Karnataka Assembly Election 2023: ಮತದಾನದಲ್ಲಿ ಈ ಜಿಲ್ಲೆಯೇ ರಾಜ್ಯಕ್ಕೆ ಪ್ರಥಮ. ಕಾರಣವೇನು?

ಘಟಾನುಘಟಿ ರಾಜಕಾರಿಣಿಗಳು ಸ್ಪರ್ಧಿಸಿರುವ ಆ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಿಲು ಅಲ್ಲಿನ ಜಿಲ್ಲಾಡಳಿತ ವಿನೂತನ ಹಾಗೂ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸಿತ್ತು. ಜಾಗೃತಿಯ ಫಲವೋ, ಇಲ್ಲ ಅಭ್ಯರ್ಥಿಗಳ ಆಮಿಷವೋ? ಜಿಲ್ಲೆಯ ಮತದಾನ ಪ್ರಮಾಣ ರಾಜ್ಯಕ್ಕೆ ಪ್ರಥಮವಾಗಿದೆ. ಅಷ್ಟಕ್ಕೂ ಆ ಜಿಲ್ಲೆ ಯಾವುದು ಅಂತೀರಾ? ಈ ಸ್ಟೋರಿ ನೋಡಿ.

Karnataka Assembly Election 2023: ಮತದಾನದಲ್ಲಿ ಈ ಜಿಲ್ಲೆಯೇ ರಾಜ್ಯಕ್ಕೆ ಪ್ರಥಮ. ಕಾರಣವೇನು?
ಚಿಕ್ಕಬಳ್ಳಾಪುರ ಮತಗಟ್ಟೆ
Follow us
|

Updated on: May 12, 2023 | 9:31 AM

ಚಿಕ್ಕಬಳ್ಳಾಪುರ: 2023ರ ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Election 2023) ಯಲ್ಲಿ ಮತದಾರರನ್ನ ಮತಗಟ್ಟೆಗಳತ್ತ ಸೆಳೆಯಲು ಭಾರತೀಯ ಚುನಾವಣಾ ಆಯೋಗ ಈ ಸಲ ವಿನೂತನ ರೀತಿಯಲ್ಲಿ ಮತಗಟ್ಟೆಗಳ ಸಜ್ಜಗೊಳಿಸಿ ಮತದಾರರ ಆಕರ್ಷಣೆಗೆ ಯತ್ನಿಸಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ 5 ವಿಧಾನಸಭಾ ಕ್ಷೇತ್ರಗಳಲ್ಲಿ ಬರಪೂರ ಮತದಾನವಾಗಿದ್ದು. ಕೆಲವು ಬೂತ್​ಗಳಲ್ಲಿ ರಾತ್ರಿ 8 ಗಂಟೆಯವರೆಗೂ ಮತದಾನ ನಡೆದಿತ್ತು. ಇದರಿಂದ ಜಿಲ್ಲೆಯಾದ್ಯಂತ ಇರುವ 10,38,828 ಜನ ಮತದಾರರಲ್ಲಿ ಬರೊಬ್ಬರಿ 8,98,310 ಜನ ಮತದಾರರು ಮತ ಚಲಾಯಿಸಿದ್ದಾರೆ. ಇದರಿಂದ ಶೇಕಡಾ 85.83 ರಷ್ಟು ಮತದಾನವಾಗಿದ್ದು. ರಾಜ್ಯದಲ್ಲಿಯೇ ಅತೀ ಹೆಚ್ಚು ಮತದಾನವಾದ ಜಿಲ್ಲೆಗಳಲ್ಲಿ ಪ್ರಥಮ ಸ್ಥಾನದಲ್ಲಿದೆ. ಇದರಿಂದ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜ್ ಶ್ರಮಿಸಿದ ಅಧಿಕಾರಿ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

ವಿನೂತನ ರೀತಿಯಲ್ಲಿ ಮತದಾನ ಜಾಗೃತಿ

ಇನ್ನು ಜಿಲ್ಲೆಯ ಗೌರೀಬಿದನೂರು, ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಚಿಕ್ಕಬಳ್ಳಾಪುರ ಜಿಲ್ಲಾಢಳಿತ ಶ್ರಮಿಸಿತ್ತು. ಸ್ವತಃ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ, ಜಿಲ್ಲೆಯಾಧ್ಯಂತ ಮತದಾನದ ಬಗ್ಗೆ ಪ್ರಮಾಣವಚನ, ವಾಕಥಾನ್, ಬೈಕ್ ರ್ಯಾಲಿ, ರಂಗೋಲಿ ಸ್ಪರ್ಧೆ ಬೀದಿನಾಟಕ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಸಿಬ್ಬಂದಿಯನ್ನ ಬಳಸಿಕೊಂಡಿದ್ದರು. ಒಟ್ಟಾರೆ ಚಿಕ್ಕಬಳ್ಳಾಪುರ ಜಿಲ್ಲೆ ಮತದಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದೆ.

ವರದಿ: ಭೀಮನಗೌಡ ಟಿವಿ9 ಚಿಕ್ಕಬಳ್ಳಾಫುರ

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ