ
ಗುರ್ಮೆ ಸುರೇಶ್ ಶೆಟ್ಟಿ
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 3:50 PM

Share

ಕಾಪು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇಂದು ಪ್ರಕಟಗೊಂಡಿದೆ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ (Kapu Assembly Constituency) ಈ ಬಾರಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆದಿತ್ತು. ಇಲ್ಲಿ ಕಾಂಗ್ರೆಸ್​​ ಪ್ರಭಾವ ಹೆಚ್ಚು ಎಂದು ಹೇಳಲಾಗಿತ್ತು, ಆದರೆ ಈ ಬಾರಿ ಕೂಡ ಬಿಜೆಪಿಯೇ ಗೆದ್ದಿದೆ. ಬಿಜೆಪಿ ಭಾರೀ ಗೆಲ್ಲುವು ಸಾಧಿಸಿದೆ. 2018ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ವಿನಯ್​​ ಕುಮಾರ್ ಸೂರಕೆ, ಈ ಬಾರಿ ಮತ್ತೆ ಸ್ಪರ್ಧಿಸಿದ್ದು ಮತ್ತೆ ಸೋತಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಲಾಲಾಜಿ ಮಂಡಲ್​​ ಗೆಲುವು ಸಾಧಿಸಿದರು. ಆದರೆ ಈ ಬಾರಿ ವಿನಯ್​​ ಕುಮಾರ್ ಸೂರಕೆ ಅವರಿಗೆ ಪೈಪೋಟಿ ನೀಡಿದ್ದು ಗುರ್ಮೆ ಸುರೇಶ್ ಶೆಟ್ಟಿ. ವಿನಯ್​​ ಕುಮಾರ್ ಸೂರಕೆ 2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದರು. ಆದರೆ 2018ರಲ್ಲಿ ಕಾಪುವಿನಲ್ಲಿ ಕಾಂಗ್ರೆಸ್​​ ವಿರೋಧ ಅಲೆಗಳಿದ್ದು. ಈ ಬಾರಿ ಮತ್ತೆ ಕಾಂಗ್ರೆಸ್​ಗೆ ಕಾಪು ಜನ ಮಣೆ ಹಾಕಬಹುದ ಎಂದುಕೊಂಡಿದ್ದಾರೆ, ಆದರೆ ಈ ಬಾರಿ ಕಮಲಕ್ಕೆ ಮತ ನೀಡಿದ್ದಾರೆ. ಆದರೂ ಎರಡು ಪಕ್ಷಗಳ ನಡುವೆ ಭಾರೀ ಪೈಪೋಟಿ ನಡೆದಿದೆ.

ಇನ್ನೂ ಇಲ್ಲಿ ಬಿಜೆಪಿ ಅಭ್ಯರ್ಥಿಯು ಕಳೆದ ಚುನಾವಣೆಯಲ್ಲಿ 10 ಸಾವಿರ ಅಂತರದಲ್ಲಿ ಗೆಲುವು ಸಾಧಿಸಿದ್ದರು, ಆದರೆ ಲಾಲಾಜಿ ಮಂಡನ್​​ ಹೇಳಿಕೊಳ್ಳುವಷ್ಟು ಕೆಲಸ ಮಾಡಿಲ್ಲ ಎಂಬ ಮಾತು ಇಲ್ಲಿತ್ತು. ಈ ಕಾರಣಕ್ಕೆ ಬಿಜೆಪಿ ಈ ಬಾರಿ ಜಾತಿ ಲೆಕ್ಕಚಾರ ಹಾಗೂ ಸಂಘಟನಾ ಶಕ್ತಿಗೆ ಅನುಗುಣವಾಗಿ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಟಿಕೇಟ್​ ನೀಡಿತ್ತು , ಇನ್ನೂ ಕಾಂಗ್ರೆಸ್​​ನಿಂದ ಪ್ರಬಲ ಅಭ್ಯರ್ಥಿಯಾಗಿರುವ ವಿನಯ್​​ ಕುಮಾರ್ ಸೂರಕೆ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದರು.

ಇದನ್ನೂ ಓದಿ: Molakalmuru Election 2023 Winner: ಬಿಜೆಪಿ ವಿರುದ್ಧ ಕಾಂಗ್ರೆಸ್​ನ ಗೋಪಾಲಕೃಷ್ಣಗೆ ಗೆಲುವು

ಈ ಬಾರಿಯ ಜೆಡಿಎಸ್​​ನಿಂದ ಸಬೀನಾ ಸಮದ್​​ ಸ್ಪರ್ಧಿಸುತ್ತಿದ್ದು. ಸಬೀನಾ ಸಮದ್​​ ಕಾಪುವಿನಲ್ಲಿ ಪ್ರಬಲ ಅಭ್ಯರ್ಥಿ ಅಲ್ಲದಿದ್ದರು, ಮುಸ್ಲಿಂ ಸಮುದಾಯದ ಮತಗಳು ಇವರ ಪರ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಕಾಪುವಿನಲ್ಲಿ ಕಾಂಗ್ರೆಸ್​​ ಮತ್ತು ಬಿಜೆಪಿ ಹೆಚ್ಚು ಪೈಪೋಟಿ ನೀಡುತ್ತಿರುವ ಕಾರಣ ಭಾರೀ ಅಂತರದಲ್ಲಿ ಜೆಡಿಎಸ್​​​ ಸೋತಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ