AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ದಾವಣಗೆರೆಯಲ್ಲಿ ಒಂದೇ ಕ್ಷೇತ್ರಕ್ಕೆ ದಂಪತಿ ನಾಮಪತ್ರ ಸಲ್ಲಿಕೆ

ದಾವಣಗೆರೆ ಜಿಲ್ಲೆಯ ಜಗಳೂರು ಎಸ್ಟಿ ಮೀಸಲು‌ ಕ್ಷೇತ್ರದಲ್ಲಿ ದಂಪತಿ ನಾಮಪತ್ರ ಸಲ್ಲಿಸಿದ್ದಾರೆ. ಜಗಳೂರಿನ ಎಸ್ಟಿ ಮೀಸಲು‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್ ವಿ ರಾಮಚಂದ್ರ ಮತ್ತು ಪತ್ನಿ ಇಂದಿರಾ ಎಸ್ ಆರ್ ನಾಮಪತ್ರ ಸಲ್ಲಿಸಿದ್ದಾರೆ.

Karnataka Assembly Election 2023: ದಾವಣಗೆರೆಯಲ್ಲಿ ಒಂದೇ ಕ್ಷೇತ್ರಕ್ಕೆ ದಂಪತಿ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಸಿದ ದಂಪತಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 18, 2023 | 10:57 AM

Share

ದಾವಣಗೆರೆ: ಚುನಾವಣೆ ಸಮಯದಲ್ಲಿ ಅನೇಕ ಅಚ್ಚರಿ ಸಂಗತಿಗಳು ನಡೆಯುತ್ತಿರುತ್ತವೆ. ಅದೇ ರೀತಿಯಾಗಿ ದಾವಣಗೆರೆ (Davangere) ಜಿಲ್ಲೆಯ ಜಗಳೂರು (Jagaluru) ಎಸ್ಟಿ ಮೀಸಲು‌ ಕ್ಷೇತ್ರದಲ್ಲಿ ದಂಪತಿ ನಾಮಪತ್ರ ಸಲ್ಲಿಸಿದ್ದಾರೆ. ಹೌದು ಜಗಳೂರಿನ ಎಸ್ಟಿ ಮೀಸಲು‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್ ವಿ ರಾಮಚಂದ್ರ (SV Ramchandra) ಮತ್ತು ಪತ್ನಿ ಇಂದಿರಾ ಎಸ್ ಆರ್ ನಾಮಪತ್ರ ಸಲ್ಲಿಸಿದ್ದಾರೆ. ಮತ್ತು ಈ ರೀತಿಯಾಗಿ ನಾಮಪತ್ರ ಸಲ್ಲಿಸುತ್ತಿರುವುದು ಇದೇ ಮೊದಲ ಬಾರಿಗೆ ಏನಲ್ಲ, ಕಳೆದ ನಾಲ್ಕು ಚುನಾವಣೆಯಲ್ಲೂ ಕೂಡ ದಂಪತಿ ನಾಮಪತ್ರ ಸಲ್ಲಿಸಿದ್ದರು. ಕೊನೆಯ ಕ್ಷಣದಲ್ಲಿ ತಮ್ಮ ನಾಮಪತ್ರದಲ್ಲಿ ಎನಾದರೂ ಗೊಂದಲವಾದರೇ ಪತ್ನಿಯಾದರೂ ಕಣದಲ್ಲಿ ಇರುತ್ತಾರೆ ಎಂಬ ಉದ್ದೇಶದ ಶಾಸಕ ರಾಮಚಂದ್ರ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಶಾಸಕ ರಾಮಚಂದ್ರ ಅವರು ನಾಲ್ಕು ಚುನಾವಣೆಯಲ್ಲಿ 3ರಲ್ಲಿ ಗೆದ್ದಿದ್ದು,‌ ಈಗ 5ನೇ ಸಲ ‌ಕಣದಲ್ಲಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ವಿರುದ್ಧ ಪಕ್ಷೇತರ ಅಭ್ಯರ್ಥಿ ಕಣಕ್ಕೆ, ಇದು ಅವರ 234ನೇ ಚುನಾವಣೆ

ಪರಸ್ಪರ ಶಕ್ತಿ‌ ಪ್ರದರ್ಶನಕ್ಕೆ ಮುಂದಾದ ಅಕ್ಕ-ತಂಗಿ

ವಿಜಯನಗರ: ಕಾಂಗ್ರೆಸ್​ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಕ್ಕ-ತಂಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಪರಸ್ಪರ ಶಕ್ತಿ‌ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಮಾಜಿ ಡಿಸಿಎಂ ದಿವಂಗತ ಎಂಪಿ‌ ಪ್ರಕಾಶ ಪುತ್ರಿಯರಾದ ಎಂಪಿ‌ ಲತಾ ಮಲ್ಲಿಕಾರ್ಜುನ ಹಾಗೂ ಎಂಪಿ ವೀಣಾ ಮಹಾಂತೇಶ ಚುನಾವಣಾ ಅಖಾಡಕ್ಕೆ ದುಮುಖಿದ್ದಾರೆ.

ಎಂಪಿ‌ ಲತಾ ಮಲ್ಲಿಕಾರ್ಜುನ ಹಾಗೂ ಎಂಪಿ ವೀಣಾ ಮಹಾಂತೇಶ ಅವರು ವಿಜಯನಗರ ಜಿಲ್ಲೆಯ‌ ಹರಪನಹಳ್ಳಿ ‌ವಿಧಾನ ಸಭಾ ಕ್ಷೇತ್ರದ‌ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಇವರಿಗೆ ಟಿಕೆಟ್​ ಕೈ ತಪ್ಪಿದ್ದು, ಎನ್ ಕೊಟ್ರೇಶ್ ಎಂಬುವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದು, ಮೊದಲು ಎಂಪಿ ‌‌‌ಪ್ರಕಾಶ ಕಿರಿಯ‌ ಮಗಳು ಎಂಪಿ‌. ವೀಣಾ ನಂತರ ಹಿರಿಯ‌ ಮಗಳು ಎಂಪಿ‌ ಲತಾ ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ