AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಇಂದಿನಿಂದ ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ, ಅಭ್ಯರ್ಥಿಗಳ ಪರ ಮತಬೇಟೆ

ರಾಜ್ಯ ವಿಧಾನಸಭೆ ಚುನಾವಣೆಗೆ ಅಬ್ಬರದ ಪ್ರಚಾರ ಶುರುವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದಿನಿಂದ (ಏ.23) ಜನವಾಹಿನಿ ಹೆಸರಿನಲ್ಲಿ ಭರ್ಜರಿ ರೋಡ್​ ಶೋ, ಸಮಾವೇಶಗಳನ್ನು ಪ್ರಾರಂಭಿಸಲಿದ್ದಾರೆ.

Karnataka Assembly Election 2023: ಇಂದಿನಿಂದ ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ, ಅಭ್ಯರ್ಥಿಗಳ ಪರ ಮತಬೇಟೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿವೇಕ ಬಿರಾದಾರ
|

Updated on:Apr 23, 2023 | 7:59 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಅಬ್ಬರದ ಪ್ರಚಾರ ಶುರುವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (CM Basavaraj Bommai) ಇಂದಿನಿಂದ (ಏ.23) ಜನವಾಹಿನಿ ಹೆಸರಿನಲ್ಲಿ ಭರ್ಜರಿ ರೋಡ್​ ಶೋ, ಸಮಾವೇಶಗಳನ್ನು ಪ್ರಾರಂಭಿಸಲಿದ್ದಾರೆ. ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ಸಿಎಂ ಬೊಮ್ಮಾಯಿ ರೋಡ್​ಶೋ ಆರಂಭಿಸಲಿದ್ದಾರೆ. ಸಿಎಂ ಬೊಮ್ಮಾಯಿಯವರು ಒಂದೇ ದಿನ 11 ವಿಧಾಸಭಾ ಕ್ಷೇತ್ರಗಳಲ್ಲಿ (Assembly  Constituency) ಬಿರುಸಿನ ಪ್ರಚಾರ ಕೈಗೊಳ್ಳಲಿದ್ದಾರೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.

ಸಿಎಂ ಬೊಮ್ಮಾಯಿ ರೋಡ್​ ಶೋ, ಸಮಾವೇಶ ವೇಳಾಪಟ್ಟಿ

ಬೆಳಗ್ಗೆ 9.45 ಬೆಂಗಳೂರಿನ ಬಸವೇಶ್ವರ ವೃತ್ತದಲ್ಲಿನ ಮೂರ್ತಿಗೆ ಮಾಲಾರ್ಪಣೆ, ಬೆಳಿಗ್ಗೆ 11ಕ್ಕೆ ಯಲಹಂಕದಲ್ಲಿ ರೋಡ್​ಶೋ ಮತ್ತು ಸಾರ್ವಜನಿಕ ಸಭೆ, 11.30ಕ್ಕೆ ದೊಡ್ಡಬಳ್ಳಾಪುರ, ಮಧ್ಯಾಹ್ನ 12.30ಕ್ಕೆ ನೆಲಮಂಗಲ, 1.30ಕ್ಕೆ ದಾಬಸ್ ಪೇಟೆ, 2.15ಕ್ಕೆ ಗೂಳೂರು, 3.00 ಗಂಟೆಗೆ ತುಮಕೂರು ನಗರ, 4 ಗಂಟೆಗೆ ಗುಬ್ಬಿ, ಸಂಜೆ 5.00 ಗಂಟೆಗೆ ಕೆ.ಬಿ. ಕ್ರಾಸ್, 6.00 ಗಂಟೆಗೆ ತಿಪಟೂರು, 7.00 ಗಂಟೆಗೆ ಅರಸೀಕೆರೆ, ರಾತ್ರಿ 7.45ಕ್ಕೆ ಬಾಣಾವರ, 8.15ಕ್ಕೆ ಕಡೂರುನಲ್ಲಿ ರೋಡ್​ ಶೋ ಮತ್ತು ಸಾರ್ವಜನಿಕ ಸಭೆ ನಡೆಸಲಿದ್ದಾರೆ. ರಾತ್ರಿ 9.15 ಚಿಕ್ಕಮಗಳೂರು ತಲುಪಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನ ವರುಣಾದಲ್ಲಿ ಮುಗಿಸಲು ಕಾಂಗ್ರೆಸ್​ನವರು ಹುನ್ನಾರ ಮಾಡಿದ್ದಾರೆಂದು ಜಗತ್ತಿಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:58 am, Sun, 23 April 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ