Karnataka Election Highlights: ಬಂಡಾಯ ಅಭ್ಯರ್ಥಿಗಳನ್ನು ಜೆಡಿಎಸ್​ಗೆ ಸೇರಿಸಿಕೊಳ್ಳುವುದೇ ಕುಮಾರಸ್ವಾಮಿ ಕೆಲಸ: ಸಿದ್ದರಾಮಯ್ಯ ಲೇವಡಿ

| Updated By: Rakesh Nayak Manchi

Updated on:Apr 09, 2023 | 8:05 PM

Karnataka Assembly Election Live Updates: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದಾಗಿನಿಂದಲೂ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಾಜಕೀಯ ಬೆಳವಣಿಗೆಗಳು ಏರುಗತಿಯಲ್ಲಿ ಸಾಗುತ್ತಿವೆ. ಈ ಕುರಿತಾದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ

Karnataka Election Highlights: ಬಂಡಾಯ ಅಭ್ಯರ್ಥಿಗಳನ್ನು ಜೆಡಿಎಸ್​ಗೆ ಸೇರಿಸಿಕೊಳ್ಳುವುದೇ ಕುಮಾರಸ್ವಾಮಿ ಕೆಲಸ: ಸಿದ್ದರಾಮಯ್ಯ ಲೇವಡಿ

ಕರ್ನಾಟಕ ವಿಧಾನಸಭೆಗೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಪ್ರಮುಖ ಮೂರು ರಾಜಕೀಯ ಪಕ್ಷಗಳು ರಂಣರಂಗಕ್ಕೆ ಕಂಕಣ ಕಟ್ಟಿಕೊಂಡು ಇಳಿದಿವೆ. ಮೂರು ಪಕ್ಷಗಳಲ್ಲಿ ಟಿಕೆಟ್​ ಹಂಚಿಕೆ ವಿಚಾರವಾಗಿ ಒಳ ಒಳಗೆ ವೈಮನಸ್ಸು ಏರ್ಪಟ್ಟಿದೆ. ಕಾಂಗ್ರೆಸ್​ ಈಗಾಗಲೆ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ, ತಮಗೆ ಟಿಕೆಟ್​ ಸಿಗಲಿಲ್ಲವೆಂದು ರಾಜ್ಯದ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಜೆಡಿಎಸ್ 2ನೇ ಪಟ್ಟಿ ಬಿಡುಗಡೆ ಮಾಡಬೇಕಿದ್ದು, ಬಂಡಾಯವೆದ್ದ 2 ರಾಷ್ಟ್ರೀಯ ಪಕ್ಷಗಳ ಗೆಲ್ಲುವ ಅಭ್ಯರ್ಥಿಗಳನ್ನು ತನ್ನತ್ತ ಸೆಳೆದುಕೊಂಡು ಪಕ್ಷದ ಟಿಕೆಟ್​​ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನು ಬಿಜೆಪಿ ಅಳಿದು, ತೂಗಿ ಟಿಕೆಟ್​ ನೀಡುತ್ತಿದ್ದು, ರಾಜ್ಯ ನಾಯಕರು ಹೈಕಮಾಂಡ್​ ಜೊತೆ 2 ದಿನಗಳ ಕಾಲ ಮೀಟಿಂಗ್​ ಮಾಡಿದ್ದು, ಪಟ್ಟಿ ಬಿಡುಗಡೆಯಾಗುವುದು ಬಾಕಿ ಇದೆ. ಇದರ ಜೊತೆಗೆ ಇಂದಿನ ಲೇಟೆಸ್ಟ್​​ ಅಪ್ಡೇಟ್ಸ್​

LIVE NEWS & UPDATES

The liveblog has ended.
  • 09 Apr 2023 06:53 PM (IST)

    Karnataka Election Live: ವೈಎಸ್​ವಿ ದತ್ತಾಗೆ ಕಾಂಗ್ರೆಸ್​​ನಲ್ಲಿ ಸೂಕ್ತ ಸ್ಥಾನಮಾನದ ಬಗ್ಗೆ ಮಾತುಕತೆ: ಕೆಎಸ್ ಆನಂದ್

    ಚಿಕ್ಕಮಗಳೂರು: ಪಕ್ಷೇತರ ಅಭ್ಯರ್ಥಿಯಾಗಿ ವೈಎಸ್​ವಿ ದತ್ತಾ ಘೋಷಣೆ ವಿಚಾರವಾಗಿ ಮಾತನಾಡಿದ ಕಡೂರು ಕಾಂಗ್ರೆಸ್ ಅಭ್ಯರ್ಥಿ ಕೆಎಸ್ ಆನಂದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದತ್ತಾ ಜೊತೆಗೆ ಮಾತನಾಡಿದ್ದಾರೆ‌. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಾರೆ. ಜಾತ್ಯತೀತ ಮತಗಳು ವಿಭಜನೆಯಾಗದಂತೆ ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು. ಕಾಂಗ್ರೆಸ್ ಸೇರ್ಪಡೆ ಸಮಯದಲ್ಲಿ ಅವಕಾಶ ಸಿಕ್ಕಿದರೆ ಟಿಕೆಟ್ ಕೊಡುವಂತೆ ಕೇಳಿದ್ದರು. ಟಿಕೆಟ್ ಕೊಡದೆ ಇದ್ದರೂ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುವುದಾಗಿ ದತ್ತಾ ಹೇಳಿದ್ದರು. ದತ್ತಾರನ್ನ ಪಕ್ಷದಲ್ಲೇ ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನವನ್ನು ಮಾಡುತ್ತೇವೆ. ಇನ್ನು ಸಮಯವಿದೆ ದತ್ತಾ ಜೊತೆ ಮಾತನಾಡಿ ಉಳಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತೇವೆ ಎಂದರು.

  • 09 Apr 2023 06:06 PM (IST)

    Karnataka Election Live: ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್​​ ಮಾಜಿ ಎಂಎಲ್​​ಸಿ ನಾಗರಾಜ್ ಛಬ್ಬಿ

    ದೆಹಲಿ: ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾಗೊಂಡಿದ್ದ ಮಾಜಿ ಎಂಎಲ್​​ಸಿ ನಾಗರಾಜ್ ಛಬ್ಬಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ದೆಹಲಿಯಲ್ಲಿರುವ ನಿವಾಸದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಲಘಟಗಿ ಕಾಂಗ್ರೆಸ್ ಟಿಕೆಟ್​ ತನಗೆ ನೀಡದೆ ಸಂತೋಷ್​​ ಲಾಡ್​ಗೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಛಬ್ಬಿ, ಇದೀಗ ಅದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

  • 09 Apr 2023 05:57 PM (IST)

    Karnataka Election Live: ಪ್ರಧಾನಿ ಮೋದಿ ರಾಜ್ಯಕ್ಕೆ ಎಷ್ಟು ಬಾರಿ ಬಂದರೂ ಏನೂ ಆಗಲ್ಲ; ಸಿದ್ದರಾಮಯ್ಯ

    ಬಂಡಾಯ ಅಭ್ಯರ್ಥಿಗಳನ್ನು JDSಗೆ ಸೇರಿಸಿಕೊಳ್ಳುವುದೇ ಕುಮಾರಸ್ವಾಮಿ ಕೆಲಸ: ಸಿದ್ದರಾಮಯ್ಯ

    ಹಾಸನ: ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಪ್ರಧಾನಿ ಮೋದಿ ಬರುತ್ತಿದ್ದಾರೆ. ಅವರು ರಾಜ್ಯಕ್ಕೆ ಎಷ್ಟು ಬಾರಿ ಬಂದರೂ ಏನೂ ಆಗಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲೆಯ ಅರಸೀಕೆರೆಯಲ್ಲಿ ಮಾತನಾಡಿದ ಅವರು, ಬಂಡಾಯ ಅಭ್ಯರ್ಥಿಗಳನ್ನು JDSಗೆ ಸೇರಿಸಿಕೊಳ್ಳುವುದೇ ಕುಮಾರಸ್ವಾಮಿ ಕೆಲಸವಾಗಿದೆ. ಟಿಕೆಟ್ ಸಿಗದವರನ್ನು ಕರೆಸಿ JDS ಟಿಕೆಟ್ ಕೊಡುವುದೇ ಅವರ ಕೆಲಸ, ಬಿಜೆಪಿಯನವರೂ ಕಾಯುತ್ತಿದ್ದಾರೆಂದು ಲೇವಡಿ ಮಾಡಿದರು. ಎಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುತ್ತಾರೋ ಅಲ್ಲಿ ಬಂಡಾಯ ಸಹಜವಾಗಿದೆ. ಒಂದೊಂದು ಕ್ಷೇತ್ರದಲ್ಲಿ 15ರಿಂದ 20ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದಾರೆ. ಎಲ್ಲರಿಗೂ ಟಿಕೆಟ್​ ನೀಡಲು ಆಗುವುದಿಲ್ಲ, ಎಲ್ಲರ ಜತೆ ಮಾತಾಡುತ್ತೇವೆ. ನನಗೆ 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಹೈಕಮಾಂಡ್​ ಹೇಳಿದರೆ ಸ್ಪರ್ಧಿಸುತ್ತೇನೆ ಎಂದರು.

  • 09 Apr 2023 05:20 PM (IST)

    Karnataka Election Live: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲು

    ರಾಯಚೂರು: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ವಿರುದ್ಧ ಜೆಡಿಎಸ್ ದೂರು ನೀಡಿದೆ. ಶಾಸಕರ ವೈರಲ್ ಆಡಿಯೋ ಆಧರಿಸಿ ರಾಯಚೂರು ನಗರದ ಪಶ್ಚಿಮ ಠಾಣೆಗೆ ಜೆಡಿಎಸ್ ದೂರು ನೀಡಿದೆ. ಅಲ್ಲದೆ, ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತೆ ಪೋಸ್ಟ್ ಮಾಡಿದ್ದ ಆರೋಪದಡಿ ನಟ ಚೇತನ್ ಅಹಿಂಸಾ ಅವರನ್ನು ಬಂಧಿಸಿದಂತೆ ಶಾಸಕ ಶಿವರಾಜ್ ಪಾಟೀಲ್​ರನ್ನು ಬಂಧಿಸಬೇಕು ಎಂದು ಜೆಡಿಎಸ್ ಮನವಿ ಮಾಡಿದೆ.

  • 09 Apr 2023 04:45 PM (IST)

    Karnataka Election Live: ನಮ್ಮ ಪಕ್ಷದ ನಾಯಕರ ತೀರ್ಮಾನಕ್ಕೆ ನಾನು ಬದ್ಧ: ಸಲೀಂ ಅಹ್ಮದ್​

    ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಸೋಲಿಸಲು ಜನರು ತೀರ್ಮಾನಿಸಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ

    ಹಾವೇರಿ: ಶಿಗ್ಗಾಂವಿ ಕ್ಷೇತ್ರದಿಂದ ಸಲೀಂ ಅಹ್ಮದ್ ಸ್ಪರ್ಧೆಗೆ ಒತ್ತಡ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ನಮ್ಮ ಪಕ್ಷದ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಶಿಗ್ಗಾಂವಿ ಕ್ಷೇತ್ರದ ‘ಕೈ’ ಟಿಕೆಟ್​​ಗೆ 14 ಮಂದಿ ಅರ್ಜಿ ಹಾಕಿದ್ದರು. ಅದರಲ್ಲಿ 8 ಜನರ ಹೆಸರನ್ನು ಹೈಕಮಾಂಡ್​​ಗೆ ಕಳುಹಿಸಿದ್ದೆವು. ನಾವು ಕಳಿಸಿದ ಪಟ್ಟಿಯಲ್ಲಿ ವಿನಯ್​ ಕುಲಕರ್ಣಿ ಹೆಸರು ಇರಲಿಲ್ಲ. ಆದರೆ ಕುಲಕರ್ಣಿ ಕಣಕ್ಕಿಳಿಸುವ ಬಗ್ಗೆ ಹೈಕಮಾಂಡ್ ಚರ್ಚೆ ಮಾಡಿತ್ತು. 2-3 ದಿನ ಕಾದು ನೋಡಿ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಸೋಲಿಸಲು ಜನರು ತೀರ್ಮಾನಿಸಿದ್ದಾರೆ ಎಂದರು.

  • 09 Apr 2023 04:41 PM (IST)

    Karnataka Election Live: ಮೇ 10ರ ನಂತರ ಕರ್ನಾಟಕದಲ್ಲಿ ಹೊಸ ಶಕೆ ಆರಂಭ: ರಾಜ್ಯಸಭಾ ಸದಸ್ಯ ಎಲ್​ಎನ್ ಹನುಮಂತಯ್ಯ

    ಮಂಗಳೂರು: 40% ಸರ್ಕಾರವನ್ನು ತೆಗೆಯಲು ರಾಜ್ಯದ ಜನರು ಕಾಯುತ್ತಿದ್ದಾರೆ. ಸಂಪೂರ್ಣ ಬಹುಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮೇ 10ರ ನಂತರ ಕರ್ನಾಟಕದಲ್ಲಿ ಹೊಸ ಶಕೆ ಆರಂಭವಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಎಲ್​ಎನ್​ ಹನುಮಂತಯ್ಯ ಹೇಳಿದರು. 2-3 ದಿನಗಳಲ್ಲಿ ಇನ್ನುಳಿದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಬಿಜೆಪಿ‌ಗೆ ಮೊದಲ ಪಟ್ಟಿಯನ್ನೂ ಬಿಡುಗಡೆ ಮಾಡದಂತಹ ಸ್ಥಿತಿ ಇದೆ. ಅನೈತಿಕ ಮಾರ್ಗದ ಮೂಲಕ ಗೆಲ್ಲಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಸಾವಿರಾರು ಐಟಿ‌ ಅಧಿಕಾರಿಗಳು ರಾಜ್ಯಕ್ಕೆ ಬಂದಿರುವ ಮಾಹಿತಿ ಇದೆ. ಅಕ್ರಮವಾಗಿ ವಿಧಾನಸಭೆ ಚುನಾವಣೆ ಗೆಲ್ಲಬೇಕೆಂಬ ಆಸೆ ಬಿಜೆಪಿಗಿದೆ ಎಂದರು.

  • 09 Apr 2023 04:38 PM (IST)

    Karnataka Election Live: ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್​: ರಮೇಶ್ ಜಾರಕಿಹೊಳಿ

    ಬೆಳಗಾವಿ: ಅಥಣಿ ಕ್ಷೇತ್ರದ ಟಿಕೆಟ್​​ಗೆ ಲಕ್ಷ್ಮಣ ಸವದಿ, ಮಹೇಶ್ ಕುಮಟಳ್ಳಿ ನಡುವೆ ಫೈಟ್ ವಿಚಾರವಾಗಿ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್​ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲೂಕಿನ ಶಿನೋಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲು ಆಗಲ್ಲ. ಶ್ರೀಮಂತ ಪಾಟೀಲ್ ಸೇರಿದಂತೆ ಬಿಜೆಪಿ ಸೇರಿದ ಎಲ್ಲರಿಗೂ ಟಿಕೆಟ್ ಸಿಗುತ್ತದೆ. ಬಿಜೆಪಿ ಸೇರಿದ ಎಲ್ಲರಿಗೂ ಹೈಕಮಾಂಡ್ ಆಶೀರ್ವಾದ ಮಾಡುತ್ತದೆ. ಲಕ್ಷ್ಮಣ ಸವದಿ ಏಕೆ ಹತಾಶರಾಗಿ ಮಾತಾಡುತ್ತಿದ್ದಾರೋ ಅರ್ಥವಾಗುತ್ತಿಲ್ಲ. ನಾನು ಹಾಗೂ ಎಂಎಲ್​​ಸಿ ಲಕ್ಷ್ಮಣ ಸವದಿ ಸಣ್ಣ ಗಿಡ. ರಾಷ್ಟ್ರೀಯ ನಾಯಕರು ಹೆಮ್ಮರ, ಅವರು ನಿರ್ಣಯ ಮಾಡುತ್ತಾರೆ. ಯಾಕಿಷ್ಟು ಚಡಪಡಿಸುತ್ತಿದ್ದೀಯಾ ಲಕ್ಷ್ಮಣ್ ಅಣ್ಣ, ಆರಾಮವಾಗಿರು ಎಂದರು.

  • 09 Apr 2023 03:11 PM (IST)

    Karnataka Election Live: ಕಾಂಗ್ರೆಸ್ ಮುಖಂಡರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಕೈಯಲ್ಲಿ ಕಂತೆಕಂತೆ ನೋಟು

    ತುಮಕೂರು: ಕಾಂಗ್ರೆಸ್ ಮುಖಂಡರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರ ಕೈಯಲ್ಲಿ ಕಂತೆಕಂತೆ ನೋಟು ಪತ್ತೆಯಾಗಿದೆ. ಮಧುಗಿರಿ ತಾಲೂಕಿನ ಕೈಮರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕಾರ್ಯಕರ್ತನಿಗೆ ಹಣ ನೀಡಲು ಮುಂದಾಗಿದ್ದಾರೆ. 500 ರೂ. ಮುಖಬೆಲೆಯ ನೋಟುಗಳನ್ನು ತೆಗೆದಾಗ ಕ್ಯಾಮರಾ ನೋಡಿದ ಕುಮಾರಸ್ವಾಮಿ ಕಾರ್ಯಕರ್ತನನ್ನು ವಾಪಸ್​​​ ಕಳುಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೊಂಡವಾಡಿ ಚಂದ್ರಶೇಖರ್ ಅವರು ತಮ್ಮ ಬೆಂಬಲಿಗರ ಜತೆ ಜೆಡಿಎಸ್ ಸೇರಿದರು. ಕಾಂಗ್ರೆಸ್​ನಲ್ಲಿ ಟಿಕೆಟ್ ಸಿಗದಿದ ಹಿನ್ನೆಲೆ ಜೆಡಿಎಸ್ ಸೇರಿದ್ದಾರೆ.

  • 09 Apr 2023 02:55 PM (IST)

    Karnataka Election Live: ಇವತ್ತು ರಾತ್ರಿ ಬಜೆಪಿ ಪಟ್ಟಿ ಬಿಡುಗಡೆ ಸಾಧ್ಯತೆ: ಜಗದೀಶ್ ಶೆಟ್ಟರ್

    ಹುಬ್ಬಳ್ಳಿ: ಇವತ್ತು ರಾತ್ರಿ ಬಜೆಪಿ ಪಟ್ಟಿ ಬಿಡುಗಡೆ ಆಗಬಹುದು ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮಾದ್ಯಮ ಕೇಂದ್ರ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಇವತ್ತು ಸಾಯಂಕಾಲ‌ ಪಾರ್ಲಿಮೆಂಟರಿ ಮೀಟಿಂಗ್ ಫಿಕ್ಸ್ ಆಗಿದೆ. ಇವತ್ತು ರಾತ್ರಿ ಮೊದಲ‌ ಪಟ್ಟಿ ಬಿಡುಗಡೆ ಆಗಬಹುದು ಅನ್ನೋ ಮಾಹಿತಿ ಇದೆ. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ನಮ್ಮ ಲಿಸ್ಟ್ ಬಿಡುಗಡೆ ಆಗಿದೆ. ಹಿಂದಿನ ಚುನಾವಣೆಯಲ್ಲೂ ಇದೇ ತರಹ ಆಗಿದೆ. ಹೀಗಾಗಿ ವಿಳಂಬ ಅನ್ನೋ ಪ್ರಶ್ನೆ ಬರಲ್ಲ ಎಂದರು. ಕಾಂಗ್ರೆಸ್ ಒಂದು ತಿಂಗಳ ಮುಂಚೆ 224 ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡುತ್ತೇವೆ ಅಂದಿದ್ದರು. ಆದರೆ ಹಂತಹಂತವಾಗಿ ಬಿಡುಗಡೆ ಮಾಡುತ್ತಿದ್ದಾರೆ. ಜೆಡಿಎಸ್ ಇನ್ನೂ ಎರಡನೇ ಪಟ್ಟಿ ಬಿಡುಗಡೆ ಮಾಡಿಯೇ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಎಲ್ಲವೂ ಫೈನಲ್ ಆಗಿ ಇಂದು ರಾತ್ರಿ ಬಿಡುಗಡೆ ಆಗಬಹುದು ಎಂದರು.

  • 09 Apr 2023 02:51 PM (IST)

    Karnataka Election Live: ಬಳ್ಳಾರಿಯಲ್ಲಿ ಆಪರೇಷನ್ ಕೆಆರ್​ಪಿಪಿ ಅರಂಭ; ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಹಿತ ಮುಖಂಡರು ಕೆಆರ್​ಪಿಪಿ ಸೇರ್ಪಡೆ

    ಬಳ್ಳಾರಿ: ಜಿಲ್ಲೆಯಲ್ಲಿ ಆಪರೇಷನ್ ಕೆಆರ್​ಪಿಪಿ ಶುರವಾಗಿದೆ. ಗಾಲಿ ಜನಾರ್ದನ ರೆಡ್ಡಿಯವರು ಈ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು ಸೇರ್ಪಡೆಯಾಗಿದ್ದಾರೆ. ಪಾಲಿಕೆಯ ಮಾಜಿ ಮೇಯರ್​ ವೆಂಕಟರಮಣ, ಮಾಜಿ ಸದಸ್ಯೆ ಪರ್ವಿನ್ ಬಾನು, ಕಾಂಗ್ರೆಸ್ ಮುಖಂಡರಾದ ಶಾಸಾಬ್, ವಿ.ಎಸ್. ಮರಿದೇವಯ್ಯ, ರಾಮುಡು ಕೆಆರ್​ಪಿಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಮೇಯರ್ ವೆಂಕಟರಮಣ ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕ್ಷಾಂಕಿಯಾಗಿದ್ದರು. ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಸಮ್ಮುಖದಲ್ಲಿ ಇವರೆಲ್ಲರೂ ಪಕ್ಷಕ್ಕೆ ಸೇರ್ಪಡೆಯಾಗಿದ್ದಾಋಏ.

  • 09 Apr 2023 02:44 PM (IST)

    Karnataka Election Live: ಮುಸ್ಲಿಂ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್, ಜೆಡಿಎಸ್ ಶ್ರಮಿಸಬೇಕು: ಸುನ್ನಿ ಉಲ್ಲಾ ಬೋರ್ಡ್

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಸುನ್ನಿ ಉಲ್ಲಾ ಬೋರ್ಡ್​, ಮುಸ್ಲಿಂ ನಾಯಕರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದೆ. ಕಾಂಗ್ರೆಸ್ ಆಯ್ಕೆ ಸಮಿತಿಯಲ್ಲಿ ಒಬ್ಬ ಮುಸ್ಲಿಂ ಮುಖಂಡ ಇಲ್ಲದಿರುವುದು ಬೇಸರ ತರಿಸಿದೆ. ಕೇವಲ 11 ಮುಸ್ಲಿಂ ನಾಯಕರಿಗೆ ಮಾತ್ರ ಟಿಕೆಟ್ ಕೊಟ್ಟಿರುವ ಬಗ್ಗೆ ಅಸಮಾಧಾನ ತಂದಿದೆ. 21 ಮುಸ್ಲಿಂ ನಾಯಕರಿಗೆ ಚುನಾವಣಾ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ. ಟಿಕೆಟ್ ಕೊಡುವುದು ಮಾತ್ರವಲ್ಲ, ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಶ್ರಮಿಸಬೇಕು. ಶಿಗ್ಗಾಂವ್, ಚಿಕ್ಕಪೇಟೆ, ಮಂಗಳೂರು, ದಾವಣಗೆರೆ, ಹುಮುನಬಾದ್​ನಲ್ಲಿ ಮುಸ್ಲಿಂ ಅಭ್ಯರ್ಥಿಯ ಗೆಲುವು ಖಚಿತ. ಆದರೆ ಆ ಕ್ಷೇತ್ರದಲ್ಲಿ ಮುಸ್ಲಿಂರಿಗೆ ಟಿಕೆಟ್ ನೀಡಿಲ್ಲ. ಕೆಜಿಎಫ್ ಬಾಬುಗೆ ಯಾಕೆ ಟಿಕೆಟ್ ನೀಡಿಲ್ಲ? ಚಿಕ್ಕಪೇಟೆಯಲ್ಲಿ ಕೆಜಿಎಫ್ ಬಾಬುಗೆ ಟಿಕೆಟ್ ನೀಡಬೇಕು. ಕ್ಷೇತ್ರದ ಅಭಿವೃದ್ಧಿಗೆ ಕೋಟ್ಯಾಂತರ ರೂ. ಖರ್ಚು ಮಾಡುತ್ತಿದ್ದಾರೆ. ಮುಸ್ಲಿಮರು ಕೇವಲ ಮತ ಹಾಕಲು ಇರೋದಾ? ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೇವಲ‌ ಮುಸ್ಲಿಂರನ್ನು ವೋಟ್ ಬ್ಯಾಂಕ್ ಆಗಿ ಬಳಸುತ್ತಿದೆ ಎಂದು ಆಕ್ರೋಶ ಹೊರಹಾಕಿದೆ.

  • 09 Apr 2023 02:36 PM (IST)

    Karnataka Election Live: ಡಿಕೆ ಶಿವಕುಮಾರ್, ಕುಮಾರಸ್ವಾಮಿ ಸಣ್ಣ ಮನಸಿನ ನಾಯಕರು: ರವಿ ಕುಮಾರ್

    ಬೆಂಗಳೂರು: ಬಂಡೀಪುರ ಅಭಯಾರಣ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿರುವುದು ಇಡೀ ದೇಶದ ಜನತೆಗೆ ಖುಷಿ ತಂದಿದೆ. ಆದರೆ ಡಿಕೆ ಶಿವಕುಮಾರ್ ಮತ್ತು ಹೆಚ್​​ಡಿ ಕುಮಾರಸ್ವಾಮಿ ಖಂಡಿಸುತ್ತಿದ್ದಾರೆ. ಇವರಿಬ್ಬರೂ ಸಣ್ಣ ಮನಸಿನ ನಾಯಕರು ಎಂದು ಬಿಜೆಪಿ ಎಂಎಲ್​ಸಿ ಎನ್.ರವಿಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಣ್ಣ ಮನಸಿನ ನಾಯಕರು ಯಾವತ್ತೂ ದೊಡ್ಡವರಾಗಲ್ಲ ಎಂದರು. ಹುಲಿಗಳ ಸಂಖ್ಯೆ ಕಡಿಮೆ ಆಗ್ತಿತ್ತು. ಹುಲಿಗಳ ಸಂರಕ್ಷಣೆಗೆ ಮಧ್ಯಪ್ರದೇಶದಲ್ಲಿ ಹುಲಿ ಸಂರಕ್ಷಣೆ ಯೋಜನೆಯನ್ನು ಕೇಂದ್ರ ತಂದಿತು. ಹುಲಿಗಳ ಸಂತತಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಜಗತ್ತಿಗೆ ಗೊತ್ತಾಗುತ್ತಿದೆ. ವನ್ಯಜೀವಿಗಳ ರಕ್ಷಣೆಯಲ್ಲಿ ಪ್ರಧಾ‌ನಿಗಳ ಕಾಳಜಿ ಮೆಚ್ಚುವಂತಹದ್ದು ಎಂದರು.

  • 09 Apr 2023 02:33 PM (IST)

    Karnataka Election Live: ನೀತಿ ಸಂಹಿತೆ ಜಾರಿ ಹಿನ್ನೆಲೆ ಮಹಾರಾಷ್ಟ್ರದಲ್ಲಿ ರಮೇಶ್ ಜಾರಕಿಹೊಳಿ ಸಭೆ

    ಬೆಳಗಾವಿ: ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಮಹಾರಾಷ್ಟ್ರದ ಗಡಿ ಗ್ರಾಮದಲ್ಲಿ ಸಭೆ ನಡೆಸುತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಬಲಿಗರ ಜತೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲೂಕಿನ ಶಿನೋಳಿ ಗ್ರಾಮದ ಖಾಸಗಿ ಕಾರ್ಖಾನೆಯ ಕಟ್ಟಡದಲ್ಲಿ ಜಾರಕಿಹೊಳಿ ಸಭೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಆಗಮಿಸುತ್ತಿದ್ದಂತೆ ಗೇಟ್ ಮೇಲೆ ಹತ್ತಿದ ಬೆಂಬಿಗರು ವಿಡಿಯೋ ಚಿತ್ರೀಕರಣಕ್ಕೆ ಅಡ್ಡಿ ಪಡಿಸಿದರು. ಬಳಿಕ ಮಾಧ್ಯಮಗಳನ್ನು ಕಂಡು ಹೊರಗೆ ಬಂದ ರಮೇಶ್ ಜಾರಕಿಹೊಳಿ, ನಾಗೇಶ್ ಮನ್ನೋಳಕರ್ ಸಂಬಂಧಿ ಕಾರ್ಖಾನೆಯ ಪೂಜೆಗೆ ಆಗಮಿಸಿದ್ದಾಗಿ ಸಬೂಬು ನೀಡಿದರು.

  • 09 Apr 2023 02:28 PM (IST)

    Karnataka Election Live: ಮಾಜಿ ಶಾಸಕ ಕೆ.ಎನ್ ರಾಜಣ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

    ತುಮಕೂರು: ನೀತಿ ಸಂಹಿತಿ ಉಲ್ಲಂಘನೆ ಆರೋಪ ಸಂಬಂಧ ಮಾಜಿ ಶಾಸಕ ಕೆ.ಎನ್ ರಾಜಣ್ಣ ವಿರುದ್ಧ ಜೆಡಿಎಸ್, ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಚುನಾವಣಾ ಪ್ರಚಾರಕ್ಕೆ ಡಿಸಿಸಿ ಬ್ಯಾಂಕ್ ನೌಕರರ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ರಾಜ್ಯ ವಕ್ತಾರ ಪ್ರದೀಪ್ ಕುಮಾರ್ ಈ ದೂರನ್ನು ನೀಡಿದ್ದಾರೆ. ಅಲ್ಲದೆ, ಡಿಸಿಸಿ ಬ್ಯಾಂಕ್ ಜಿಲ್ಲಾಧ್ಯಕ್ಷರಾಗಿರುವ ಕೆ.ಎನ್ ರಾಜಣ್ಣ ತಮ್ಮ ಅಧಿಕಾರವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಡಿಸಿಸಿ ಬ್ಯಾಂಕ್ ಸಿಬ್ಬಂದಿಗಳು ಪ್ರಚಾರ ನಡೆಸುತ್ತಿರುವ ಪೋಟೋ, ವಿಡಿಯೋ ವೈರಲ್ ಹಿನ್ನೆಲೆ ದೂರು ನೀಡಿದ್ದಾರೆ.

  • 09 Apr 2023 02:22 PM (IST)

    Karnataka Election Live: ಕಾಂಗ್ರೆಸ್​ನಲ್ಲಿ ಚುನಾವಣೆಗೂ‌ ಮುನ್ನ ಸಿಎಂ ಘೋಷಣೆ ಇಲ್ಲ: ಶಶಿ ತರೂರ್

    ಬೆಂಗಳೂರು: ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಬಯಸಿದರೆ ಮುಖ್ಯಮಂತ್ರಿ ಸ್ಥಾನ ಬಿಡುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಶಶಿ ತರೂರ್, ಕಾಂಗ್ರೆಸ್​ನಲ್ಲಿ ಚುನಾವಣೆಗೂ‌ ಮುನ್ನ ಸಿಎಂ ಘೋಷಣೆ ಮಾಡುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಪೂರ್ಣ ಬೆಂಬಲವಿದೆ. ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಪ್ರಕ್ರಿಯೆ ಇದೆ. ರಾಜ್ಯದಲ್ಲಿ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಮೊದಲ ಗುರಿ. ನಂತರ ಶಾಸಕರ ಅಭಿಪ್ರಾಯ ಪರಿಗಣಿಸಿ ಸಿಎಂ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಈ ಹೇಳಿಕೆ ನೀಡಿದ್ದಾರೆ.

  • 09 Apr 2023 02:00 PM (IST)

    ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ ಮುಖಂಡರು

    ಬಳ್ಳಾರಿ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ರೆಡ್ಡಿ ಜಿಲ್ಲೆಯಲ್ಲಿ  ಆಪರೇಷನ್ ಕಾಂಗ್ರೆಸ್ ಶುರು ಮಾಡಿದ್ದಾರೆ. ಮಾಜಿ ಸದಸ್ಯೆ ಪರ್ವಿನ್ ಬಾನು. ಕಾಂಗ್ರೆಸ್ ಮುಖಂಡರಾದ ಶಾಸಾಬ್, ವಿ.ಎಸ್. ಮರಿದೇವಯ್ಯ, ರಾಮುಡು ಕೆಆರ್ ಪಿ ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.  ಜೊತೆಗೆ  ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕ್ಷಾಂಕಿಯಾಗಿದ್ದ ಮಾಜಿ ಮೇಯರ್ ವೆಂಕಟರಮಣ ಅವರು ಕೂಡ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಸಮ್ಮುಖದಲ್ಲಿ ಕೆಆರ್​ಪಿಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ

  • 09 Apr 2023 01:27 PM (IST)

    ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ, ಮಹಾರಾಷ್ಟ್ರದ ಗಡಿ ಗ್ರಾಮದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಸಭೆ

    ಬೆಳಗಾವಿ: ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ, ಮಹಾರಾಷ್ಟ್ರದ ಗಡಿ ಗ್ರಾಮದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಬಲಿಗರ ಜತೆ ಶಾಸಕ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ದಾರೆ. ಮಹಾರಾಷ್ಟ್ರದ  ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ  ಶಿನೋಳಿ ಗ್ರಾಮದ ಖಾಸಗಿ ಕಾರ್ಖಾನೆಯ ಕಟ್ಟಡದಲ್ಲಿ ಮಾಧ್ಯಮದವರನ್ನು ಹೊರಗಿಟ್ಟು ಮೀಟಿಂಗ್ ನಡೆಸಿದ್ದಾರೆ. ಹೌದು ರಮೇಶ್ ಜಾರಕಿಹೊಳಿ ಆಗಮಿಸುತ್ತಿದ್ದಂತೆ ಚಿತ್ರೀಕರಣಕ್ಕೆ ಬೆಂಬಲಿಗರ ಅಡ್ಡಿಪಡಿಸಿದ್ದು, ಬಳಿಕ ಮಾಧ್ಯಮಗಳನ್ನು ಕಂಡು ಹೊರಗೆ ಬಂದ ರಮೇಶ್ ಜಾರಕಿಹೊಳಿ, ನಾಗೇಶ್ ಮನ್ನೋಳಕರ್ ಸಂಬಂಧಿ ಕಾರ್ಖಾನೆಯ ಪೂಜೆಗೆ ಆಗಮಿಸಿದ್ದಾಗಿ ಸಬೂಬು ನೀಡಿದ್ದಾರೆ.

  • 09 Apr 2023 01:27 PM (IST)

    PM Modi Mysore Visit: ವನ್ಯಜೀವಿಗಳ ಸಂರಕ್ಷಣೆ ಅತಿ ಮುಖ್ಯ

    ಭಾರತದಲ್ಲಿ ಚೀತಾಗಳ ಸಂತತಿ ನಶಿಸಿ ಹೋಗಿತ್ತು. ನಾವು ದಕ್ಷಿಣ ಆಪ್ರಿಕಾದಿಂದ ಚೀತಾಗಳನ್ನು ತಂದು, ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಟ್ಟಿದ್ದೇವೆ. ಈಗ ಅವುಗಳ ಸಂತತಿ ಬೆಳೆಯುತ್ತಿದೆ. ವನ್ಯಜೀವಿಗಳ ಸಂರಕ್ಷಣೆ ಅತಿ ಮುಖ್ಯವಾಗಿದೆ.

  • 09 Apr 2023 01:18 PM (IST)

    ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಸಚಿವ ಸಿ.ಎನ್​.ಅಶ್ವತ್ಥ್​ ನಾರಾಯಣ

    ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ‘ನಾಳೆ(ಏ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಹಾಗೂ ಏಪ್ರಿಲ್ 13ರಂದು ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ಸಚಿವ ಸಿ.ಎನ್​.ಅಶ್ವತ್ಥ್​ ನಾರಾಯಣ ಹೇಳಿದ್ದಾರೆ. ಇನ್ನು ಇದೇ ವೇಳೆ ಹೊಸಬರಿಗೆ ಹೆಚ್ಚು ಟಿಕೆಟ್ ಸಿಗಲಿದ್ಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಕಾದು ನೋಡಿ ಎಂದಿದ್ದಾರೆ.

  • 09 Apr 2023 12:48 PM (IST)

    ಮೋದಿ ಸಫಾರಿ ಬಗ್ಗೆ ಹೆಚ್​ಡಿಕೆ ವ್ಯಂಗ್ಯ ವಿಚಾರ; ಸಚಿವ ಡಾ.ಅಶ್ವತ್ಥ್​ ನಾರಾಯಣ ತಿರುಗೇಟು

    ಬಂಡೀಪುರ ಮೋದಿ ಸಫಾರಿ ಬಗ್ಗೆ ಹೆಚ್​ಡಿಕೆ ವ್ಯಂಗ್ಯ ವಿಚಾರವಾಗಿ ‘ಅರಣ್ಯ ವೀಕ್ಷಣೆಗೆ ಹೋದಾಗ ಯಾವ ರೀತಿಯ ಡ್ರೆಸ್ ಹಾಕಬೇಕು, ನಾಡಿಗೆ ಬಂದಾಗ ಯಾವ ಬಟ್ಟೆ ಧರಿಸಬೇಕೆಂಬುದು ಗೊತ್ತಿರಬೇಕು. ಆದರೆ ಕುಮಾರಸ್ವಾಮಿಗೆ ಇವರೆಡೂ ಗೊತ್ತಿಲ್ಲ. ಪ್ರಧಾನಿ ಮೋದಿ ಯಾವ ಸ್ಥಳ, ಪ್ರದೇಶಕ್ಕೆ ಭೇಟಿ ನೀಡುತ್ತಾರೋ, ಆ ಸ್ಥಳಕ್ಕೆ ಸೂಕ್ತವಾಗುವಂತಹ ಬಟ್ಟೆಯನ್ನು ಮೋದಿ ಧರಿಸುತ್ತಾರೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಡಾ.ಅಶ್ವತ್ಥ್​ ನಾರಾಯಣ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ  ‘ಇಡೀ ವಿಶ್ವವನ್ನೇ ನಾವು ಪ್ರತಿನಿಧಿಸುತ್ತಿದ್ದೇವೆ. 140 ಕೋಟಿ ಜನಕ್ಕೆ ನಾಯಕ ಅವರು ಎಂದರು.

  • 09 Apr 2023 11:50 AM (IST)

    ಪ್ರಧಾನಿ ಮೋದಿಯವರೇ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಸಿದ್ದರಾಮಯ್ಯ ಟ್ವೀಟ್​

    ಪ್ರಧಾನಿ ನರೇಂದ್ರ ಮೋದಿಯವರೇ ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ?  ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್ ನದ್ದು. ಬಂದರು, ಏರ್ ಪೋರ್ಟ್ ನುಂಗಿದ ಅದಾನಿ ಗುಜರಾತ್ ನವರು. ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್ ನದ್ದು. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ ನರೇಂದ್ರ ಮೋದಿಯವರೇ?. ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆಎಂಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ ಹೈನುಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ ಎಂದು ಮೋದಿ ವಿರುದ್ದ ಟ್ವೀಟ್​ ಮೂಲಕ ಸಿದ್ದರಾಮಯ್ಯ ಕೀಡಿಕಾರಿದ್ದಾರೆ.

  • 09 Apr 2023 11:20 AM (IST)

    ಬಂಡೀಪುರ ಫಾರೆಸ್ಟ್​ ಮೋದಿ ಭೇಟಿಗೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ

    ಬೆಂಗಳೂರು: ಪ್ರಧಾನಿ ಮೋದಿ ಬಂಡೀಪುರ ಫಾರೆಸ್ಟ್ ಸಫಾರಿ ಹಿನ್ನೆಲೆ  ‘ವನ್ಯಜೀವಿ ನೋಡಲು ಬಂದ ತಕ್ಷಣ ಜನ ಇವರಿಗೆ ಓಟು ಒತ್ತು ಬಿಡ್ತಾರ.  ಪ್ರವಾಹ ಬಂದಾಗ, ಕೋವಿಡ್ ಅನಾಹುತದಿಂದ ಜನ ಬೀದಿಗೆ ಬಂದಾಗ ಬರಲಿಲ್ಲ. ಇವತ್ತು ಸಫಾರಿ ಹಾಕೊಂಡು ಸಫಾರಿ ಮಾಡಲು ಬಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಕಿಡೀಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ವನ್ಯಜೀವಿಗಳನ್ನ ರಕ್ಷಣೆ ಮಾಡಬೇಕು ನಿಜ, ಆದರೆ ಮಾನವರ ರಕ್ಷಣೆಯನ್ನು ಮಾಡಬೇಕಲ್ವ, ವನ್ಯಜೀವಿಗಳಿಂದ ಎಷ್ಟು ದಾಳಿ ಆಗಿದೆ, ಎಷ್ಟು ಜೀವ ಹಾನಿ ಆಗಿದೆ. ಯಾವುದಾದರೂ ಒಂದು ಕುಟುಂಬಕ್ಕೆ ಭೇಟಿ ಕೊಟ್ಟಿದ್ದಾರಾ. ವನ್ಯಜೀವಿ ದಾಳಿಗೆ ಒಳಗಾದ ಕುಟುಂಬ ಪರಿಸ್ಥಿತಿ ಏನಾಗಿದೆ‌?, ಕೂಲಿಂಗ್ ಗ್ಲಾಸ್ , ಸೂಟು ಬೂಟು ಹಾಕೊಂಡು ಬಂದ್ರೆ ಆಗುತ್ತಾ. ಅರಣ್ಯ ಭಾಗದಲ್ಲಿ ಪೌಷ್ಟಿಕಾಂಶ, ಆಹಾರದ ಕೊರತೆ ಇದೆ ಅಂತ ವರದಿ ನೀಡಿದ್ದಾರೆ. ಅದರ ಬಗ್ಗೆ ಇವರಿಗೆ ಗಮನ ಹರಿಸಲು ಆಗಲ್ಲ. ನಾಡಿನ ಜನತೆ ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಧಾನಿ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

  • 09 Apr 2023 11:09 AM (IST)

    ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಡಿ.ಕೆ.ಶಿವಕುಮಾರ್​ ಕಿಡಿ

    ಬೆಂಗಳೂರು: ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಡಿ.ಕೆ.ಶಿವಕುಮಾರ್​ ಕಿಡಿಕಾರಿದ್ದು, ‘ಚುನಾವಣೆ ಇದೆ ಎಂದು ಪದೇ ಪದೇ ನೆಪ ಮಾಡಿಕೊಂಡು ಪ್ರಧಾನಿ ಮೋದಿ ಬರುತ್ತಿದ್ದಾರೆ, ಬರಲಿ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ‘ಮೋದಿ ಸರ್ ಪ್ರಜಾಪ್ರಭುತ್ವ ನಮ್ಮಿಂದನೇ ಬಂತು ಅಂತ ಹೇಳ್ತಾರೆ, ಅರವತ್ತು ವರ್ಷದಲ್ಲಿ ಕಾಂಗ್ರೆಸ್‌ ಕೊಡುಗೆ ತೆಗೆದುಹಾಕೋದು ಅವರ ಉದ್ದೇಶವಾಗಿದೆ. ಹಲವು ಯೋಜನೆಗಳ ಹೆಸರನ್ನೇ ಬದಲಾಯಿಸಿದ್ದಾರೆ. ಕಾಡಿಗೆ ಅವರು ಹುಲಿಯನ್ನಾದರೂ ಬಿಡಲಿ, ಸಿಂಹವಾದರೂ ಬಿಡಲಿ ಎನ್ನುವ ಮೂಲಕ ಪ್ರಧಾನಿ ವಿರುದ್ದ ವಾಗ್ಧಾಳಿ ನಡೆಸಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ ಮೂರನೇ ಪಟ್ಟಿ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು‘ ಬಿಜೆಪಿಯವರ ಪಟ್ಟಿ ಮೊದಲು ರಿಲೀಸ್ ಆಗಲಿ, ಅವರನ್ನು ಕೇಳಿ ಯಾವಾಗ ಪಟ್ಟಿ ಪ್ರಕಟ ಅಂತ? ಅವರ ಪಟ್ಟಿ ಬಂದ ಮೇಲೆ ನೋಡೋಣ ಎಂದರು

  • 09 Apr 2023 10:37 AM (IST)

    Karnataka Election Live: ಪ್ರಚಾರಕ್ಕೆ ತೆರಳಿದ್ದ ಶಾಸಕನನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಕೊಪ್ಪಳ: ಪ್ರಚಾರಕ್ಕೆ ತೆರಳಿದ್ದ ಶಾಸಕ ರಾಘವೇಂದ್ರ ಹಿಟ್ನಾಳ್​​ರನ್ನು ಕೊಪ್ಪಳ ತಾಲೂಕಿನ ಬಹದ್ದೂರಬಂಡಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಚುನಾವಣೆ ಪ್ರಚಾರಕ್ಕೆಂದು ಶಾಸಕ ರಾಘವೇಂದ್ರ ಹಿಟ್ನಾಳ್ ಬಹದ್ದೂರಬಂಡಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಶಾಸಕರ ಕಾರನ್ನು ಅಡ್ಡಗಟ್ಟಿ ಗ್ರಾಮಸ್ಥರು, ನೀವು ಎಂಎಲ್​​ಎ ಆಗಿ 10 ವರ್ಷ ಆಯಿತು. ಕೇವಲ‌ ಚುನಾವಣೆ ಇದ್ದಾಗ ಮಾತ್ರ ನಮ್ಮ ಊರಿಗೆ ಬರುತ್ತೀರಿ‌. ನಮ್ಮ ಊರಿಗೆ ಏನು ಮಾಡಿದ್ದೀರಿ. ಗಟಾರು, ಕುಡಿಯಲು ನೀರು ಯಾವುದೇ ಮೂಲಸೌಕರ್ಯ ಇಲ್ಲ. ದನ-ಕರುಗಳು ಸಾಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • Published On - Apr 09,2023 10:32 AM

    Follow us
    ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
    ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
    ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
    ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
    20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
    20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
    ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
    ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
    ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
    ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
    ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
    ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
    ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
    ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
    ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
    ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
    ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
    ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
    ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
    ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ